AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಭಾರತೀಯ ಬೀದಿ ಬದಿ ವ್ಯಾಪಾರಿ

ಭಾರತೀಯರ ನಡೆ ನುಡಿ, ಒಳ್ಳೆಯ ಗುಣ, ಅತಿಥಿ ಸತ್ಕಾರ, ಅಪರಿಚಿತ ವ್ಯಕ್ತಿಗಳಿಗೆ ತೋರುವ ಪ್ರೀತಿಯನ್ನು ವಿದೇಶಿಗರು ಇಷ್ಟ ಪಡುತ್ತಾರೆ. ಇದೀಗ ಭಾರತೀಯ ವ್ಯಕ್ತಿಯೊಬ್ಬ ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಒಳ್ಳೆತನವನ್ನು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಭಾರತೀಯ ಬೀದಿ ಬದಿ ವ್ಯಾಪಾರಿ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 10, 2026 | 1:08 PM

Share

ಭಾರತೀಯರು (Indian) ವಿಶಾಲ ಹೃದಯದವರು. ಯಾರೇ ಬಂದರೂ ಅವರನ್ನು ಪ್ರೀತಿಯಿಂದ ಮಾತನಾಡಿಸಿ ಸತ್ಕರಿಸುವ ಗುಣ ನಮ್ಮದು. ಹೀಗಾಗಿ ಭಾರತೀಯರ ಒಳ್ಳೆಯ ಮನಸ್ಸಿಗೆ ಹಾಗೂ ಅತಿಥಿ ಸತ್ಕಾರಕ್ಕೆ ವಿದೇಶಿಗರು (foreigner) ಸಹಜವಾಗಿ ಮನಸೋಲುವುದಿದೆ. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ದೃಶ್ಯ. ಭಾರತೀಯ ಬೀದಿ ಬದಿ ವ್ಯಾಪಾರಿಯೊಬ್ಬ ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ್ದಾನೆ. ಈ ವ್ಯಾಪಾರಿ ಫ್ರೀಯಾಗಿ ಕಿವಿಯೋಲೆ ಕೊಡುತ್ತಿದ್ದಂತೆ ವಿದೇಶಿ ಮಹಿಳೆಯ ಖುಷಿಗೆ ಪಾರಾವೇ ಇಲ್ಲದಂತಾಗಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಓಲಾ ಲಿಲ್ಲಿ (Ola Lily) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಶೇರ್ ಮಾಡಿಕೊಳ್ಳಲಾಗಿದೆ. ವಿದೇಶಿ ಮಹಿಳೆ ಭಾರತದ ಬೀದಿಯಲ್ಲಿ ಸುತ್ತುತ್ತಿದ್ದ ವೇಳೆ ಬೀದಿ ಬದಿ ವ್ಯಾಪಾರಿಯೊಬ್ಬರು ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡುವುದನ್ನು ಕಾಣಬಹುದು. ಈ ಕ್ಲಿಪಿಂಗ್ ನಲ್ಲಿ ಈ ಕಿವಿಯೋಲೆಗೆ ದುಡ್ಡು ಎಷ್ಟು ಎಂದು ಕೇಳುತ್ತಿದ್ದು, ಅದಕ್ಕೆ ದುಡ್ಡು ಕೊಡೋದು ಬೇಡ, ನನ್ನ ಲೆಕ್ಕದಲ್ಲಿ ಗಿಫ್ಟ್ ಎಂದು ಭಾರತೀಯ ವ್ಯಕ್ತಿ ಹೇಳಿದ್ದಾನೆ. ತನಗೆ ಇಷ್ಟವಾದ ಕಿವಿಯೋಲೆಯನ್ನು ಎತ್ತಿಕೊಂಡು ಕಿವಿಗೆ ಹಾಕುತ್ತಿರುವ ವಿದೇಶಿ ಮಹಿಳೆಯ ಖುಷಿ ಮುಖದಲ್ಲಿ ವ್ಯಕ್ತವಾಗುತ್ತಿದೆ.

ವೈರಲ್‌ ವಿಡಿಯೋ ಇಲ್ಲಿದೆ

View this post on Instagram

A post shared by Ola Lily (@olalilyx)

ಇದನ್ನೂ ಓದಿ: ಸಣ್ಣ ವಿಷ್ಯಗಳನ್ನು ಸಂಭ್ರಮಿಸುವ ಭಾರತೀಯರ ಗುಣವನ್ನು ಮೆಚ್ಚಿಕೊಂಡ ವಿದೇಶಿ ಮಹಿಳೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದಿವೆ. ಒಬ್ಬ ಬಳಕೆದಾರ, ಇಂತಹ ಕ್ಷಣಗಳನ್ನು ಭಾರತದಲ್ಲಿ ಮಾತ್ರ ನೋಡಲು ಸಾಧ್ಯ ಎಂದು ಹೇಳಿದ್ದಾರೆ. ಮತ್ತೊಬ್ಬರು, ಭಾರತೀಯರು ನಿಜಕೂ ಹೃದಯವಂತರು ಎಂದಿದ್ದಾರೆ. ಇನ್ನೊಬ್ಬರು, ನಿಮ್ಮ ದೇಶದ ಜನರಿಗೆ ನಮ್ಮವರು ಬಂದಾಗ ಇದೇ ರೀತಿ ನಡೆದುಕೊಳ್ಳಲು ಹೇಳಿ ಎಂದು ವಿದೇಶಿ ಮಹಿಳೆಗೆ ಟಾಂಗ್ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್