ತಡವಾಗಿ ಬಂದಿದ್ದಕ್ಕೆ ಬಾಯಿಗೆ ಬಂದಂತೆ ಬೈದ ಮಹಿಳೆ, ಮನನೊಂದು ಆತ್ಮಹತ್ಯೆಗೆ ಶರಣಾದ ಡೆಲಿವರಿ ಬಾಯ್‌

|

Updated on: Sep 19, 2024 | 4:36 PM

ಪೊಲೀಸರ ಪ್ರಕಾರ ಮೃತನನ್ನು ಜೆ ಪವಿತ್ರನ್ ಎಂದು ಗುರುತಿಸಲಾಗಿದೆ. ಈತ ಬಿಕಾಂ ವಿದ್ಯಾರ್ಥಿಯಾಗಿದ್ದು, ಸಂಜೆಯ ಹೊತ್ತಿನಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ದಿನಸಿ ಸಾಮಾನುಗಳನ್ನು ತಲುಪಿಸಲು ಹೋದಾಗ ಮಹಿಳೆಯೊಬ್ಬರು ತನ್ನನ್ನು ನಿಂದಿಸಿದ್ದರಿಂದ ಮನನೊಂದ ತಾನು ಈ ಕ್ರಮ ಕೈಗೊಂಡಿರುವುದಾಗಿ ಯುವಕ ಡೆತ್​​ ನೋಟ್​ನಲ್ಲಿ ಬರೆದುಕೊಂಡಿದ್ದಾನೆ.

ತಡವಾಗಿ ಬಂದಿದ್ದಕ್ಕೆ ಬಾಯಿಗೆ ಬಂದಂತೆ ಬೈದ ಮಹಿಳೆ, ಮನನೊಂದು ಆತ್ಮಹತ್ಯೆಗೆ ಶರಣಾದ ಡೆಲಿವರಿ ಬಾಯ್‌
ಮಹಿಳೆ ಬೈದಿದ್ದಕ್ಕೆ ಆತ್ಮಹತ್ಯೆಗೆ ಮಾಡಿಕೊಂಡ ಡೆಲಿವರಿ ಬಾಯ್‌
Follow us on

ಚೆನ್ನೈ: 19 ವರ್ಷದ ಫುಡ್ ಡೆಲಿವರಿ ಬಾಯ್‌ ಮಂಗಳವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಳತ್ತೂರಿನಲ್ಲಿ ನಡೆದಿದೆ. ಈತ ತಡವಾಗಿ ಡೆಲಿವರಿ ಮಾಡಿದಕ್ಕೆ ಮಹಿಳೆಯೊಬ್ಬಳು ಬಾಯಿಗೆ ಬಂದಂತೆ ಬೈದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವುದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ.

ಕೊಳತ್ತೂರು ಪೊಲೀಸರ ಪ್ರಕಾರ ಮೃತನನ್ನು ಜೆ ಪವಿತ್ರನ್ ಎಂದು ಗುರುತಿಸಲಾಗಿದ್ದು, ಈತ ಬಿಕಾಂ ವಿದ್ಯಾರ್ಥಿಯಾಗಿದ್ದು, ಸಂಜೆಯ ಹೊತ್ತಿನಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ದಿನಸಿ ಸಾಮಾನುಗಳನ್ನು ತಲುಪಿಸಲು ಹೋದಾಗ ಮಹಿಳೆಯೊಬ್ಬರು ತನ್ನನ್ನು ನಿಂದಿಸಿದ್ದರಿಂದ ಮನನೊಂದ ತಾನು ಈ ಕ್ರಮ ಕೈಗೊಂಡಿರುವುದಾಗಿ ಯುವಕ ಡೆತ್​​ ನೋಟ್​ನಲ್ಲಿ ಬರೆದುಕೊಂಡಿದ್ದಾನೆ.

ಮನೆಯ ಅಡ್ರಸ್​​​ ಸಿಗದೇ ಇದ್ದ ಕಾರಣ ದಿನಸಿ ತಲುಪಿಸುವಷ್ಟರಲ್ಲಿ ತಡವಾಯಿತು. ಇದರಿಂದ ಕೋಪಗೊಂಡ ಮಹಿಳೆ ಡೆಲಿವರಿ ಕಂಪನಿಗೆ ದೂರು ನೀಡಿ, ಈ ಯುವಕನನ್ನು ಮತ್ತೆ ಡೆಲಿವರಿಗಾಗಿ ಕಳುಹಿಸಬೇಡಿ ಎಂದು ಕೇಳಿಕೊಂಡಿದ್ದರು. ಕಂಪನಿಯ ಕಡೆಯಿಂದ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನಮಗೆ ತಿಳಿದಿಲ್ಲ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಾರತೀಯ ಮಸಾಲೆ ಕೊಳಕು ಎಂದು ಟೀಕಿಸಿದ ಆಸ್ಟ್ರೇಲಿಯನ್ ಯೂಟ್ಯೂಬರ್

ಎರಡು ದಿನಗಳ ನಂತರ, ಶುಕ್ರವಾರ, ಕೆಲಸ ಕಳೆದುಕೊಂಡ ಯುವಕ ಮಹಿಳೆಯ ಮನೆಗೆ ಕಲ್ಲು ಎಸೆದು ಕಿಟಕಿಯ ಗಾಜನ್ನು ಒಡೆದಿದ್ದಾನೆ. ಈ ಹಿನ್ನೆಲೆಯಲ್ಲಿ ಮಹಿಳೆ ಕೊರಟ್ಟೂರು ಪೊಲೀಸರಿಗೆ ದೂರು ನೀಡಿದ್ದು, ಸಿಎಸ್‌ಆರ್‌ ಜಾರಿ ಮಾಡಲಾಗಿತ್ತು. ಇದಲ್ಲದೇ ಯುವಕನ ಪೋಷಕರಿಗೆ ಕರೆ ಮಾಡಿ ಎಚ್ಚರಿಕೆ ನೀಡಿ ಬಿಡಲಾಗಿತ್ತು. ಇದರಿಂದ ಮನನೊಂದ ಯುವಕ ಮಂಗಳವಾರ ತನ್ನ ಮನೆಯಲ್ಲಿ ಡೆತ್​ನೋಟ್​​​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ