AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಖಾಂತ’ ಅಂತ್ಯಸಂಸ್ಕಾರಕ್ಕೊಂದು ಸ್ಟಾರ್ಟ್​ಅಪ್​; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

Funeral : ನೀವು ಪ್ರದರ್ಶನ ಮೇಳಗಳಿಗೆ ಹೋದಾಗ ಬೆಡ್​ ಇದ್ದರೆ ಒಮ್ಮೆ ಮಲಗಿ ನೋಡುತ್ತೀರಿ, ಉಪ್ಪಿನಕಾಯಿ ಇದ್ದರೆ ನೆಕ್ಕಿ ನೋಡುತ್ತೀರಿ, ಆದರೆ ಇಲ್ಲಿ!? ಮುಂಬೈನಲ್ಲಿರುವ ಈ ಕಂಪೆನಿಯ ಸದಸ್ಯತ್ವ ಶುಲ್ಕ ರೂ. 37,500.

‘ಸುಖಾಂತ’ ಅಂತ್ಯಸಂಸ್ಕಾರಕ್ಕೊಂದು ಸ್ಟಾರ್ಟ್​ಅಪ್​; ನೆಟ್ಟಿಗರ ಮಿಶ್ರಪ್ರತಿಕ್ರಿಯೆ
Found this Stall in Indian International Trade fare
TV9 Web
| Edited By: |

Updated on:Nov 21, 2022 | 6:24 PM

Share

Viral : ಹಣವಿದ್ದರೆ ಎಲ್ಲವೂ ಸುಸೂತ್ರ. ಇಂದು ಯಾವ ಸಮಸ್ಯೆಗೂ ಉತ್ತರ ಬಹಳ ಸುಲಭವಾಗಿ ಸಿಗುತ್ತದೆ. ಹಾಗೆ ಸಾವಿಗೆ ಸಂಬಂಧಿಸಿಯೂ. ನಾಳೆ ನಾನು ಸತ್ತುಹೋದರೆ ನನ್ನ ಅಂತ್ಯಸಂಸ್ಕಾರ ಯಾರು ಮಾಡುತ್ತಾರೆ ಎಂದು ಕೊರಗಬೇಕಿಲ್ಲ. ಹಣವಿದ್ದರೆ ಅದೂ ಕೂಡ ಸುಗಮವೇ. ಏಕೆಂದರೆ ನಾಮಕರಣ, ಹುಟ್ಟುಹಬ್ಬ, ಸೀಮಂತ, ಮದುವೆ, ವಾರ್ಷಿಕೋತ್ಸವ ಮುಂತಾದ ಸಮಾರಂಭಗಳಿಗೆ ಇವೆಂಟ್​ ಮ್ಯಾನೇಜ್​ಮೆಂಟ್​ ಕಂಪೆನಿಗಳು ಹೇಗೆ ಸಾರಥ್ಯ ವಹಿಸುತ್ತವೆಯೋ ಹಾಗೆಯೇ ಅಂತ್ಯಸಂಸ್ಕಾರಕ್ಕೂ ಸಾರಥ್ಯ ವಹಿಸುವ ಹೊಸ ಸ್ಟಾರ್ಟ್​ ಅಪ್​ ಮುಂಬೈನಲ್ಲಿ ಶುರುವಾಗಿದೆ.

ಸುಖಾಂತ ಫ್ಯುನರಲ್​​ ಕಂಪೆನಿಯ ಮಳಿಗೆಯು ದೆಹಲಿಯ ಇಂಡಿಯಾ ಇಂಟರ್​ನ್ಯಾಷನಲ್​ ಟ್ರೇಡ್​ ಫೇರ್​ನಲ್ಲಿ ಕಾಣಿಸಿಕೊಂಡಿದೆ. ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಇದನ್ನು ಟ್ವೀಟ್ ಮಾಡಿದ್ದಾರೆ. ನೆಟ್ಟಿಗರು ಹೌಹಾರುತ್ತಿದ್ದಾರೆ. ಏನಿದು, ನೀವು ಹೀಗೆ ಹೇಳುತ್ತಿದ್ದೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಈ ಥರವೂ ಒಂದು ಕಂಪೆನಿ ಇರಲು ಸಾಧ್ಯವಾ ಎಂದು ಕೇಳುತ್ತಿದ್ದಾರೆ.

ಮನುಷ್ಯನ ಅಂತಿಮಯಾತ್ರೆಯು ಗೌರವದಿಂದ ಕೂಡಿರಬೇಕೆಂಬ ಉದ್ದೇಶವನ್ನು ಈ ಕಂಪೆನಿ ಹೊಂದಿದೆ. ಅಂತಿಮ ಸಂಸ್ಕಾರದ ಪೂರ್ವ ವಿಧಿವಿಧಾನ, ಅಂತ್ಯಸಂಸ್ಕಾರ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಇದು ಯೋಜಿಸಿ ಕೊಡುತ್ತದೆ. ಸಂಬಂಧಿಸಿದ ಪರಿಣತರು, ಅನುಭವಿಗಳನ್ನು ಈ ಕಂಪೆನಿಯು ಹೊಂದಿದೆ. ಪ್ರಸ್ತುತ ಮಳಿಗೆಯಲ್ಲಿ ಅಂತ್ಯಸಂಸ್ಕಾರದ ವಿಧಿವಿಧಾನಕ್ಕೆ ಬೇಕಾಗುವ ಎಲ್ಲ ಪರಿಕರಗಳನ್ನೂ ಪ್ರದರ್ಶನಕ್ಕೆ ಇಡಲಾಗಿತ್ತು.

ಇದನ್ನೂ ಓದಿ : ಮೆನ್ಸ್​ ಡೇ ಪಂಚಾಂಗದಾಗೂ ಇಲ್ಲ ಮತ್ತ ಗೂಗಲ್​ ಡೂಡಲ್​ದಾಗೂ ಇಲ್ಲ; ಸೋನು ವೇಣುಗೋಪಾಲ

ಇಂತಹ ಸ್ಟಾರ್ಟ್​ ಅಪ್​ ಅಗತ್ಯವಿತ್ತೇ? ಎಂದು ನೆಟ್ಟಿಗರು ಬೆಚ್ಚಿ ಬೆದರಿ ನಕ್ಕು ಕೇಳುತ್ತಿದ್ದಾರೆ. ಜನರು ಸಾಮಾಜಿಕ ಮಾಧ್ಯಮಗಳಲ್ಲಿ ಮಾತ್ರ ಸಮಾಜಮುಖಿಯಾಗಿ ತೊಡಗಿಕೊಂಡಿದ್ಧಾರೆ. ನಿಜ ಬದುಕಿನಲ್ಲಿ ವಾದ, ಜಗಳಗಳಿಂದ ಮುಕ್ತವಾಗಿ ಅಂತಿಮ ಯಾತ್ರೆಯನ್ನು ಗೌರವದಿಂದ ಪೂರೈಸಲಿ ಬಿಡಿ ಎಂದಿದ್ದಾರೆ ಒಬ್ಬರು. ಅಲ್ಲದೆ, ಈ ಪೋಸ್ಟ್​ನ ಥ್ರೆಡ್​ನಲ್ಲಿ ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವ, ನಿರುದ್ಯೋಗ, ಹೆಚ್ಚುತ್ತಿರುವ ಜನಸಂಖ್ಯೆ, ನೌಕರಿಗಾಗಿ ವಲಸೆ, ಮಾಹಿತಿ ತಂತ್ರಜ್ಞಾನದ ಪ್ರಭಾವ, ಪೀಳಿಗೆಗಳ ಅಂತರ ಹೀಗೆ ಮುಂತಾದ ವಿಷಯಗಳು ಚರ್ಚೆಗೆ ಒಳಗಾಗಿವೆ.

ಸುಖಾಂತ ಫ್ಯೂನರಲ್ ಕಂಪೆನಿಯ ಸಂಸ್ಥಾಪಕರು ಸಂಜಯ್ ರಾಮಗುಡೆ. ಕಂಪೆನಿಯ ಸದಸ್ಯತ್ವ ಶುಲ್ಕ ರೂ. 37,500.

ಹೇಗಿದೆ ಈ ಯೋಜನೆ. ಏನಂತೀರಿ ನೀವು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:18 pm, Mon, 21 November 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ