AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಬೆಂಗಳೂರು ವಿಶೇಷ ಚೇತನರಿಗೆ ತಕ್ಕ ಊರಲ್ಲ, ಇದು ಬ್ರ್ಯಾಂಡ್ ಬೆಂಗಳೂರು ತಂದ ಪರಿಸ್ಥಿತಿ

ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ಆದರೆ ಈ ಅಭಿವೃಧಿಯೂ ಪಾದಚಾರಿಗಳಿಗೆ, ಹಾಗೂ ವಿಕಲ ಚೇತನರಿಗೆ ತೊಂದರೆಯಾಗುತ್ತಿದೆ. ಇದೀಗ ವೈರಲ್ ಆಗಿರುವ ಪೋಸ್ಟ್ ನಲ್ಲಿ ವಿಕಲಚೇತನ ವ್ಯಕ್ತಿಯೊಬ್ಬರು ಮಾರೇನಹಳ್ಳಿ ರಸ್ತೆ ಜಯನಗರ 8 ನೇ ಬ್ಲಾಕ್ ಬಳಿ ವೀಲ್ ಚೇರ್ ನಲ್ಲಿ ರಸ್ತೆಯಲ್ಲಿ ಹೋಗುತ್ತಿರುವ ದೃಶ್ಯವೊಂದು ಕಂಡು ಬಂದಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಿದ್ದಾರೆ.

Viral : ಬೆಂಗಳೂರು ವಿಶೇಷ ಚೇತನರಿಗೆ ತಕ್ಕ ಊರಲ್ಲ, ಇದು ಬ್ರ್ಯಾಂಡ್ ಬೆಂಗಳೂರು ತಂದ ಪರಿಸ್ಥಿತಿ
Viral post
ಸಾಯಿನಂದಾ
| Edited By: |

Updated on: Dec 08, 2024 | 5:30 PM

Share

ಬ್ರ್ಯಾಂಡ್ ಬೆಂಗಳೂರಿನ ಹೆಸರಿನಲ್ಲಿ ಮಾಯನಗರಿ ಬೆಂಗಳೂರು ವೇಗಗತಿಯಲ್ಲಿ ಬೆಳೆಯುತ್ತಿದೆ. ಆದರೆ ಬೆಂಗಳೂರು ಬೆಳೆಯುತ್ತಾ ಹೋದಂತೆ ಕೆಲಸ ಅರಸುತ್ತ ಬರುತ್ತಿರುವ ಜನರ ಸಂಖ್ಯೆ, ವಾಹನ ಓಡಾಟ ಹಾಗೂ ಟ್ರಾಫಿಕ್ ಜಾಮ್ ಕೂಡ ಅಷ್ಟೇ ಹೆಚ್ಚಾಗುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ರಸ್ತೆ ಅಗಲೀಕರಣ, ಫುಟ್ ಪಾತ್ ಮೇಲೆ ಅಂಗಡಿಯಂತಹ ವ್ಯವಸ್ಥೆಯನ್ನು ಕಾಣಬಹುದು. ಇದರಿಂದಾಗಿ ಪಾದಚಾರಿಗಳಿಗೆ ಹಾಗೂ ವಿಕಲಚೇತನರಿಗೆ ಪುಟ್ ಪಾತ್ ನಲ್ಲಿ ಓಡಾಡಲು ಕಷ್ಟ ಎನ್ನುವಂತಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಇದಕ್ಕೆ ಸಂಬಂಧಪಟ್ಟ ಪೋಸ್ಟ್ ವೊಂದು ವೈರಲ್ ಆಗಿದ್ದು, ವಿಕಲಚೇತನರೊಬ್ಬರು ವೀಲ್ ಚೇರ್ ನಲ್ಲಿ ರಸ್ತೆಯಲ್ಲಿ ಹೋಗುತ್ತಿರುವುದನ್ನು ನೋಡಬಹುದು.

ಆನಂದ್ ಗುಂಡ್ ರಾವ್ ಹೆಸರಿನ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ‘ದೈಹಿಕ ವಿಕಲಚೇತನ ವ್ಯಕ್ತಿಯೊಬ್ಬರು ಮಾರೇನಹಳ್ಳಿ ರಸ್ತೆ ಜಯನಗರ ಎಂಟನೇ ಬ್ಲಾಕ್ ಬಳಿ ವೀಲ್ ಚೇರ್ ನಲ್ಲಿ ರಸ್ತೆಯಲ್ಲಿ ಹೋಗುತ್ತಿರುವುದು ಕಂಡು ಬಂದಿದೆ. ರಸ್ತೆಯಲ್ಲಿ ಸರಿಯಾದ ಫುಟ್ ಪಾತ್ ವ್ಯವಸ್ಥೆ ಇಲ್ಲದೆ ವ್ಯಕ್ತಿ ರಸ್ತೆಯಲ್ಲಿ ಪ್ರಯಾಣಿಸುವ ಪರಿಸ್ಥಿತಿ ಬಂದೋಗಿದೆ’ ಎಂದು ಬರೆಯಲಾಗಿದೆ.

ಈ ಫೋಟೋದಲ್ಲಿ ವಿಕಲಚೇತನ ವ್ಯಕ್ತಿಯ ಎದುರಿಗೆ ಬಿಎಂಟಿಸಿ ಬಸ್ ಗಳು ಹೋದರು ಕೂಡ ಆ ವ್ಯಕ್ತಿಯನ್ನು ಕೂರಿಸಿಕೊಳ್ಳದೆ ಹೋಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಅದಲ್ಲದೇ, ಈ ವಿಕಲ ಚೇತನ ವ್ಯಕ್ತಿ ಬರುತ್ತಿದ್ದರೂ ಕೂಡ ಮುಂಭಾಗದಲ್ಲಿ ವ್ಯಕ್ತಿಯೊಬ್ಬ ರಾಂಗ್ ರೂಟ್ ನಲ್ಲಿ ಬರುತ್ತಿರುವುದನ್ನು ಕಾಣಬಹುದು. ಫುಟ್ ಪಾತ್ ನಲ್ಲಿ ಕಸ, ಕಲ್ಲು, ಅಂಗಡಿಗಳು ಇರುವುದೇ ಈ ರೀತಿಯ ಪರಿಸ್ಥಿತಿಗೆ ಕಾರಣ ಎನ್ನಲಾಗಿದೆ. ಈ ಪೋಸ್ಟ್ ಹದಿನೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದೆ.

ಇದನ್ನೂ ಓದಿ: ಜೈಲಿನಲ್ಲಿ ಕೈದಿಯ ವಿಚಿತ್ರ ವರ್ತನೆ; ಎಕ್ಸ್ ರೇ ನೋಡಿ ಪೊಲೀಸರು ಶಾಕ್​​

ಈ ಪೋಸ್ಟ್ ಗೆ ಜಯನಗರ ಸಂಚಾರ ಪೊಲೀಸ್ ಠಾಣೆ ಹೆಸರಿನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸಿಬ್ಬಂದಿಯೂ ಪ್ರತಿಕ್ರಿಯೆ ‘ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ. ಮತ್ತೊಬ್ಬರು, ‘ಎಲ್ಲಾ ಸರಿ ಇದ್ದವರೇ ಹರಸಾಹಸ ಪಡುತ್ತಿದ್ದಾರೆ, ಈ ವಿಕಲ ಚೇತನರು ಹೇಗೆ ದಾಟಬೇಕು’ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು, ‘ಇದು ಭಾರತದ ಪರಿಸ್ಥಿತಿಯಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ