AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಬೆಂಗಳೂರು ವಿಶೇಷ ಚೇತನರಿಗೆ ತಕ್ಕ ಊರಲ್ಲ, ಇದು ಬ್ರ್ಯಾಂಡ್ ಬೆಂಗಳೂರು ತಂದ ಪರಿಸ್ಥಿತಿ

ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ಆದರೆ ಈ ಅಭಿವೃಧಿಯೂ ಪಾದಚಾರಿಗಳಿಗೆ, ಹಾಗೂ ವಿಕಲ ಚೇತನರಿಗೆ ತೊಂದರೆಯಾಗುತ್ತಿದೆ. ಇದೀಗ ವೈರಲ್ ಆಗಿರುವ ಪೋಸ್ಟ್ ನಲ್ಲಿ ವಿಕಲಚೇತನ ವ್ಯಕ್ತಿಯೊಬ್ಬರು ಮಾರೇನಹಳ್ಳಿ ರಸ್ತೆ ಜಯನಗರ 8 ನೇ ಬ್ಲಾಕ್ ಬಳಿ ವೀಲ್ ಚೇರ್ ನಲ್ಲಿ ರಸ್ತೆಯಲ್ಲಿ ಹೋಗುತ್ತಿರುವ ದೃಶ್ಯವೊಂದು ಕಂಡು ಬಂದಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಿದ್ದಾರೆ.

Viral : ಬೆಂಗಳೂರು ವಿಶೇಷ ಚೇತನರಿಗೆ ತಕ್ಕ ಊರಲ್ಲ, ಇದು ಬ್ರ್ಯಾಂಡ್ ಬೆಂಗಳೂರು ತಂದ ಪರಿಸ್ಥಿತಿ
Viral post
ಸಾಯಿನಂದಾ
| Edited By: |

Updated on: Dec 08, 2024 | 5:30 PM

Share

ಬ್ರ್ಯಾಂಡ್ ಬೆಂಗಳೂರಿನ ಹೆಸರಿನಲ್ಲಿ ಮಾಯನಗರಿ ಬೆಂಗಳೂರು ವೇಗಗತಿಯಲ್ಲಿ ಬೆಳೆಯುತ್ತಿದೆ. ಆದರೆ ಬೆಂಗಳೂರು ಬೆಳೆಯುತ್ತಾ ಹೋದಂತೆ ಕೆಲಸ ಅರಸುತ್ತ ಬರುತ್ತಿರುವ ಜನರ ಸಂಖ್ಯೆ, ವಾಹನ ಓಡಾಟ ಹಾಗೂ ಟ್ರಾಫಿಕ್ ಜಾಮ್ ಕೂಡ ಅಷ್ಟೇ ಹೆಚ್ಚಾಗುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ರಸ್ತೆ ಅಗಲೀಕರಣ, ಫುಟ್ ಪಾತ್ ಮೇಲೆ ಅಂಗಡಿಯಂತಹ ವ್ಯವಸ್ಥೆಯನ್ನು ಕಾಣಬಹುದು. ಇದರಿಂದಾಗಿ ಪಾದಚಾರಿಗಳಿಗೆ ಹಾಗೂ ವಿಕಲಚೇತನರಿಗೆ ಪುಟ್ ಪಾತ್ ನಲ್ಲಿ ಓಡಾಡಲು ಕಷ್ಟ ಎನ್ನುವಂತಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಇದಕ್ಕೆ ಸಂಬಂಧಪಟ್ಟ ಪೋಸ್ಟ್ ವೊಂದು ವೈರಲ್ ಆಗಿದ್ದು, ವಿಕಲಚೇತನರೊಬ್ಬರು ವೀಲ್ ಚೇರ್ ನಲ್ಲಿ ರಸ್ತೆಯಲ್ಲಿ ಹೋಗುತ್ತಿರುವುದನ್ನು ನೋಡಬಹುದು.

ಆನಂದ್ ಗುಂಡ್ ರಾವ್ ಹೆಸರಿನ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ‘ದೈಹಿಕ ವಿಕಲಚೇತನ ವ್ಯಕ್ತಿಯೊಬ್ಬರು ಮಾರೇನಹಳ್ಳಿ ರಸ್ತೆ ಜಯನಗರ ಎಂಟನೇ ಬ್ಲಾಕ್ ಬಳಿ ವೀಲ್ ಚೇರ್ ನಲ್ಲಿ ರಸ್ತೆಯಲ್ಲಿ ಹೋಗುತ್ತಿರುವುದು ಕಂಡು ಬಂದಿದೆ. ರಸ್ತೆಯಲ್ಲಿ ಸರಿಯಾದ ಫುಟ್ ಪಾತ್ ವ್ಯವಸ್ಥೆ ಇಲ್ಲದೆ ವ್ಯಕ್ತಿ ರಸ್ತೆಯಲ್ಲಿ ಪ್ರಯಾಣಿಸುವ ಪರಿಸ್ಥಿತಿ ಬಂದೋಗಿದೆ’ ಎಂದು ಬರೆಯಲಾಗಿದೆ.

ಈ ಫೋಟೋದಲ್ಲಿ ವಿಕಲಚೇತನ ವ್ಯಕ್ತಿಯ ಎದುರಿಗೆ ಬಿಎಂಟಿಸಿ ಬಸ್ ಗಳು ಹೋದರು ಕೂಡ ಆ ವ್ಯಕ್ತಿಯನ್ನು ಕೂರಿಸಿಕೊಳ್ಳದೆ ಹೋಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಅದಲ್ಲದೇ, ಈ ವಿಕಲ ಚೇತನ ವ್ಯಕ್ತಿ ಬರುತ್ತಿದ್ದರೂ ಕೂಡ ಮುಂಭಾಗದಲ್ಲಿ ವ್ಯಕ್ತಿಯೊಬ್ಬ ರಾಂಗ್ ರೂಟ್ ನಲ್ಲಿ ಬರುತ್ತಿರುವುದನ್ನು ಕಾಣಬಹುದು. ಫುಟ್ ಪಾತ್ ನಲ್ಲಿ ಕಸ, ಕಲ್ಲು, ಅಂಗಡಿಗಳು ಇರುವುದೇ ಈ ರೀತಿಯ ಪರಿಸ್ಥಿತಿಗೆ ಕಾರಣ ಎನ್ನಲಾಗಿದೆ. ಈ ಪೋಸ್ಟ್ ಹದಿನೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದೆ.

ಇದನ್ನೂ ಓದಿ: ಜೈಲಿನಲ್ಲಿ ಕೈದಿಯ ವಿಚಿತ್ರ ವರ್ತನೆ; ಎಕ್ಸ್ ರೇ ನೋಡಿ ಪೊಲೀಸರು ಶಾಕ್​​

ಈ ಪೋಸ್ಟ್ ಗೆ ಜಯನಗರ ಸಂಚಾರ ಪೊಲೀಸ್ ಠಾಣೆ ಹೆಸರಿನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸಿಬ್ಬಂದಿಯೂ ಪ್ರತಿಕ್ರಿಯೆ ‘ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ. ಮತ್ತೊಬ್ಬರು, ‘ಎಲ್ಲಾ ಸರಿ ಇದ್ದವರೇ ಹರಸಾಹಸ ಪಡುತ್ತಿದ್ದಾರೆ, ಈ ವಿಕಲ ಚೇತನರು ಹೇಗೆ ದಾಟಬೇಕು’ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು, ‘ಇದು ಭಾರತದ ಪರಿಸ್ಥಿತಿಯಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ