AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪ್ರೇಮಿಗಳ ಜಗಳ ಬಿಡಿಸಲು ಹೋಗಿ ತಾನೇ ಜಗಳಕ್ಕೆ ನಿಂತ ಫುಡ್ ಡೆಲಿವರಿ ಬಾಯ್; ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್

Viral Video: ಜಗಳ ಬಿಡಿಸಲು ಹೋದ ವ್ಯಕ್ತಿಯೊಬ್ಬ ತಾನೇ ಜಗಳಕ್ಕೆ ನಿಂತು ಹಲ್ಲೆ ಮಾಡಿದ್ದಾನೆ. ಈ ಕುರಿತ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

Viral: ಪ್ರೇಮಿಗಳ ಜಗಳ ಬಿಡಿಸಲು ಹೋಗಿ ತಾನೇ ಜಗಳಕ್ಕೆ ನಿಂತ ಫುಡ್ ಡೆಲಿವರಿ ಬಾಯ್; ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್
ಡೆಲಿವರಿ ಯವಕ ಹಲ್ಲೆ ನಡೆಸುತ್ತಿರುವ ದೃಶ್ಯ
TV9 Web
| Edited By: |

Updated on:Apr 02, 2022 | 10:05 AM

Share

ಜಗಳ ಬಿಡಿಸಲು ಹೋದ ವ್ಯಕ್ತಿಯೊಬ್ಬ ತಾನೇ ಜಗಳಕ್ಕೆ ನಿಂತು ಹಲ್ಲೆ ಮಾಡಿದ್ದಾನೆ. ಈ ಕುರಿತ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ (Viral Video) ಆಗುತ್ತಿದ್ದು, ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಭುವನೇಶ್ವರದಲ್ಲಿ ಘಟನೆ ನಡೆದಿದ್ದು, ಹಲವರು ವಿಡಿಯೋ ಹಂಚಿಕೊಂಡಿದ್ದಾರೆ. ಒಂದು ವಿಡಿಯೋದಲ್ಲಿ ಯುವತಿಯೋರ್ವಳು ಗೆಳೆಯನೊಂದಿಗೆ ಜಗಳ‌ ಮಾಡುತ್ತಿರುವ ದೃಶ್ಯವಿದೆ. ಪಾರ್ಕ್ ಒಂದರ ಹೊರಗೆ ಗಲಾಟೆ ನಡೆದಿದ್ದು, ಯುವತಿ ಗೆಳೆಯನಿಗೆ ಮಾತಿನ ಮೂಲಕ‌ ನಿಂದಿಸುತ್ತಿದ್ದಾರೆ. ಕೆಲ ಸಮಯದ ನಂತರ ಕ್ರೋಧಗೊಂಡಿದ್ದ ಯುವತಿ ಕಲ್ಲನ್ನು ತೆಗೆದುಕೊಂಡು ಗೆಳೆಯನ ವಾಹನಕ್ಕೆ ಹಾನಿ‌ ಮಾಡಿದ್ದಾರೆ. ಒಂದು ವಿಡಿಯೋದಲ್ಲಿ ಇವಿಷ್ಟು ದೃಶ್ಯ ಸೆರೆಯಾಗಿದ್ದು, ಜನರು ಜಗಳ ತಪ್ಪಿಸಲು ಮುಂದಾಗದೇ, ನೋಡುತ್ತಿರುವ ದೃಶ್ಯವೂ ಸೆರೆಯಾಗಿದೆ.

ಮತ್ತೊಂದು ವಿಡಿಯೋದಲ್ಲಿ ಜಗಳ ನಿಲ್ಲಿಸಲು ಹೋದ ಫುಡ್ ಡೆಲಿವರಿ ಬಾಯ್ ತಾನೇ ಜಗಳಕ್ಕೆ ನಿಂತಿದ್ದಾನೆ.‌ ಯುವತಿಯನ್ನು ಸಮಾಧಾನ ಮಾಡಲು ಆತ ಮುಂದಾಗಿದ್ದು, ಆದರೆ ಯುವತಿ ನಿಂದಿಸಿದ್ದಾಳೆ.‌ ಇದರಿಂದ ಆತ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಡೆಲಿವರಿ ಯುವಕ ಯುವತಿಗೆ ತೀವ್ರವಾಗಿ ಹೊಡೆಯುತ್ತಿರುವ ದೃಶ್ಯ ಸೆರೆಯಾಗಿದ್ದು, ನಂತರ ಸಮೀಪದಲ್ಲಿದ್ದ ಜನರು ಈರ್ವರನ್ನೂ ಸಮಾಧಾನಪಡಿಸಿದ್ದಾರೆ. ಯುವತಿಯ ಮೇಲೆ ಹಲ್ಲೆ ನಡೆಸಿದ ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ‌.

ವೈರಲ್ ಆಗಿರುವ ವಿಡಿಯೋ ಇಲ್ಲಿದೆ:

ಪ್ರಕರಣಕ್ಕೆ ಸಂಬಂಧಪಟ್ಟಂತೆ ಡೆಲಿವರಿ ಯುವಕ ಹಾಗೂ ಯುವತಿ ಯಾವುದೇ ದೂರು ನೀಡಿಲ್ಲ. ಆದರೆ ಭುವನೇಶ್ವರ ಡಿಸಿಪಿ ಉಮಾಶಂಕರ್ ದಾಸ್ ಈ ಬಗ್ಗೆ ಪ್ರತಿಕ್ರಿಯಿಸಿ, ಎರಡೂ ಕಡೆಯುವರು ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದರಿಂದ ಈರ್ವರ ಬಗ್ಗೆಯೂ ಕೇಸು ದಾಖಲಿಸಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:

ಯಾವ ಕ್ಷೇತ್ರದವರು ಯಾವ ಬಣ್ಣದ ಹೆಲ್ಮೆಟ್ ಧರಿಸುತ್ತಾರೆ? ಭಾರತದಲ್ಲಿ ಇದು ಕಡ್ಡಾಯವೇ? ಇಲ್ಲಿದೆ ಕುತೂಹಲಕರ ಮಾಹಿತಿ

ಆರ್ಯನ್ ಖಾನ್​ ಡ್ರಗ್ಸ್​ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್ ಸೇಲ್​ ಸಾವು; ವಕೀಲರಿಂದ ಮಾಹಿತಿ

Published On - 10:02 am, Sat, 2 April 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ