Funny Robbery: ಕದಿಯಲು ಬಂದಿದ್ದ ಕಳ್ಳ ನಿದ್ರೆಗೆ ಜಾರಿದ, ಗೊರಕೆಯ ಸದ್ದಿಗೆ ಪೊಲೀಸರಿಗೆ ಮಾಹಿತಿ ನೀಡಿದ ಮನೆಯವರು

ಇತ್ತೀಚೆಗಷ್ಟೇ ಕಳ್ಳತನದ ಕುತೂಹಲಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಕದಿಯಲು ಬಂದಿದ್ದ ಕಳ್ಳನೊಬ್ಬ ಮನೆಗೆ ನುಗ್ಗಿದ ಕೂಡಲೇ ನಿದ್ದೆಗೆ ಜಾರಿದ್ದಾನೆ. ಈತನ ಗೊರಕೆ ಕೇಳಿದ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮತ್ತೊಂದು ತಮಾಷೆಯ ಸಂಗತಿಯೆಂದರೆ ಪೊಲೀಸರು ಬರುವವರೆಗೂ ಕಳ್ಳ ಗಾಢ ನಿದ್ರೆಯಲ್ಲಿಯೇ ಇದ್ದ. ಈ ಘಟನೆ ನಡೆದಿದ್ದು ಚೀನಾದ ಯುನ್ನಾನ್ ಪ್ರಾಂತ್ಯದಲ್ಲಿ. 

Funny Robbery: ಕದಿಯಲು ಬಂದಿದ್ದ ಕಳ್ಳ ನಿದ್ರೆಗೆ ಜಾರಿದ, ಗೊರಕೆಯ ಸದ್ದಿಗೆ ಪೊಲೀಸರಿಗೆ ಮಾಹಿತಿ ನೀಡಿದ ಮನೆಯವರು
Funny Robbery StoryImage Credit source: Pinterest
Follow us
|

Updated on:Nov 22, 2023 | 10:44 AM

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿಯ ಪ್ರಕಾರ, ಕಳ್ಳನೊಬ್ಬ ಕಳ್ಳತನ ಮಾಡುವ ಉದ್ದೇಶದಿಂದ ಮನೆಗೆ ನುಗ್ಗಿದ್ದನಾದರೂ ಆ ವೇಳೆ ಮನೆಯವರು ಎಚ್ಚರಗೊಂಡಿದ್ದರು. ಅವರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳುತ್ತಿದ್ದರು, ಆದ್ದರಿಂದ ಮನೆಯವರು ಮಲಗುವ ವರೆಗೆ ಕಾಯಬೇಕು ಎಂದು ಒಂದು ಕೋಣೆಯಲ್ಲಿ ಕೆಲ ಹೊತ್ತಿನ ವರೆಗೆ ಕಾಯುತ್ತಾ ಕೂತಿದ್ದಾನೆ. ಇದಲ್ಲದೇ ನಿದ್ದೆ ಬಾರದಿರಲು ಸಿಗರೇಟ್ ಸೇದುತ್ತಾ ಮನೆಯವರು ಮಲಗುವ ವರೆಗೆ ಕಾಯುತ್ತಾ ಕುಳಿತ್ತಿದ್ದಾನೆ. ಆದರೆ ತಮಾಷೆಯ ಸಂಗತಿಯೆಂದರೆ ಮನೆಯವರು ಮಲಗುವ ಮುನ್ನವೇ ಈತ ನಿದ್ದೆಗೆ ಜಾರಿದ್ದಾನೆ. ಇದಲ್ಲದೇ ಗೊರಕೆ ಹೊಡೆಯಲು ಪ್ರಾರಂಭಿಸಿದ್ದಾನೆ. ಈತನ ಗೊರಕೆಯ ಸದ್ದು ಕೇಳಿದ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮತ್ತೊಂದು ತಮಾಷೆಯ ಸಂಗತಿಯೆಂದರೆ ಪೊಲೀಸರು ಬರುವವರೆಗೂ ಕಳ್ಳ ಗಾಢ ನಿದ್ರೆಯಲ್ಲಿಯೇ ಇದ್ದ.

ವರದಿಗಳ ಪ್ರಕಾರ, ಕಳ್ಳ ಮಲಗಿದ್ದಾಗ ಜೋರಾಗಿ ಗೊರಕೆ ಹೊಡೆಯಲು ಪ್ರಾರಂಭಿಸಿದ್ದಾನೆ. ಇಷ್ಟೊಂದು ಜೋರಾಗಿ ಎಲ್ಲಿಂದ ಗೊರಕೆ ಸದ್ದು ಬರುತ್ತಿದೆ ಎಂದು ಮನೆಯವರು ಹುಡುಕಲು ಪ್ರಾರಂಭಿಸಿದ್ದಾರೆ. ಮೊದಮೊದಲು ಗೊರಕೆಯ ಸದ್ದು ನೆರೆಮನೆಯವರದ್ದಾಗಿರಬಹುದು ಎಂದು ಮನೆಯ ಯಜಮಾನಿ ಯೋಚಿಸಿ ತನ್ನ ಕೋಣೆಯಲ್ಲಿ ಹೋಗಿ ಮಲಗಿದ್ದಾಳೆ. ಸುಮಾರು ಅರ್ಧ ಘಂಟೆಯ ನಂತರ ಮಗುವಿಗೆ ಹಾಲು ಬಾಟಲಿಯನ್ನು ತರಲು ಬಂದಾಗ ಗೊರಕೆ ಸದ್ದು ಮನೆಯಲ್ಲೇ ಎಲ್ಲಿಂದಲೋ ಬರುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಿ, ಉಳಿದ ಅರ್ಧ ಭಾಗವನ್ನು ಬಾಡಿಗೆಗೆ ನೀಡುತ್ತಾಳೆ ಈ ಮಹಿಳೆ

ಕೆಲ ಹೊತ್ತಿನ ಬಳಿಕ ಮನೆಯ ಮತ್ತೊಂದು ಕೋಣೆಯ ಬಾಗಿಲು ತೆರೆದು ನೋಡಿದಾಗ ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಮನೆಯೊಳಗೆ ಮಲಗಿರುವುದು ತಿಳಿದುಬಂದಿದೆ. ತಕ್ಷಣ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಲಿಸರ ವರದಿಯ ಪ್ರಕಾರ ಈತ ವೃತ್ತಿಪರ ಕಳ್ಳನಾಗಿದ್ದು, ಈ ಹಿಂದೆ ಕಳ್ಳತನ ಮಾಡಿ ಜೈಲಿಗೆ ಹೋಗಿದ್ದ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:38 am, Wed, 22 November 23

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ