AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಕ್ರವಾರ ನಮಾಜ್, ಸೋಮವಾರ ನಾಗದೇವರ ಆರಾಧನೆ; ಮುಸ್ಲಿಂ ಮಹಿಳೆಯ ಕತೆಯಿದು

ಜರೀನಾ ಎಂಬ ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಲವಾರು ವರ್ಷಗಳ ಹಿಂದೆ ಹಾವಿನ ಹುತ್ತ ಸೃಷ್ಟಿಯಾಗಿ, ಆ ಹಾವಿನ ಹುತ್ತ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿತ್ತು. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ಪ್ರತಿ ವಾರವೂ ನಾಗದೇವತೆಯನ್ನು ಪೂಜಿಸಲು ಆರಂಭಿಸಿದರು. ಮನೆಯಲ್ಲಿ ಆಕೆ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದರು.

ಸುಷ್ಮಾ ಚಕ್ರೆ
|

Updated on: Oct 17, 2024 | 8:30 PM

Share

ಹೈದರಾಬಾದ್: ಶುಕ್ರವಾರ ನಮಾಜ್, ನಾಗದೇವತೆಗೆ ಸೋಮವಾರ ಪೂಜೆ. ಜಾತಿ, ಧರ್ಮದ ಭೇದವಿಲ್ಲದೆ ಮುಸ್ಲಿಂ ಮಹಿಳೆಯೊಬ್ಬರು ಮನೆಯಲ್ಲಿ ದೀಪ ಹಚ್ಚಿ, ಪೂಜೆ ಮಾಡುತ್ತಾರೆ. ಪ್ರತಿ ಸೋಮವಾರ ನಾಗದೇವರ ಪೂಜೆ ಮಾಡುತ್ತಾರೆ. ಶ್ರೀಸತ್ಯಸಾಯಿ ಜಿಲ್ಲೆಯ ಮಡಕಶಿರಾ ಮಂಡಲದ ಅಯ್ಯವಾರಿಪಲ್ಲಿಯಲ್ಲಿ ಮುಸ್ಲಿಂ ಮಹಿಳೆ ಜರೀನಾ ಎಂಬುವವರ ಮನೆಯಲ್ಲಿ ಹಾವಿನ ಹುತ್ತವೊಂದು ಕಾಣಿಸಿಕೊಂಡಿದ್ದು, ಹಲವಾರು ವರ್ಷಗಳಿಂದ ದಿನದಿಂದ ದಿನಕ್ಕೆ ಅದು ಬೆಳೆಯುತ್ತಿದೆ. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ನಾಗದೇವರನ್ನು ಪೂಜಿಸಲು ಆರಂಭಿಸಿದ್ದಾರೆ. ಮನೆಯಲ್ಲಿ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದ್ದಾರೆ.

ಆಕೆಯ ಮನೆಯ ಸುತ್ತಮುತ್ತಲಿನ ಹಿಂದೂ ಭಕ್ತರು ಕೂಡ ಜರೀನಾ ಮನೆಗೆ ಆಗಮಿಸಿ ಹಾವಿನ ಹುತ್ತಕ್ಕೆ ಪೂಜೆ ಸಲ್ಲಿಸಲು ಆರಂಭಿಸಿದರು. ಜರೀನಾ ಅವರು ಸಾಂಪ್ರದಾಯಿಕ ಹಿಂದೂಗಳ ರೀತಿಯಲ್ಲಿ ಪೂಜೆಯನ್ನು ಮಾಡುತ್ತಾರೆ ಮತ್ತು ಭಕ್ತರಿಗೆ ತೀರ್ಥಪ್ರಸಾದವನ್ನು ವಿತರಿಸುತ್ತಾರೆ.

ಇದನ್ನೂ ಓದಿ: ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ರಸ್ತೆಯಲ್ಲಿ ಎಳೆದೊಯ್ದ ಚಾಲಕ; ವಿಡಿಯೋ ವೈರಲ್

ಜರೀನಾ ಮುಸ್ಲಿಂ ಮಹಿಳೆಯಾಗಿದ್ದರೂ, ಶುಕ್ರವಾರ ನಮಾಜ್ ಮಾಡಿ ಸೋಮವಾರ ಹಿಂದೂ ಸಂಪ್ರದಾಯದಂತೆ ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ಬಳಿಕ ಜರೀನಾ ಮನೆಗೆ ಸ್ಥಳೀಯ ಎಲ್ಲಾ ಜಾತಿಯ ಜನರನ್ನು ಸ್ವಾಗತಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ತನ್ನ ಮನೆಯಲ್ಲಿ ಹಾವಿನ ಹುತ್ತ ಬೆಳೆಯುತ್ತಿದೆ ಎನ್ನುತ್ತಾರೆ ಜರೀನಾ. ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಇಡೀ ಕುಟುಂಬ ಸೋಮವಾರ ನಾಗದೇವತೆಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಎನ್ನುತ್ತಾರೆ ಜರೀನಾ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ