ಅಂಬಾನಿಯ 15,000 ಕೋಟಿ ರೂ.ವೆಚ್ಚದ ಮನೆಯ ಒಳಾಂಗಣ ವಿನ್ಯಾಸಗಾರ್ತಿ ಯಾರು ಗೊತ್ತಾ? ಈಕೆ ಬಾಲಿವುಡ್​​​ನ ಸ್ಟಾರ್ ನಟನ ಪತ್ನಿ

ವಿಶ್ವದ ಅತಿ ದುಬಾರಿ ಮನೆಗಳಲ್ಲೊಂದಾದ ಮುಕೇಶ್ ಅಂಬಾನಿಯವರ ಮುಂಬೈನಲ್ಲಿರುವ 'ಅಂಟಿಲ್ಲಾ' ನಿವಾಸದ ಸಂಪೂರ್ಣ ಒಳಾಂಗಣವನ್ನು ಆಕರ್ಷಕವಾಗಿ ವಿನ್ಯಾಸಗೊಳಿಸಿರುವ ವಿನ್ಯಾಸಗಾರ್ತಿ ಬಾಲಿವುಡ್​​​ನ ಸ್ಟಾರ್ ನಟನ ಪತ್ನಿ. ಅಂಬಾನಿ ನಿವಾಸ ಹೊರತು ಪಡಿಸಿ ರಣಬೀರ್ ಕಪೂರ್, ಕರಣ್ ಜೋಹರ್ ಮತ್ತು ಆಲಿಯಾ ಭಟ್ ಸೇರಿದಂತೆ ಸಾಕಷ್ಟು ಬಾಲಿವುಡ್​​ ಸೆಲೆಬ್ರೆಟಿಗಳ ಮನೆಯನ್ನು ಕೂಡ ವಿನ್ಯಾಸಗೊಳಿಸಿದ್ದಾರೆ.

ಅಂಬಾನಿಯ 15,000 ಕೋಟಿ ರೂ.ವೆಚ್ಚದ ಮನೆಯ ಒಳಾಂಗಣ ವಿನ್ಯಾಸಗಾರ್ತಿ ಯಾರು ಗೊತ್ತಾ? ಈಕೆ ಬಾಲಿವುಡ್​​​ನ ಸ್ಟಾರ್ ನಟನ ಪತ್ನಿ
Mukesh Ambani's AntiliaImage Credit source: Pinterest
Follow us
|

Updated on: Feb 15, 2024 | 4:15 PM

ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವ ಮುಕೇಶ್ ಅಂಬಾನಿಯವರ ಮುಂಬೈನಲ್ಲಿರುವ ‘ಅಂಟಿಲ್ಲಾ’ ನಿವಾಸ ವಿಶ್ವದ ಅತಿ ದುಬಾರಿ ಮನೆಗಳಲ್ಲೊಂದು ಎಂಬ ಕೀರ್ತಿಗೆ ಭಾಜನವಾಗಿದೆ. ಈ ಮನೆ ನಿರ್ಮಾಣದ ವೆಚ್ಚ ಸುಮಾರು 15,000 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಭವ್ಯ ಬಂಗಲೆಯನ್ನು ಪ್ರಸಿದ್ಧ ವಾಸ್ತುಶಿಲ್ಪಿ ಸಂಸ್ಥೆ ಪರ್ಕಿನ್ಸ್ & ವಿಲ್ ನಿರ್ಮಿಸಿದ್ದಾರೆ. ಈ ಮನೆ ದಕ್ಷಿಣ ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿದ್ದು, 27 ಅಂತಸ್ತನ್ನು ಹೊಂದಿದೆ. ಸಕಲ ಸೌಕರ್ಯಗಳೊಂದಿಗೆ ಸುಸಜ್ಜಿತವಾಗಿ ನಿರ್ಮಿಸಲಾಗಿರುವ ಈ ಅರಮನೆ 4,00,000 ಚದರ ಅಡಿ ವಿಸ್ತರಿಸಿದೆ. ಥಿಯೇಟರ್, ಸ್ಪಾ, ಈಜುಕೊಳ, ಆರೋಗ್ಯ ಕೇಂದ್ರ, ಹೈಸ್ಪೀಡ್ ಲಿಫ್ಟ್, ಸ್ನೋ ರೂಮ್, 160ಕ್ಕೂ ಹೆಚ್ಚು ವಾಹನಗಳಿಗೆ ಗ್ಯಾರೇಜ್, ಮೂರು ಹೆಲಿಪ್ಯಾಡ್ ಗಳನ್ನು ಹೊಂದುವಂತೆ ವಿನ್ಯಾಸಗೊಳಿಸಲಾಗಿದೆ. ಈ ಕಟ್ಟಡವು ರಿಕ್ಟರ್ ಮಾಪಕದಲ್ಲಿ ಎಂಟು ತೀವ್ರತೆಯ ಭೂಕಂಪಗಳನ್ನು ತಡೆದುಕೊಳ್ಳಬಲ್ಲದು.

ಈ ಭವ್ಯ ಅರಮನೆಯ ಸಂಪೂರ್ಣ ಒಳಾಂಗಣವನ್ನು ಆಕರ್ಷಕವಾಗಿ ವಿನ್ಯಾಸಗೊಳಿಸಿರುವ ವಿನ್ಯಾಸಗಾರ್ತಿ ಬಾಲಿವುಡ್​​​ನ ಸ್ಟಾರ್ ನಟನ ಪತ್ನಿ. ಬಾಲಿವುಡ್ ಬಾದ್ ಷಾ, ನಟ ಶಾರುಖ್ ಖಾನ್ ಅವರ ಪತ್ನಿ ಗೌರಿ ಖಾನ್ ಅಂಬಾನಿಯ 15,000 ರೂ. ಕೋಟಿ ವೆಚ್ಚದ ಮನೆಯ ಒಳಾಂಗಣ ವಿನ್ಯಾಸಗಾರ್ತಿ. ಗೌರಿ ಖಾನ್​​ ನಿರ್ಮಾಪಕರಾಗಿ ಮಾತ್ರವಲ್ಲದೇ ಇಂಟೀರಿಯರ್ ಡಿಸೈನರ್ ಆಗಿ ಕೂಡ ಖ್ಯಾತಿ ಗಳಿಸಿದ್ದಾರೆ. ಗೌರಿ ಖಾನ್​​ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್‌ ಮತ್ತು ರೆಡ್ ಚಿಲ್ಲೀಸ್ ಇಂಟಿರಿಯರ್​​​ ಡಿಸೈನ್​​ನ ಸಹ ಸಂಸ್ಥಾಪಕರು.

ಇದನ್ನೂ ಓದಿ: ಭಿಕ್ಷಾಟನೆಯಿಂದಲೇ 45 ದಿನದಲ್ಲಿ 2.5ಲಕ್ಷ ಗಳಿಕೆ; ಹುಟ್ಟೂರಿನಲ್ಲಿ ಮನೆ,ಜಮೀನು ಖರೀದಿ ​​ ಗೌರಿ ಖಾನ್ ಅವರ ಇಂಟಿರೀಯರ್ ಡಿಸೈನ್ ಸಂಸ್ಥೆಯಿಂದ ಸಾಕಷ್ಟು ಸೆಲೆಬ್ರೆಟಿಗಳ ರಣಬೀರ್ ಕಪೂರ್, ಕರಣ್ ಜೋಹರ್ ಮತ್ತು ಆಲಿಯಾ ಭಟ್ ಅವರುಗಳ ಮನೆಯನ್ನು ವಿನ್ಯಾಸಗೊಳಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ