AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹಾಲಿಗೆ ಆಲ್ಕೋಹಾಲ್ ಬೆರೆಸಿದ ಅಜ್ಜಿ;ಕೋಮಾಗೆ ಜಾರಿದ 4 ತಿಂಗಳ ಮೊಮ್ಮಗು

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಾಲ್ ಬೆರೆಸಿದ್ದು, ಅರ್ಧ ಹಾಲು ಕುಡಿದ ಮಗು ಅಳಲು ಆರಂಭಿಸಿದೆ. ಈ ವೇಳೆ ಉಳಿದ ಹಾಲಿನ ವಾಸನೆ ನೋಡಿದಾಗ ವೃದ್ಧೆಗೆ ಹಾಲಿನಲ್ಲಿ ಆಲ್ಕೋಹಾಲ್ ಮಿಶ್ರಣವಾಗಿರುವುದು ತಿಳಿದುಬಂದಿದೆ.

Viral News: ಹಾಲಿಗೆ ಆಲ್ಕೋಹಾಲ್ ಬೆರೆಸಿದ ಅಜ್ಜಿ;ಕೋಮಾಗೆ ಜಾರಿದ  4 ತಿಂಗಳ ಮೊಮ್ಮಗು
ಹಾಲಿಗೆ ಆಲ್ಕೋಹಾಲ್ ಬೆರೆಸಿದ ಅಜ್ಜಿ;ಕೋಮಾಗೆ ಜಾರಿದ 4 ತಿಂಗಳ ಮೊಮ್ಮಗು
Follow us
ಅಕ್ಷತಾ ವರ್ಕಾಡಿ
|

Updated on: May 04, 2024 | 5:19 PM

ಇಟಲಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವೃದ್ಧೆ ಮಾಡಿದ ಒಂದು ತಪ್ಪು ನಾಲ್ಕು ತಿಂಗಳ ಮಗುವಿನ ಜೀವಕ್ಕೆ ಕಂಟಕವಾಗಿದೆ. ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಾಲ್ ಬೆರೆಸಿದ್ದು, ಅರ್ಧ ಹಾಲು ಕುಡಿದ ಮಗು ಅಳಲು ಆರಂಭಿಸಿದೆ. ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಅನುಮಾನಗೊಂಡು ಉಳಿದ ಹಾಲಿನ ವಾಸನೆ ನೋಡಿದಾಗ ವೃದ್ಧೆಗೆ ಹಾಲಿನಲ್ಲಿ ಆಲ್ಕೋಹಾಲ್ ಮಿಶ್ರಣವಾಗಿರುವುದು ತಿಳಿದುಬಂದಿದೆ. ಇದರಿಂದ ಅಘಾತಕೊಳಗಾದ ವೃದ್ಧೆ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯಿಂದ ಕೋಮಾ ಸ್ಥಿತಿಗೆ ತಲುಪಿದ್ದ ಮಗು ನಂತರ ಬೇತರಿಸಿಕೊಂಡಿದ್ದು, ಸದ್ಯ ಮಗು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿನ ಸ್ಥಿತಿಯನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಮಗುವಿನ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ತಡವಾಗಿ ಬಂದ ಶಿಕ್ಷಕಿಯ ಬಟ್ಟೆ ಹಿಡಿದೆಳೆದು ಥಳಿಸಿದ ಪ್ರಿನ್ಸ್ ಪಾಲ್

ಇದೇ ವೇಳೆ ಕಳೆದ ವರ್ಷ ಬ್ರಿಟನ್ ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ಇಬ್ಬರು ಯುವತಿಯರು ತಮಾಷೆಯಾಗಿ 18 ತಿಂಗಳ ಮಗುವಿನ ಬಾಯಿಗೆ ಮದ್ಯದ ಬಾಟಲಿ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಷಯ ಕೋರ್ಟ್​​ ಮೆಟ್ಟಿಲೇರಿತ್ತು. ಆದರೆ, ಇಬ್ಬರೂ ತಮಾಷೆಗಾಗಿ ಮಾಡಿದ್ದನ್ನು ಒಪ್ಪಿಕೊಂಡಿದ್ದರಿಂದ ಮತ್ತು ಮಗು ಆರೋಗ್ಯವಾಗಿದ್ದರಿಂದ ನ್ಯಾಯಾಲಯ ಜೈಲು ಶಿಕ್ಷೆಗೆ ಬದಲಾಗಿ ಸ್ವಲ್ಪ ದಂಡ ವಿಧಿಸಿತ್ತು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!