AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಓಲಾ ತಗೊಂಡ್ರೆ ನಿಮ್ಮ ಜೀವನವೆಲ್ಲಾ ಗೋಳು ದಯವಿಟ್ಟು ಖರೀದಿಸಲೇಬೇಡಿ ಎಂದು ಬೆಂಗಳೂರಿನ ಮಹಿಳೆ

ಇಂಧನದ ಬೆಲೆಯು ಗಗನಕ್ಕೆ ಏರುತ್ತಿರುವ ಬೆನ್ನಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುತ್ತ ಮನಸ್ಸು ಮಾಡುತ್ತಿದ್ದಾರೆ. ಆದರೆ ಓಲಾ ಕಂಪನಿಯ ವಾಹನ ಮತ್ತು ಸರ್ವಿಸ್ ವಿಚಾರದಲ್ಲಿ ಗ್ರಾಹಕರು ಅನುಭವಿಸುತ್ತಿರುವ ಸಮಸ್ಯೆಗಳು ಒಂದೆರಡಲ್ಲ. ಇದೀಗ ಮಹಿಳೆಯೊಬ್ಬರು, ಬೇರೆ ಯಾವುದೇ ಗ್ರಾಹಕರು ಓಲಾ ಗಾಡಿಯನ್ನು ತೆಗೆದುಕೊಳ್ಳಬೇಡಿ' ಎಂದು ಸಲಹೆ ನೀಡುವ ಮೂಲಕ ಪೋಸ್ಟ್ ಮಾಡಿದ್ದು, ಈ ಪೋಸ್ಟ್ ವೈರಲ್ ಆಗಿದೆ.

Viral: ಓಲಾ ತಗೊಂಡ್ರೆ ನಿಮ್ಮ ಜೀವನವೆಲ್ಲಾ ಗೋಳು ದಯವಿಟ್ಟು ಖರೀದಿಸಲೇಬೇಡಿ ಎಂದು ಬೆಂಗಳೂರಿನ ಮಹಿಳೆ
ವೈರಲ್​​ ಪೋಸ್ಟ್​
ಸಾಯಿನಂದಾ
| Edited By: |

Updated on: Sep 14, 2024 | 5:24 PM

Share

ಮಾರುಕಟ್ಟೆಯಲ್ಲಿ ವಿವಿಧ ಕಂಪೆನಿಯ ಎಲೆಕ್ಟ್ರಿಕ್ ವಾಹನಗಳಿದ್ದು, ಆದರೆ ಓಲಾ ಕಂಪೆನಿಯ ಸೇವೆಯಲ್ಲಿ ಗ್ರಾಹಕರು ಬೇಸರಗೊಂಡಿದ್ದಾರೆ. ಈ ಕಂಪೆನಿಯು ನೀಡುವ ಸೇವೆಯು ಕಳಪೆ ಮಟ್ಟದ್ದಾಗಿದ್ದು, ಈ ಬಗ್ಗೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸುವ ಘಟನೆಗಳು ಬೆಳಕಿಗೆ ಬಂದಿದೆ. ಆದರೆ ಬೆಂಗಳೂರಿನ ಮಹಿಳೆಯೊಬ್ಬರು, ಓಲಾ ಸಂಸ್ಥೆಯ ಕೆಟ್ಟ ಗ್ರಾಹಕ ಸೇವೆಯಿಂದ ಬೇಸೆತ್ತು, ಪೋಸ್ಟ್ ವೊಂದನ್ನು ಮಾಡಿದ್ದಾರೆ.

ನಿಶಾ ಗೌರಿ (@Nisha_gowru) ಎನ್ನುವ ಹೆಸರಿನ ಎಕ್ಸ್ ಬಳಕೆದಾರರು ಇದೀಗ ಓಲಾ ಸ್ಕೂಟರ್ ಖರೀದಿ ಮಾಡದಂತೆ ಜನರಿಗೆ ಮನವಿ ಮಾಡುತ್ತಿದ್ದಾರೆ. ಓಲಾ ಒಂದು ಡಬ್ಬಾ ಗಾಡಿ ನೀವು ಖರೀದಿ ಮಾಡಿದರೆ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ ಎಂದಿದ್ದಾರೆ. ಹೌದು, ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಓಲಾ ತಗೊಂಡ್ರೆ ನಿಮ್ಮ ಜೀವನ ಗೋಳು, ಓಲಾ ವಿರುದ್ಧ ಜಾಗೃತಿಯನ್ನು ಮೂಡಿಸುತ್ತಿದ್ದೇನೆ. ಈ ಐಡಿಯಾ ಕೊಟ್ಟಿದ್ದಕ್ಕೆ ಥ್ಯಾಂಕ್ಸ್” ಎಂದು ತಮ್ಮ ಸ್ನೇಹಿತರ ಹೆಸರನ್ನು ಟ್ಯಾಗ್ ಮಾಡಿದ್ದಾರೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಅಲ್ಲದೆ ತಮ್ಮ ಓಲಾ ಗಾಡಿ ಮೇಲೆ “ಪ್ರಿಯ ಕನ್ನಡಿಗರೆ, ಓಲಾ ಒಂದು ಡಬ್ಬಾ ಗಾಡಿ, ದಯವಿಟ್ಟು ತಗೋಬೇಡಿ, ಓಲಾ ತಗೊಂಡ್ರೆ ನಿಮ್ಮ ಜೀವನ ಗೋಳು. ದಯವಿಟ್ಟು ಓಲಾ ಎಲೆಕ್ಟ್ರಿಕ್ ವಾಹನವನ್ನು ಖರೀದಿಸಬೇಡಿ ಎಂದು ಬರೆದಿರುವ ಕಾಗದವನ್ನು ಅಂಟಿಸಿದ್ದಾರೆ. ಗೌರಿ ಅವರು ನಿರಾಶೆಗೊಂಡ ಕಾರಣವೇನು ಎನ್ನುವುದನ್ನು ರಿವೀಲ್ ಮಾಡಿಲ್ಲ. ಆದರೆ ಪೋಸ್ಟ್ ವೈರಲ್ ಆಗಿದ್ದು, ಪೋಸ್ಟ್‌ಗೆ ಹಲವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಜ್ಯೂಸ್​​ನಲ್ಲಿ ಮೂತ್ರ ಬೆರೆಸಿ ಮಾರಾಟ: ಆರೋಪಿಯ ಬಂಧನ

ಬಳಕೆದಾರರೊಬ್ಬರು, ನಿಮ್ಮ ಓಲಾ ಸ್ಕೂಟಿಯ ನಿಖರವಾದ ಸಮಸ್ಯೆ ಏನು? ದಯವಿಟ್ಟು ತಿಳಿಸಿ, ಇದು ಇತರ ಬಳಕೆದಾರರಿಗೆ ಸಹ ಉಪಯುಕ್ತವಾಗಿರುತ್ತದೆ. ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬರು, ‘ಶೋರೂಂನ ಟೆಕ್ನಿಷಿಯನ್‌ಗಳಿಗೂ ಸ್ಕೂಟರ್‌ ಸರಿ ರಿಪೇರಿ ಮಾಡಲಾಗುತ್ತಿಲ್ಲ. ಟೆಕ್ನಿಷಿಯನ್‌ ಸುಮಾರು ಒಂದೂವರೆ ಗಂಟೆ ತೆಗೆದುಕೊಂಡು ರಿಪೇರಿ ಮಾಡಿದ್ರೂ ಮತ್ತೆ ಅದೇ ಸಮಸ್ಯೆಯು ಮುಂದುವರೆದಿದೆ’ ಎಂದಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ