AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡವಾಗಿ ಬಂದಿದ್ದಕ್ಕೆ ಬಾಯಿಗೆ ಬಂದಂತೆ ಬೈದ ಮಹಿಳೆ, ಮನನೊಂದು ಆತ್ಮಹತ್ಯೆಗೆ ಶರಣಾದ ಡೆಲಿವರಿ ಬಾಯ್‌

ಪೊಲೀಸರ ಪ್ರಕಾರ ಮೃತನನ್ನು ಜೆ ಪವಿತ್ರನ್ ಎಂದು ಗುರುತಿಸಲಾಗಿದೆ. ಈತ ಬಿಕಾಂ ವಿದ್ಯಾರ್ಥಿಯಾಗಿದ್ದು, ಸಂಜೆಯ ಹೊತ್ತಿನಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ದಿನಸಿ ಸಾಮಾನುಗಳನ್ನು ತಲುಪಿಸಲು ಹೋದಾಗ ಮಹಿಳೆಯೊಬ್ಬರು ತನ್ನನ್ನು ನಿಂದಿಸಿದ್ದರಿಂದ ಮನನೊಂದ ತಾನು ಈ ಕ್ರಮ ಕೈಗೊಂಡಿರುವುದಾಗಿ ಯುವಕ ಡೆತ್​​ ನೋಟ್​ನಲ್ಲಿ ಬರೆದುಕೊಂಡಿದ್ದಾನೆ.

ತಡವಾಗಿ ಬಂದಿದ್ದಕ್ಕೆ ಬಾಯಿಗೆ ಬಂದಂತೆ ಬೈದ ಮಹಿಳೆ, ಮನನೊಂದು ಆತ್ಮಹತ್ಯೆಗೆ ಶರಣಾದ ಡೆಲಿವರಿ ಬಾಯ್‌
ಮಹಿಳೆ ಬೈದಿದ್ದಕ್ಕೆ ಆತ್ಮಹತ್ಯೆಗೆ ಮಾಡಿಕೊಂಡ ಡೆಲಿವರಿ ಬಾಯ್‌
ಅಕ್ಷತಾ ವರ್ಕಾಡಿ
|

Updated on: Sep 19, 2024 | 4:36 PM

Share

ಚೆನ್ನೈ: 19 ವರ್ಷದ ಫುಡ್ ಡೆಲಿವರಿ ಬಾಯ್‌ ಮಂಗಳವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಳತ್ತೂರಿನಲ್ಲಿ ನಡೆದಿದೆ. ಈತ ತಡವಾಗಿ ಡೆಲಿವರಿ ಮಾಡಿದಕ್ಕೆ ಮಹಿಳೆಯೊಬ್ಬಳು ಬಾಯಿಗೆ ಬಂದಂತೆ ಬೈದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವುದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ.

ಕೊಳತ್ತೂರು ಪೊಲೀಸರ ಪ್ರಕಾರ ಮೃತನನ್ನು ಜೆ ಪವಿತ್ರನ್ ಎಂದು ಗುರುತಿಸಲಾಗಿದ್ದು, ಈತ ಬಿಕಾಂ ವಿದ್ಯಾರ್ಥಿಯಾಗಿದ್ದು, ಸಂಜೆಯ ಹೊತ್ತಿನಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ದಿನಸಿ ಸಾಮಾನುಗಳನ್ನು ತಲುಪಿಸಲು ಹೋದಾಗ ಮಹಿಳೆಯೊಬ್ಬರು ತನ್ನನ್ನು ನಿಂದಿಸಿದ್ದರಿಂದ ಮನನೊಂದ ತಾನು ಈ ಕ್ರಮ ಕೈಗೊಂಡಿರುವುದಾಗಿ ಯುವಕ ಡೆತ್​​ ನೋಟ್​ನಲ್ಲಿ ಬರೆದುಕೊಂಡಿದ್ದಾನೆ.

ಮನೆಯ ಅಡ್ರಸ್​​​ ಸಿಗದೇ ಇದ್ದ ಕಾರಣ ದಿನಸಿ ತಲುಪಿಸುವಷ್ಟರಲ್ಲಿ ತಡವಾಯಿತು. ಇದರಿಂದ ಕೋಪಗೊಂಡ ಮಹಿಳೆ ಡೆಲಿವರಿ ಕಂಪನಿಗೆ ದೂರು ನೀಡಿ, ಈ ಯುವಕನನ್ನು ಮತ್ತೆ ಡೆಲಿವರಿಗಾಗಿ ಕಳುಹಿಸಬೇಡಿ ಎಂದು ಕೇಳಿಕೊಂಡಿದ್ದರು. ಕಂಪನಿಯ ಕಡೆಯಿಂದ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನಮಗೆ ತಿಳಿದಿಲ್ಲ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಾರತೀಯ ಮಸಾಲೆ ಕೊಳಕು ಎಂದು ಟೀಕಿಸಿದ ಆಸ್ಟ್ರೇಲಿಯನ್ ಯೂಟ್ಯೂಬರ್

ಎರಡು ದಿನಗಳ ನಂತರ, ಶುಕ್ರವಾರ, ಕೆಲಸ ಕಳೆದುಕೊಂಡ ಯುವಕ ಮಹಿಳೆಯ ಮನೆಗೆ ಕಲ್ಲು ಎಸೆದು ಕಿಟಕಿಯ ಗಾಜನ್ನು ಒಡೆದಿದ್ದಾನೆ. ಈ ಹಿನ್ನೆಲೆಯಲ್ಲಿ ಮಹಿಳೆ ಕೊರಟ್ಟೂರು ಪೊಲೀಸರಿಗೆ ದೂರು ನೀಡಿದ್ದು, ಸಿಎಸ್‌ಆರ್‌ ಜಾರಿ ಮಾಡಲಾಗಿತ್ತು. ಇದಲ್ಲದೇ ಯುವಕನ ಪೋಷಕರಿಗೆ ಕರೆ ಮಾಡಿ ಎಚ್ಚರಿಕೆ ನೀಡಿ ಬಿಡಲಾಗಿತ್ತು. ಇದರಿಂದ ಮನನೊಂದ ಯುವಕ ಮಂಗಳವಾರ ತನ್ನ ಮನೆಯಲ್ಲಿ ಡೆತ್​ನೋಟ್​​​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ