AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಕ್ರವಾರ ನಮಾಜ್, ಸೋಮವಾರ ನಾಗದೇವರ ಆರಾಧನೆ; ಮುಸ್ಲಿಂ ಮಹಿಳೆಯ ಕತೆಯಿದು

ಜರೀನಾ ಎಂಬ ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಲವಾರು ವರ್ಷಗಳ ಹಿಂದೆ ಹಾವಿನ ಹುತ್ತ ಸೃಷ್ಟಿಯಾಗಿ, ಆ ಹಾವಿನ ಹುತ್ತ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿತ್ತು. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ಪ್ರತಿ ವಾರವೂ ನಾಗದೇವತೆಯನ್ನು ಪೂಜಿಸಲು ಆರಂಭಿಸಿದರು. ಮನೆಯಲ್ಲಿ ಆಕೆ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದರು.

ಸುಷ್ಮಾ ಚಕ್ರೆ
|

Updated on: Oct 17, 2024 | 8:30 PM

Share

ಹೈದರಾಬಾದ್: ಶುಕ್ರವಾರ ನಮಾಜ್, ನಾಗದೇವತೆಗೆ ಸೋಮವಾರ ಪೂಜೆ. ಜಾತಿ, ಧರ್ಮದ ಭೇದವಿಲ್ಲದೆ ಮುಸ್ಲಿಂ ಮಹಿಳೆಯೊಬ್ಬರು ಮನೆಯಲ್ಲಿ ದೀಪ ಹಚ್ಚಿ, ಪೂಜೆ ಮಾಡುತ್ತಾರೆ. ಪ್ರತಿ ಸೋಮವಾರ ನಾಗದೇವರ ಪೂಜೆ ಮಾಡುತ್ತಾರೆ. ಶ್ರೀಸತ್ಯಸಾಯಿ ಜಿಲ್ಲೆಯ ಮಡಕಶಿರಾ ಮಂಡಲದ ಅಯ್ಯವಾರಿಪಲ್ಲಿಯಲ್ಲಿ ಮುಸ್ಲಿಂ ಮಹಿಳೆ ಜರೀನಾ ಎಂಬುವವರ ಮನೆಯಲ್ಲಿ ಹಾವಿನ ಹುತ್ತವೊಂದು ಕಾಣಿಸಿಕೊಂಡಿದ್ದು, ಹಲವಾರು ವರ್ಷಗಳಿಂದ ದಿನದಿಂದ ದಿನಕ್ಕೆ ಅದು ಬೆಳೆಯುತ್ತಿದೆ. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ನಾಗದೇವರನ್ನು ಪೂಜಿಸಲು ಆರಂಭಿಸಿದ್ದಾರೆ. ಮನೆಯಲ್ಲಿ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದ್ದಾರೆ.

ಆಕೆಯ ಮನೆಯ ಸುತ್ತಮುತ್ತಲಿನ ಹಿಂದೂ ಭಕ್ತರು ಕೂಡ ಜರೀನಾ ಮನೆಗೆ ಆಗಮಿಸಿ ಹಾವಿನ ಹುತ್ತಕ್ಕೆ ಪೂಜೆ ಸಲ್ಲಿಸಲು ಆರಂಭಿಸಿದರು. ಜರೀನಾ ಅವರು ಸಾಂಪ್ರದಾಯಿಕ ಹಿಂದೂಗಳ ರೀತಿಯಲ್ಲಿ ಪೂಜೆಯನ್ನು ಮಾಡುತ್ತಾರೆ ಮತ್ತು ಭಕ್ತರಿಗೆ ತೀರ್ಥಪ್ರಸಾದವನ್ನು ವಿತರಿಸುತ್ತಾರೆ.

ಇದನ್ನೂ ಓದಿ: ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ರಸ್ತೆಯಲ್ಲಿ ಎಳೆದೊಯ್ದ ಚಾಲಕ; ವಿಡಿಯೋ ವೈರಲ್

ಜರೀನಾ ಮುಸ್ಲಿಂ ಮಹಿಳೆಯಾಗಿದ್ದರೂ, ಶುಕ್ರವಾರ ನಮಾಜ್ ಮಾಡಿ ಸೋಮವಾರ ಹಿಂದೂ ಸಂಪ್ರದಾಯದಂತೆ ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ಬಳಿಕ ಜರೀನಾ ಮನೆಗೆ ಸ್ಥಳೀಯ ಎಲ್ಲಾ ಜಾತಿಯ ಜನರನ್ನು ಸ್ವಾಗತಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ತನ್ನ ಮನೆಯಲ್ಲಿ ಹಾವಿನ ಹುತ್ತ ಬೆಳೆಯುತ್ತಿದೆ ಎನ್ನುತ್ತಾರೆ ಜರೀನಾ. ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಇಡೀ ಕುಟುಂಬ ಸೋಮವಾರ ನಾಗದೇವತೆಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಎನ್ನುತ್ತಾರೆ ಜರೀನಾ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ