AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಕ್ರವಾರ ನಮಾಜ್, ಸೋಮವಾರ ನಾಗದೇವರ ಆರಾಧನೆ; ಮುಸ್ಲಿಂ ಮಹಿಳೆಯ ಕತೆಯಿದು

ಜರೀನಾ ಎಂಬ ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಲವಾರು ವರ್ಷಗಳ ಹಿಂದೆ ಹಾವಿನ ಹುತ್ತ ಸೃಷ್ಟಿಯಾಗಿ, ಆ ಹಾವಿನ ಹುತ್ತ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿತ್ತು. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ಪ್ರತಿ ವಾರವೂ ನಾಗದೇವತೆಯನ್ನು ಪೂಜಿಸಲು ಆರಂಭಿಸಿದರು. ಮನೆಯಲ್ಲಿ ಆಕೆ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದರು.

ಸುಷ್ಮಾ ಚಕ್ರೆ
|

Updated on: Oct 17, 2024 | 8:30 PM

Share

ಹೈದರಾಬಾದ್: ಶುಕ್ರವಾರ ನಮಾಜ್, ನಾಗದೇವತೆಗೆ ಸೋಮವಾರ ಪೂಜೆ. ಜಾತಿ, ಧರ್ಮದ ಭೇದವಿಲ್ಲದೆ ಮುಸ್ಲಿಂ ಮಹಿಳೆಯೊಬ್ಬರು ಮನೆಯಲ್ಲಿ ದೀಪ ಹಚ್ಚಿ, ಪೂಜೆ ಮಾಡುತ್ತಾರೆ. ಪ್ರತಿ ಸೋಮವಾರ ನಾಗದೇವರ ಪೂಜೆ ಮಾಡುತ್ತಾರೆ. ಶ್ರೀಸತ್ಯಸಾಯಿ ಜಿಲ್ಲೆಯ ಮಡಕಶಿರಾ ಮಂಡಲದ ಅಯ್ಯವಾರಿಪಲ್ಲಿಯಲ್ಲಿ ಮುಸ್ಲಿಂ ಮಹಿಳೆ ಜರೀನಾ ಎಂಬುವವರ ಮನೆಯಲ್ಲಿ ಹಾವಿನ ಹುತ್ತವೊಂದು ಕಾಣಿಸಿಕೊಂಡಿದ್ದು, ಹಲವಾರು ವರ್ಷಗಳಿಂದ ದಿನದಿಂದ ದಿನಕ್ಕೆ ಅದು ಬೆಳೆಯುತ್ತಿದೆ. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ನಾಗದೇವರನ್ನು ಪೂಜಿಸಲು ಆರಂಭಿಸಿದ್ದಾರೆ. ಮನೆಯಲ್ಲಿ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದ್ದಾರೆ.

ಆಕೆಯ ಮನೆಯ ಸುತ್ತಮುತ್ತಲಿನ ಹಿಂದೂ ಭಕ್ತರು ಕೂಡ ಜರೀನಾ ಮನೆಗೆ ಆಗಮಿಸಿ ಹಾವಿನ ಹುತ್ತಕ್ಕೆ ಪೂಜೆ ಸಲ್ಲಿಸಲು ಆರಂಭಿಸಿದರು. ಜರೀನಾ ಅವರು ಸಾಂಪ್ರದಾಯಿಕ ಹಿಂದೂಗಳ ರೀತಿಯಲ್ಲಿ ಪೂಜೆಯನ್ನು ಮಾಡುತ್ತಾರೆ ಮತ್ತು ಭಕ್ತರಿಗೆ ತೀರ್ಥಪ್ರಸಾದವನ್ನು ವಿತರಿಸುತ್ತಾರೆ.

ಇದನ್ನೂ ಓದಿ: ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ರಸ್ತೆಯಲ್ಲಿ ಎಳೆದೊಯ್ದ ಚಾಲಕ; ವಿಡಿಯೋ ವೈರಲ್

ಜರೀನಾ ಮುಸ್ಲಿಂ ಮಹಿಳೆಯಾಗಿದ್ದರೂ, ಶುಕ್ರವಾರ ನಮಾಜ್ ಮಾಡಿ ಸೋಮವಾರ ಹಿಂದೂ ಸಂಪ್ರದಾಯದಂತೆ ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ಬಳಿಕ ಜರೀನಾ ಮನೆಗೆ ಸ್ಥಳೀಯ ಎಲ್ಲಾ ಜಾತಿಯ ಜನರನ್ನು ಸ್ವಾಗತಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ತನ್ನ ಮನೆಯಲ್ಲಿ ಹಾವಿನ ಹುತ್ತ ಬೆಳೆಯುತ್ತಿದೆ ಎನ್ನುತ್ತಾರೆ ಜರೀನಾ. ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಇಡೀ ಕುಟುಂಬ ಸೋಮವಾರ ನಾಗದೇವತೆಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಎನ್ನುತ್ತಾರೆ ಜರೀನಾ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ