AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಕ್ರವಾರ ನಮಾಜ್, ಸೋಮವಾರ ನಾಗದೇವರ ಆರಾಧನೆ; ಮುಸ್ಲಿಂ ಮಹಿಳೆಯ ಕತೆಯಿದು

ಜರೀನಾ ಎಂಬ ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಲವಾರು ವರ್ಷಗಳ ಹಿಂದೆ ಹಾವಿನ ಹುತ್ತ ಸೃಷ್ಟಿಯಾಗಿ, ಆ ಹಾವಿನ ಹುತ್ತ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿತ್ತು. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ಪ್ರತಿ ವಾರವೂ ನಾಗದೇವತೆಯನ್ನು ಪೂಜಿಸಲು ಆರಂಭಿಸಿದರು. ಮನೆಯಲ್ಲಿ ಆಕೆ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದರು.

ಸುಷ್ಮಾ ಚಕ್ರೆ
|

Updated on: Oct 17, 2024 | 8:30 PM

Share

ಹೈದರಾಬಾದ್: ಶುಕ್ರವಾರ ನಮಾಜ್, ನಾಗದೇವತೆಗೆ ಸೋಮವಾರ ಪೂಜೆ. ಜಾತಿ, ಧರ್ಮದ ಭೇದವಿಲ್ಲದೆ ಮುಸ್ಲಿಂ ಮಹಿಳೆಯೊಬ್ಬರು ಮನೆಯಲ್ಲಿ ದೀಪ ಹಚ್ಚಿ, ಪೂಜೆ ಮಾಡುತ್ತಾರೆ. ಪ್ರತಿ ಸೋಮವಾರ ನಾಗದೇವರ ಪೂಜೆ ಮಾಡುತ್ತಾರೆ. ಶ್ರೀಸತ್ಯಸಾಯಿ ಜಿಲ್ಲೆಯ ಮಡಕಶಿರಾ ಮಂಡಲದ ಅಯ್ಯವಾರಿಪಲ್ಲಿಯಲ್ಲಿ ಮುಸ್ಲಿಂ ಮಹಿಳೆ ಜರೀನಾ ಎಂಬುವವರ ಮನೆಯಲ್ಲಿ ಹಾವಿನ ಹುತ್ತವೊಂದು ಕಾಣಿಸಿಕೊಂಡಿದ್ದು, ಹಲವಾರು ವರ್ಷಗಳಿಂದ ದಿನದಿಂದ ದಿನಕ್ಕೆ ಅದು ಬೆಳೆಯುತ್ತಿದೆ. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ನಾಗದೇವರನ್ನು ಪೂಜಿಸಲು ಆರಂಭಿಸಿದ್ದಾರೆ. ಮನೆಯಲ್ಲಿ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದ್ದಾರೆ.

ಆಕೆಯ ಮನೆಯ ಸುತ್ತಮುತ್ತಲಿನ ಹಿಂದೂ ಭಕ್ತರು ಕೂಡ ಜರೀನಾ ಮನೆಗೆ ಆಗಮಿಸಿ ಹಾವಿನ ಹುತ್ತಕ್ಕೆ ಪೂಜೆ ಸಲ್ಲಿಸಲು ಆರಂಭಿಸಿದರು. ಜರೀನಾ ಅವರು ಸಾಂಪ್ರದಾಯಿಕ ಹಿಂದೂಗಳ ರೀತಿಯಲ್ಲಿ ಪೂಜೆಯನ್ನು ಮಾಡುತ್ತಾರೆ ಮತ್ತು ಭಕ್ತರಿಗೆ ತೀರ್ಥಪ್ರಸಾದವನ್ನು ವಿತರಿಸುತ್ತಾರೆ.

ಇದನ್ನೂ ಓದಿ: ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ರಸ್ತೆಯಲ್ಲಿ ಎಳೆದೊಯ್ದ ಚಾಲಕ; ವಿಡಿಯೋ ವೈರಲ್

ಜರೀನಾ ಮುಸ್ಲಿಂ ಮಹಿಳೆಯಾಗಿದ್ದರೂ, ಶುಕ್ರವಾರ ನಮಾಜ್ ಮಾಡಿ ಸೋಮವಾರ ಹಿಂದೂ ಸಂಪ್ರದಾಯದಂತೆ ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ಬಳಿಕ ಜರೀನಾ ಮನೆಗೆ ಸ್ಥಳೀಯ ಎಲ್ಲಾ ಜಾತಿಯ ಜನರನ್ನು ಸ್ವಾಗತಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ತನ್ನ ಮನೆಯಲ್ಲಿ ಹಾವಿನ ಹುತ್ತ ಬೆಳೆಯುತ್ತಿದೆ ಎನ್ನುತ್ತಾರೆ ಜರೀನಾ. ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಇಡೀ ಕುಟುಂಬ ಸೋಮವಾರ ನಾಗದೇವತೆಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಎನ್ನುತ್ತಾರೆ ಜರೀನಾ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್