AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದಯವಿಟ್ಟು ಭಾರತಕ್ಕೆ ಹೋಗಬೇಡಿ; ವಿದೇಶಿ ಮಹಿಳೆ ಹೀಗೆನ್ನಲು ನೀಡಿದ ಕಾರಣ ನೋಡಿ

ಭಾರತಕ್ಕೆ ಬರುವ ವಿದೇಶಿಗರು ಇಲ್ಲಿನ ಪ್ರವಾಸಿ ತಾಣಗಳು, ಆಹಾರ ಪದ್ಧತಿ ಹಾಗೂ ಇಲ್ಲಿನ ಜನರಿಗೆ ಮನಸೋಲುತ್ತಾರೆ. ಆದ್ರೆ ಇದೀಗ ಅಮೆರಿಕದಿಂದ ಭಾರತಕ್ಕೆ ಬಂದ ಮಹಿಳೆಯೊಬ್ಬರು, ಭಾರತಕ್ಕೆ ದಯವಿಟ್ಟು ಹೋಗಬೇಡಿ ಎಂದು ಹೇಳಿದ್ದಾರೆ. ಈ ಮಹಿಳೆ ಹೀಗೆನ್ನಲು ನೀಡಿದ ಕಾರಣ ತಿಳಿದ್ರೆ ನೀವು ಶಾಕ್ ಆಗ್ತೀರಾ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ದಯವಿಟ್ಟು ಭಾರತಕ್ಕೆ ಹೋಗಬೇಡಿ; ವಿದೇಶಿ ಮಹಿಳೆ ಹೀಗೆನ್ನಲು ನೀಡಿದ ಕಾರಣ ನೋಡಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 16, 2026 | 3:08 PM

Share

ಭಾರತದ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಹೀಗಾಗಿ ಇಷ್ಟ ಪಟ್ಟು ಭಾರತಕ್ಕೆ ಬರುವ ವಿದೇಶಿಗರು ಇಲ್ಲಿ ಟ್ರಿಪ್ ಎಂಜಾಯ್ ಮಾಡ್ತಾರೆ. ಕೆಲವರು ಇಲ್ಲಿ ಜೀವನ ನಡೆಸಲು ಮುಂದಾಗುತ್ತಾರೆ. ಇಲ್ಲಿನ ವಾತಾವರಣ, ಇಲ್ಲಿನ ಜೀವನಶೈಲಿಗೆ ಹೊಂದಿಕೊಂಡು ಜನರೊಂದಿಗೆ ಬೆರೆಯುತ್ತಾರೆ. ಇದೀಗ ಈ ಮಹಿಳೆಗೆ ಭಾರತಕ್ಕೆ ಬರಲೇಬೇಡಿ. ಒಂದು ವೇಳೆ ಇಲ್ಲಿಗೆ ಬಂದರೆ ನೀವು ಮತ್ತೆ ನಿಮ್ಮ ದೇಶಕ್ಕೆ ಮರಳಿ ಹೋಗಲ್ಲ ಎಂದಿದ್ದಾರೆ. ಇಲ್ಲಿನ ಊಟ ತಿಂಡಿ, ಜನರು, ಆಚಾರ ವಿಚಾರ ಹಾಗೂ ಸಂಸ್ಕೃತಿಗೆ ಫಿದಾ ಆಗಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಒಳ್ಳೆಯದ್ದನ್ನು ಹುಡುಕುವ ವಿದೇಶಿ ಮಹಿಳೆಯ ಗುಣಕ್ಕೆ ಮೆಚ್ಚಿಕೊಂಡಿದ್ದಾರೆ.

ಕ್ರಿಸ್ಟನ್ ಫಿಶ್ಚರ್ (Kristen Fischer) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗೆ ಭಾರತಕ್ಕೆ ಹೋಗಬೇಡಿ, ನೀವು ಅದ್ಭುತ ಆಹಾರವನ್ನು ಸವಿಯುತ್ತೀರಿ, ಶ್ರೀಮಂತ ಸಂಸ್ಕೃತಿಯನ್ನು ಅನುಭವಿಸುತ್ತೀರಿ, ಅದ್ಭುತ ಜನರನ್ನು ಭೇಟಿಯಾಗುತ್ತೀರಿ. ನಂತರ ದೇಶವನ್ನು ಬಿಟ್ಟು ಹೋಗಲು ಇಚ್ಛೆಯಾಗುವುದೇ ಇಲ್ಲ ಎಂದು ಬರೆದುಕೊಂಡಿದ್ದಾರೆ. ಈ ಕ್ಲಿಪಿಂಗ್ ನಲ್ಲಿ ಭಾರತಕ್ಕೆ ಭೇಟಿ ನೀಡಿ ಪ್ರತಿಯೊಂದು ಕ್ಷಣವನ್ನು ಎಂಜಾಯ್ ಮಾಡಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತಾಯ್ನಾಡಿಗೆ ಹೊರಟ ಭಾರತೀಯ ಕುಟುಂಬ ಕಂಡು ಕಣ್ಣೀರಿಟ್ಟ ಅಮೆರಿಕನ್ ಅಜ್ಜಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮತ್ತೆ ಭಾರತಕ್ಕೆ ಬನ್ನಿ ಎಂದಿದ್ದಾರೆ. ಇನ್ನೊಬ್ಬರು, ಭಾರತದ ಬಗ್ಗೆ ಧನಾತ್ಮಕ ಅಂಶಗಳನ್ನು ತೋರಿಸಿದ್ದಕ್ಕೆ ಧನ್ಯವಾದಗಳು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಭಾರತಕ್ಕೆ ಬನ್ನಿ, ಪ್ರೀತಿಯನ್ನು ಹಂಚಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ