AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

Trending Story: ಈ ಮಾಂಸದಂಗಡಿಯಲ್ಲಿ ಮೇಕೆ, ಟರ್ಕಿ, ಬಾತುಕೋಳಿ, ಮೊಲ, ಕ್ವಿಲ್, ಬ್ಲ್ಯಾಕ್ ಚಿಕನ್ ಮಾಂಸವನ್ನು ಮಾರಾಟ ಮಾಡಲಾಗುತ್ತದೆ.

Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 30, 2021 | 7:22 PM

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆ ಗಗನಕ್ಕೇರಿರುವುದು ಗೊತ್ತೇ ಇದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಲವು ಮೀಮ್ಸ್​​ಗಳನ್ನು ನೀವು ನೋಡಿರುತ್ತೀರಿ. ಇದರ ಹೊರತಾಗಿಯೂ ನೈಜ ಘಟನೆಯೊಂದು ಇದೀಗ ಭಾರೀ ಸುದ್ದಿಯಾಗುತ್ತಿದೆ. ಅದೇನೆಂದರೆ ಮಾಂಸ ಖರೀದಿಸಿದರೆ ಪೆಟ್ರೋಲ್ ಫ್ರೀ.

ಹೌದು, ದುಬಾರಿ ದುನಿಯಾದಲ್ಲಿ ಹೀಗೆ ಪೆಟ್ರೋಲ್ ನೀಡುತ್ತಿರುವುದು ಮಧುರೈ ಜಿಲ್ಲೆಯ ತಿರುಮಂಗಲಂನಲ್ಲಿನ ಮಖಿಲ್ ಎಂಬ ಮಾಂಸದಂಗಡಿ. ತಮ್ಮ ಅಂಗಡಿಯಲ್ಲಿ ಒಂದು ಕೆ.ಜಿ ಮಾಂಸ ಖರೀದಿಸಿದರೆ ಒಂದು ಲೀಟರ್ ಪೆಟ್ರೋಲ್ ಉಚಿತವಾಗಿ ನೀಡಲಾಗುತ್ತದೆ ಎಂದು ಆಫರ್ ನೀಡಿದ್ದಾರೆ.

ಜುಲೈ ತಿಂಗಳ ಆಫರ್ ಅಡಿಯಲ್ಲಿ ಮಖಿಲ್ ಮಾಂಸದಂಗಡಿ ಮಾಂಸದೊಂದಿಗೆ ಒಂದು ಲೀಟರ್ ಪೆಟ್ರೋಲ್ ಟೋಕನ್ ನೀಡುತ್ತಿದ್ದಾರೆ. ಈ ಟೋಕನ್​ನ್ನು ನೀಡಿ ಸ್ಥಳೀಯ ಪೆಟ್ರೋಲ್ ಬಂಕ್​ನಲ್ಲಿ ಒಂದು ಲೀಟರ್ ಪೆಟ್ರೋಲ್ ಖರೀದಿಸಬಹುದು. ಇಂತಹದೊಂದು ವಿಭಿನ್ನ ಕೊಡುಗೆ ನೀಡುವ ಮೂಲಕ ಮಖಿಲ್ ಮಾಂಸದಂಗಡಿ ಭರ್ಜರಿ ವ್ಯಾಪರಕ್ಕಿಳಿದಿದೆ.

ಈ ಆಫರ್​ಗೆ ಜನರಿಂದ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ಅಂಗಡಿಯ ಮಾಲೀಕ ಚಂದ್ರನ್. 2 ವರ್ಷಗಳ ಹಿಂದೆ ನಾನು ಈ ಅಂಗಡಿ ಆರಂಭಿಸಿದ್ದೆ, ಆವಾಗಲೂ ಕೂಡ ನಾನು ಹಲವು ಆಫರ್​ಗಳನ್ನು ನೀಡಿದ್ದೆ. ಆ ವೇಳೆ 1 ಕೆಜಿ ಮಾಂಸಕ್ಕೆ 12 ಮೊಟ್ಟೆಗಳನ್ನು ಉಚಿತವಾಗಿ ನೀಡುತ್ತಿದ್ದೆ. ಇದೀಗ ದುಬಾರಿಯಾಗಿರುವ ಪೆಟ್ರೋಲ್ ನೀಡುತ್ತಿರುವ ನೀಡುತ್ತಿರುವುದಾಗಿ ಚಂದ್ರನ್ ತಿಳಿಸಿದ್ದಾರೆ.

ಈ ಮಾಂಸದಂಗಡಿಯಲ್ಲಿ ಮೇಕೆ, ಟರ್ಕಿ, ಬಾತುಕೋಳಿ, ಮೊಲ, ಕ್ವಿಲ್, ಬ್ಲ್ಯಾಕ್ ಚಿಕನ್ ಮಾಂಸವನ್ನು ಮಾರಾಟ ಮಾಡಲಾಗುತ್ತದೆ. ಇದರ ಜೊತೆಗೆ ಇದೀಗ ಒಂದು ಲೀಟರ್ ಪೆಟ್ರೋಲ್ ಉಚಿತ ನೀಡುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದ್ದಾರೆ. ಒಟ್ಟಿನಲ್ಲಿ ಮಖಿಲ್ ಮಾಂಸದಂಗಡಿಯ ಮುಂದೆ ಇದೀಗ ಸಣ್ಣ ಟ್ರಾಫಿಕ್ ಜಾಮ್ ಕೂಡ ಕಂಡು ಬರುತ್ತಿದೆಯಂತೆ. ಈ ರಸ್ತೆಯಲ್ಲಿ ಹೋಗುವ ವಾಹನ ಚಾಲಕರು ಒಂದು ಬ್ರೇಕ್ ಹಾಕಿ ಮಾಂಸದ ಜೊತೆಗೆ ಪೆಟ್ರೋಲ್ ಟೋಕನ್ ಪಡೆದು ಹೋಗುವುದು ಅಲ್ಲಿ ಸಾಮಾನ್ಯವಾಗಿ ಬಿಟ್ಟಿದೆ.

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

(for a kilo of meat one liter of petrol is free)

ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ