AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಕ್ರವಾರ ನಮಾಜ್, ಸೋಮವಾರ ನಾಗದೇವರ ಆರಾಧನೆ; ಮುಸ್ಲಿಂ ಮಹಿಳೆಯ ಕತೆಯಿದು

ಜರೀನಾ ಎಂಬ ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಲವಾರು ವರ್ಷಗಳ ಹಿಂದೆ ಹಾವಿನ ಹುತ್ತ ಸೃಷ್ಟಿಯಾಗಿ, ಆ ಹಾವಿನ ಹುತ್ತ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿತ್ತು. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ಪ್ರತಿ ವಾರವೂ ನಾಗದೇವತೆಯನ್ನು ಪೂಜಿಸಲು ಆರಂಭಿಸಿದರು. ಮನೆಯಲ್ಲಿ ಆಕೆ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದರು.

ಸುಷ್ಮಾ ಚಕ್ರೆ
|

Updated on: Oct 17, 2024 | 8:30 PM

Share

ಹೈದರಾಬಾದ್: ಶುಕ್ರವಾರ ನಮಾಜ್, ನಾಗದೇವತೆಗೆ ಸೋಮವಾರ ಪೂಜೆ. ಜಾತಿ, ಧರ್ಮದ ಭೇದವಿಲ್ಲದೆ ಮುಸ್ಲಿಂ ಮಹಿಳೆಯೊಬ್ಬರು ಮನೆಯಲ್ಲಿ ದೀಪ ಹಚ್ಚಿ, ಪೂಜೆ ಮಾಡುತ್ತಾರೆ. ಪ್ರತಿ ಸೋಮವಾರ ನಾಗದೇವರ ಪೂಜೆ ಮಾಡುತ್ತಾರೆ. ಶ್ರೀಸತ್ಯಸಾಯಿ ಜಿಲ್ಲೆಯ ಮಡಕಶಿರಾ ಮಂಡಲದ ಅಯ್ಯವಾರಿಪಲ್ಲಿಯಲ್ಲಿ ಮುಸ್ಲಿಂ ಮಹಿಳೆ ಜರೀನಾ ಎಂಬುವವರ ಮನೆಯಲ್ಲಿ ಹಾವಿನ ಹುತ್ತವೊಂದು ಕಾಣಿಸಿಕೊಂಡಿದ್ದು, ಹಲವಾರು ವರ್ಷಗಳಿಂದ ದಿನದಿಂದ ದಿನಕ್ಕೆ ಅದು ಬೆಳೆಯುತ್ತಿದೆ. ಹಾಗಾಗಿ ಆ ಮುಸ್ಲಿಂ ಮಹಿಳೆ ಜರೀನಾ ಹಿಂದೂ ಸಂಪ್ರದಾಯದಂತೆ ನಾಗದೇವರನ್ನು ಪೂಜಿಸಲು ಆರಂಭಿಸಿದ್ದಾರೆ. ಮನೆಯಲ್ಲಿ ಹಾವಿನ ಹುತ್ತಕ್ಕೆ ಪೂಜೆ ಮಾಡತೊಡಗಿದ್ದಾರೆ.

ಆಕೆಯ ಮನೆಯ ಸುತ್ತಮುತ್ತಲಿನ ಹಿಂದೂ ಭಕ್ತರು ಕೂಡ ಜರೀನಾ ಮನೆಗೆ ಆಗಮಿಸಿ ಹಾವಿನ ಹುತ್ತಕ್ಕೆ ಪೂಜೆ ಸಲ್ಲಿಸಲು ಆರಂಭಿಸಿದರು. ಜರೀನಾ ಅವರು ಸಾಂಪ್ರದಾಯಿಕ ಹಿಂದೂಗಳ ರೀತಿಯಲ್ಲಿ ಪೂಜೆಯನ್ನು ಮಾಡುತ್ತಾರೆ ಮತ್ತು ಭಕ್ತರಿಗೆ ತೀರ್ಥಪ್ರಸಾದವನ್ನು ವಿತರಿಸುತ್ತಾರೆ.

ಇದನ್ನೂ ಓದಿ: ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ರಸ್ತೆಯಲ್ಲಿ ಎಳೆದೊಯ್ದ ಚಾಲಕ; ವಿಡಿಯೋ ವೈರಲ್

ಜರೀನಾ ಮುಸ್ಲಿಂ ಮಹಿಳೆಯಾಗಿದ್ದರೂ, ಶುಕ್ರವಾರ ನಮಾಜ್ ಮಾಡಿ ಸೋಮವಾರ ಹಿಂದೂ ಸಂಪ್ರದಾಯದಂತೆ ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ಬಳಿಕ ಜರೀನಾ ಮನೆಗೆ ಸ್ಥಳೀಯ ಎಲ್ಲಾ ಜಾತಿಯ ಜನರನ್ನು ಸ್ವಾಗತಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ತನ್ನ ಮನೆಯಲ್ಲಿ ಹಾವಿನ ಹುತ್ತ ಬೆಳೆಯುತ್ತಿದೆ ಎನ್ನುತ್ತಾರೆ ಜರೀನಾ. ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಇಡೀ ಕುಟುಂಬ ಸೋಮವಾರ ನಾಗದೇವತೆಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಎನ್ನುತ್ತಾರೆ ಜರೀನಾ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!