AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಣಾಸಿ: ಮಳೆಗಾಗಿ ಕಪ್ಪೆಗಳಿಗೆ ಮದುವೆ; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಸ್ಥಳೀಯ ದಂಪತಿಗಳು ಹಿಂದೂ ಪುರೋಹಿತರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಾನಗಳ ಮೂಲಕ ಕಪ್ಪೆಗಳಿಗೆ ಮದುವೆ ಮಾಡಿಸುತ್ತಿರುವುದನ್ನು ಕಾಣಬಹುದು. ಆರಂಭದಲ್ಲಿ, ಕಪ್ಪೆಗಳಿಗೆ ವಧು ವರರಂತೆ ಕೆಂಪು ಬಣ್ಣದ ಶಾಲು ಹೊದಿಸಿ ನಂತರ ಹೂವಿನ ಹಾರಗಳನ್ನು ಹಾಕುತ್ತಿರುವುದನ್ನು ಕಾಣಬಹುದು.

ವಾರಣಾಸಿ: ಮಳೆಗಾಗಿ ಕಪ್ಪೆಗಳಿಗೆ ಮದುವೆ; ವಿಡಿಯೋ ಇಲ್ಲಿದೆ ನೋಡಿ
Frog Wedding
ಅಕ್ಷತಾ ವರ್ಕಾಡಿ
|

Updated on: Jun 14, 2024 | 5:53 PM

Share

ಜನರು ಸತ್ತವರ ಮದುವೆಯನ್ನು ನಡೆಸುವ ‘ಪ್ರೇತ ವಿವಾಹ’ವನ್ನು ಇತ್ತೀಚಿಗೆ ಭಾರೀ ಸುದ್ದಿಯಲ್ಲಿತ್ತು. ಇದೀಗ ಕಪ್ಪೆಗಳಿಗೆ ಮದುವೆ ಮಾಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವಾರಣಾಸಿಯಲ್ಲಿ ಇತ್ತೀಚೆಗೆ ಕಪ್ಪೆ ವಿವಾಹವನ್ನು ನಡೆಸುತ್ತಿರುವುದು ಕಂಡುಬಂದಿದೆ, ಇದನ್ನು ವರುಣ ದೇವರ ಆಶೀರ್ವಾದವನ್ನು ಕೋರಲು ಮತ್ತು ಮಳೆ ಬರಿಸಲು ಹಿಂದಿನಿಂದಲೂ ಇಲ್ಲಿ ಮಾಡಿಕೊಂಡು ಬರಲಾಗುತ್ತಿದೆ ಎಂದು ವರದಿಯಾಗಿದೆ.

ಎರಡು ಕಪ್ಪೆಗಳ ಮದುವೆಯ ದೃಶ್ಯಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ವಿಡಿಯೋದಲ್ಲಿ ಸ್ಥಳೀಯ ದಂಪತಿಗಳು ಹಿಂದೂ ಪುರೋಹಿತರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಾನಗಳ ಮೂಲಕ ಕಪ್ಪೆಗಳಿಗೆ ಮದುವೆ ಮಾಡಿಸುತ್ತಿರುವುದನ್ನು ಕಾಣಬಹುದು. ಆರಂಭದಲ್ಲಿ, ಕಪ್ಪೆಗಳಿಗೆ ವಧು ವರರಂತೆ ಕೆಂಪು ಬಣ್ಣದ ಶಾಲು ಹೊದಿಸಿ ನಂತರ ಹೂವಿನ ಹಾರಗಳನ್ನು ಹಾಕುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

ಸಂಗೀತ ಮತ್ತು ಸಂಭ್ರಮದ ಲಹರಿಯೊಂದಿಗೆ ಸ್ಥಳೀಯರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಪ್ಪೆ ವಿವಾಹವನ್ನು ನೆರವೇರಿಸಿದ್ದಾರೆ. ಮದುವೆಯ ಸಂದರ್ಭದಲ್ಲಿ ಮಹಿಳೆಯರ ಗುಂಪು ವಾದ್ಯಗಳನ್ನು ಬಾರಿಸುವುದು ಮತ್ತು ಭಜನೆಗಳನ್ನು ಹಾಡುವುದು ಕಂಡುಬಂದಿದೆ. ವರದಿಯ ಪ್ರಕಾರ, ಈ ಆಚರಣೆಯು ಪ್ರದೇಶದ ಜನರು ಮಳೆಗಾಗಿ ಮತ್ತು ಸುಡುವ ಶಾಖದಿಂದ ಪರಿಹಾರಕ್ಕಾಗಿ ಪ್ರಾರ್ಥಿಸುವ ವಿಧಾನವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!