ಉಪ್ಪಿನಂಗಡಿ: ಗೂಗಲ್ ಮ್ಯಾಪ್ ಎಡವಟ್ಟು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಕಾರು ಸೇರಿದ್ದು ತುಂಬಿ ಹರಿಯುತ್ತಿದ್ದ ಹೊಳೆಗೆ

ಗೊತ್ತಿಲ್ಲದ ಸ್ಥಳಗಳಿಗೆ ಪ್ರಯಾಣಿಸುವಾಗ ಹೆಚ್ಚಿನವರು ಗೂಗಲ್‌ ಮ್ಯಾಪ್‌ ನೋಡಿಕೊಂಡು ಪ್ರಯಾಣಿಸುತ್ತಾರೆ. ಕೆಲವೊಮ್ಮೆ ಈ ಗೂಗಲ್‌ ಮ್ಯಾಪ್‌ ನಂಬಿ ಎಡವಟ್ಟುಗಳಾಗುತ್ತಿರುತ್ತವೆ. ಅದೇ ರೀತಿಯ ಆಘಾತಕಾರಿ ಘಟನೆಯೊಂದು ಇದೀಗ ನಡೆದಿದ್ದು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಯುವಕರು ಗೂಗಲ್‌ ಮ್ಯಾಪ್‌ ನಂಬಿ ಕಾರನ್ನು ಸೀದಾ ಹೊಳೆಗೆ ಇಳಿಸಿದ್ದಾರೆ. ಅದೃಷ್ಟವಶಾತ್‌ ಈ ಇಬ್ಬರೂ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉಪ್ಪಿನಂಗಡಿ: ಗೂಗಲ್ ಮ್ಯಾಪ್ ಎಡವಟ್ಟು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಕಾರು ಸೇರಿದ್ದು ತುಂಬಿ ಹರಿಯುತ್ತಿದ್ದ ಹೊಳೆಗೆ
ವೈರಲ್ ಸುದ್ದಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 01, 2024 | 5:33 PM

ಈ ಡಿಜಿಟಲ್‌ ಯುಗದಲ್ಲಿ ದಾರಿ ಗೊತ್ತಾಗದಿದ್ದರೆ ಗೂಗಲ್‌ ಮ್ಯಾಪ್‌ ಬಳುವುದು ಮಾಮೂಲು. ಈಗಂತೂ ಬಹುತೇಕ ಎಲ್ಲರೂ ಗೂಗಲ್‌ ಮ್ಯಾಪ್‌ ನೋಡಿಕೊಂಡೇ ಗೊತ್ತಿಲ್ಲದ ಸ್ಥಳಗಳಿಗೆ ಬೈಕ್‌, ಕಾರುಗಳಲ್ಲಿ ಪ್ರಯಾಣಿಸುತ್ತಿರುತ್ತಾರೆ. ಆದರೆ ಎಷ್ಟೋ ಸಂದರ್ಭಗಳಲ್ಲಿ ಈ ಮ್ಯಾಪ್‌ ನಮ್ಮನ್ನು ದಾರಿ ತಪ್ಪಿಸುವುದು ಉಂಟು. ಹೌದು ಈ ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಕಾರು ನದಿಗೆ ಬಿದ್ದ, ಹೊಂಡಕ್ಕೆ ಬಿದ್ದ ಘಟನೆಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಯುವಕರು ಗೂಗಲ್‌ ಮ್ಯಾಪ್‌ ನಂಬಿ ಕಾರನ್ನು ಸೀದಾ ಹೊಳೆಗೆ ಇಳಿಸಿದ್ದಾರೆ. ಅದೃಷ್ಟವಶಾತ್‌ ಈ ಇಬ್ಬರೂ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಈ ಬಗ್ಗೆ ಸುದ್ದಿಯೊಂದು ವೈರಲ್​​ ಆಗುತ್ತಿದೆ.

ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ಪಳ್ಳಂಜಿ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಕೇರಳದ ಕಾಸರಗೋಡಿನ ತಸ್ರೀಫ್‌ (36) ಮತ್ತು ಅಬ್ದುಲ್‌ ರಶೀದ್‌ (35) ಎಂಬವರು ಉಪ್ಪಿನಂಗಡಿಯಲ್ಲಿನ ಆಸ್ಪತ್ರೆಗೆ ಹೋಗುತ್ತಿದ್ದ ವೇಳೆ ಅವರು ಗೂಗಲ್‌ ಮ್ಯಾಪ್‌ ನಂಬಿ ಕಾರನ್ನು ತುಂಬಿ ಹರಿಯುತ್ತಿದ್ದ ಹೊಳೆಗೆ ಇಳಿಸಿದ್ದಾರೆ. ಅದೃಷ್ಟವಶಾತ್‌ ಈ ಇಬ್ಬರೂ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಸಮುದ್ರ ಪಾಲಾಗುತ್ತಿದ್ದ ಮಹಿಳೆಯ ಜೀವ ರಕ್ಷಿಸಿದ ಆರಕ್ಷಕರು, ರೋಚಕ ವಿಡಿಯೋ ವೈರಲ್‌

ಗೂಗಲ್‌ ಮ್ಯಾಪ್‌ ಆಧರಿಸಿ ಕಾರು ಚಲಾಯಿಸುತ್ತಿದ್ದ ವೇಳೆ ಪಳ್ಳಂಜಿಯ ಎಂಬಲ್ಲಿನ ಹೊಳೆಯ ಸೇತುವೆ ದಾಟುವಾಗ ಈ ಘಟನೆ ಸಂಭವಿಸಿದೆ. ಜೋರು ಮಳೆಯಿಂದ ಸೇತುವೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ಸೇತುವೆಯ ಎರಡೂ ಬದಿಯಲ್ಲಿ ಯಾವುದೇ ದಂಡೆ ಇಲ್ಲದ ಕಾರಣ, ಕಾರು ಸೀದಾ ಹೋಗಿ ಹೊಳೆಗೆ ಬಿದ್ದಿದೆ. ಕಾರು ತೇಳುತ್ತಾ ಹೋಗಿ ಅಲ್ಲೇ ದಡದಲ್ಲಿದ್ದ ಮರವೊಂದಕ್ಕೆ ಸಿಕ್ಕಿಹಾಕಿಕೊಂಡಿದ್ದು, ಆ ತಕ್ಷಣ ಯುವಕರು ತಮ್ಮ ಸಮಯಪ್ರಜ್ಞೆ ಬಳಸಿ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಆ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಈ ಇಬ್ಬರೂ ಯುವಕರನ್ನು ಬಾರೀ ದೊಡ್ಡ ಅಪಾಯದಿಂದ ಪಾರು ಮಾಡಿದೆ. ಈ ಸುದ್ದಿ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು