AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಲಯನ್​ ಕಪ್ಪು ಕರಡಿಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅಧಿಕಾರಿಗಳು: ವಿಡಿಯೋ ವೈರಲ್​

ಹಿಮಾಲಯದ ಕಪ್ಪು ಕರಡಿಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಐಎಫ್​ಎಸ್​ ಅಧಿಕಾರಿ ಪರ್ವೀನ್​ ಕಸ್ವಾನ್​ ಅವರು ವಿಡಿಯೋ ಹಂಚಿಕೊಂಡಿದ್ದಾರೆ.

ಹಿಮಾಲಯನ್​ ಕಪ್ಪು ಕರಡಿಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅಧಿಕಾರಿಗಳು: ವಿಡಿಯೋ ವೈರಲ್​
ಕರಡಿಯ ರಕ್ಷಣೆ
TV9 Web
| Edited By: |

Updated on: Mar 02, 2022 | 9:41 AM

Share

ಪ್ರತೀ ಜೀವಿಗೆ ಸ್ವಾತಂತ್ರ್ಯ ಎನ್ನುವುದು ಅಗತ್ಯವಾಗಿರುತ್ತದೆ. ತಮ್ಮದೇ ಪ್ರಪಂಚದಲ್ಲಿ ಸ್ವಚ್ಛಂದವಾಗಿ ಜೀವಿಸುವ ಜೀವಿಗಳನ್ನು ಕಟ್ಟಿಹಾಕುವ ಹಕ್ಕು ಯಾರಿಗೂ ಇರುವುದಿಲ್ಲ. ಇಲ್ಲೊಂದು ಹಿಮಾಲಯದ ಕಪ್ಪು ಕರಡಿ(Himalayan Black Bear)ಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಐಎಫ್​ಎಸ್​ ಅಧಿಕಾರಿ(IFS Officer) ಪರ್ವೀನ್​ ಕಸ್ವಾನ್​(Praveen Kaswan) ಅವರು ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋ 44 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಅರಣ್ಯ ಅಧಿಕಾರಿಗಳ ಗುಂಪು  ಕರಡಿಯನ್ನು ಸೆರೆಹಿಡಿದು ಬಲೆಯಲ್ಲಿ ಹಾಕಿ ನಂತರ ಕಾಡಿನ ಕಡೆಗೆ ಮುಖ ಮಾಡಿ ಇಟ್ಟು ದೂರ ಹೋಗುತ್ತಾರೆ. ಎಲ್ಲರೂ ದೂರ ಹೋದಂತೆ  ಕರಡಿ ಬಲೆಯಿಂದ ಹೊರಬಂದು ಕಾಡಿನೆಡೆಗೆ ಓಡಿಹೋಗುತ್ತದೆ. ಈ ಕುರಿತು ಪರ್ವೀನ್​ ಅವರು, ವಿಡಿಯೋ ಹಂಚಿಕೊಂಡು, ಸ್ವಾತಂತ್ರ್ಯ ಹೇಗಿದೆ! ಹಿಮಾಲಯದ ಕಪ್ಪು ಕರಡಿ ಸಿಲುಕಿಕೊಂಡಿತ್ತು. ನಮ್ಮ ತಂಡಗಳು ಕಾರ್ಯಾಚರಣೆ ಆರಂಭಿಸಿವೆ. ಜನರು ಮತ್ತು ಪ್ರಾಣಿಗಳಿಗೆ ಯಾವುದೇ ಅಪಾಯವಾಗದಂತೆ ರಕ್ಷಣಾ ಕಾರ್ಯ ಯಶಸ್ವಿಯಾಗಿದೆ ಎಂದು ಬರೆದುಕೊಂಡಿದ್ದಾರೆ.

ಕರಡಿಯನ್ನು ಸೆರೆಹಿಡಿದ ನಂತರ ವೈದ್ಯಕೀಯ ಚಿಕಿತ್ಸೆ ನೀಡಿ ಕಾಡಿಗೆ ಬಿಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸದ್ಯ , ಕರಡಿಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಕಿರು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ನೆಟ್ಟಿಗರು ವಿಡಿಯೋ ನೋಡಿ, ಉತ್ತಮ ಕೆಲಸ ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ