AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡವನ್ನೇ ಜಪಿಸುತ್ತಿರುವ ಜರ್ಮನ್​ನ ಬೆಡಗಿ ಜೆನ್ನಿಫರ್

Mysore : ನಾನು ಮೈಸೂರಿನಲ್ಲಿದ್ದಾಗೆಲ್ಲ ನೆಮ್ಮದಿಯನ್ನು ಅನುಭವಿಸಿದ್ದೇನೆ. ಇದೇ ನನ್ನ ತವರು ಎನ್ನಿಸುವಷ್ಟು ಆಪ್ತ ವಾತಾವರಣ ಇಲ್ಲಿದೆ ಎನ್ನುವ ಜೆನ್ನಿಫರಳ ಕನ್ನಡಕ್ಕೆ ಮನಸೋಲದವರಿಲ್ಲ. ಲಕ್ಷಗಟ್ಟಲೆ ಜನರು ಈಕೆಯ ವಿಡಿಯೋಗೆ ಫಿದಾ.

ಕನ್ನಡವನ್ನೇ ಜಪಿಸುತ್ತಿರುವ ಜರ್ಮನ್​ನ ಬೆಡಗಿ ಜೆನ್ನಿಫರ್
ಜರ್ಮನ್ ಮೂಲದ ಜೆನ್ನಿಫರ್ ಮೈಸೂರಿನಲ್ಲಿ
TV9 Web
| Edited By: |

Updated on: Nov 23, 2022 | 12:03 PM

Share

Viral Video : ಇತ್ತೀಚೆಗಷ್ಟೇ ಜರ್ಮನಿಯ ಸೊಸೆಯೊಬ್ಬಳು ಉತ್ತರಭಾರತದ ಅತ್ತೆಯೊಂದಿಗೆ ಹೊಲದಲ್ಲಿ ಈರುಳ್ಳಿ ನಾಟಿ ಮಾಡುತ್ತಿರುವ ವಿಡಿಯೋ ನೋಡಿದಿರಿ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಈಕೆ ಕೂಡ ಜರ್ಮನ್​ ಮೂಲದವಳೇ. ವಾಸಿಸುವುದು ಮೈಸೂರಿನಲ್ಲಿ. ತನ್ನನ್ನು ತಾನು ವಿಡಿಯೋ ಕ್ರಿಯೇಟರ್​, ಡ್ಯಾನ್ಸರ್​ ಮತ್ತು ಆ್ಯಕ್ಟರ್ ಎಂದು ಹೇಳಿಕೊಂಡಿದ್ದಾಳೆ. ಈ  ಕೆಳಗಿನ ವಿಡಿಯೋ ಗಮನಿಸಿ, ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಸಂಜೆಹೊತ್ತಿನಲ್ಲಿ ತೆಂಗಿನಕಾಯಿ ಮಾರಲು ಕುಳಿತಿದ್ದಾಳೆ. ಒಂದು ತೆಂಗಿನಕಾಯಿಗೆ ರೂ. 20 ಎನ್ನುತ್ತಿದ್ದಾಳೆ. ಅಲ್ಲಿಗೆ ಬಂದ ಗ್ರಾಹಕ ರೂ. 50ಕ್ಕೆ ಮೂರು ಕೊಡುತ್ತೀರಾ ಎಂದು ಕೇಳುತ್ತಾನೆ. ಬೆಳಗ್ಗೆ ನಾಲ್ಕು ಗಂಟೆಗೆ ಬನ್ನಿ ಎನ್ನುತ್ತಾಳೆ ಆಕೆ. ಯಾಕೆ ಎನ್ನುತ್ತಾನೆ ಗ್ರಾಹಕ. ಏಕೆಂದರೆ ಬೆಳಗ್ಗೆ ಎಲ್ಲಾ ಬಂದ್​ ಇರುತ್ತದೆ ಎನ್ನುತ್ತಾಳೆ ಆಕೆ!

ಇದನ್ನೂ ಓದಿ
Image
ಮೆನ್ಸ್​ ಡೇ ಪಂಚಾಂಗದಾಗೂ ಇಲ್ಲ ಮತ್ತ ಗೂಗಲ್​ ಡೂಡಲ್​ದಾಗೂ ಇಲ್ಲ; ಸೋನು ವೇಣುಗೋಪಾಲ
Image
20ನೇ ಶತಮಾನದ ಶ್ರೇಷ್ಠ ನಕ್ಷಾಪ್ರವೀಣೆ ಮೇರಿ ಥಾರ್ಪ್​ಗೆ ‘ಗೂಗಲ್ ಡೂಡಲ್’ ಗೌರವ
Image
ಹ್ವಾಯ್ ಇಗಣಿಯೇ, ಇಲ್ಲಿ ಕೇಣಿ ಕಾಂತಾರ ಕಂಡ್ರಿಯಾ; 2 ಮಿಲಿಯನ್ ಜನ ನೋಡಿದ ಈ ವಿಡಿಯೋ
Image
ಭಾರತೀಯ ಸೇನೆಗೆ ಲಗ್ನಪತ್ರಿಕೆ ಕಳಿಸಿದ ಕೇರಳದ ವಧುವರರು; ಸೇನೆಯಿಂದ ಶುಭಹಾರೈಕೆ
View this post on Instagram

A post shared by Jennifer (@jennijigermany)

ಜರ್ಮನ್​ ಮೂಲದ ಜೆನ್ನಿಫರ್​ಗೆ ಭಾರತವೆಂದರೆ ಬಹಳ ಇಷ್ಟ. ವಿವಿಧ ರಾಜ್ಯಗಳಲ್ಲಿ ಪ್ರವಾಸ ಮಾಡುತ್ತ ಸ್ಥಳೀಯ ಭಾಷೆಗಳನ್ನು ಕಲಿಯುವುದು, ರೀಲ್ಸ್​ ಮಾಡುವುದು ಇವಳಿಗೆ ಇಷ್ಟದ ಹವ್ಯಾಸ. ‘ನಾನು ಮಾರಾಟಗಾರಳಾಗಿದ್ದು ದೇವರಾಜ ಮಾರ್ಕೆಟ್​ನಲ್ಲಿ ಇದ್ದಿದ್ದರೆ ಹೀಗೇ ಕಾಣುತ್ತಿದ್ದೆ. ಈ ವಿಡಿಯೋದ ಸ್ಟೋರಿ ಬೋರ್ಡ್ ಮಾಡಿದ ಸ್ನೇಹಿತ ಆದಿಲ್​, ಸ್ಥಳಾವಕಾಶ ಮಾಡಿಕೊಟ್ಟ ರಾಹುಲ್​, ರೀಲ್​ಗಾಗಿ ಶೂಟ್ ಮಾಡಿದ ಲೋಟೋಯಾ ಅವರಿಗೆ ಧನ್ಯವಾದ’ ಎಂದಿದ್ದಾಳೆ ಜೆನ್ನಿಫರ್​.

View this post on Instagram

A post shared by Jennifer (@jennijigermany)

ಈ ಮೇಲಿನ ವಿಡಿಯೋದಲ್ಲಿ ಜೆನ್ನಿಫರ್, ‘ಭವಿಷ್ಯದಲ್ಲಿ ನಾನು ನನ್ನದೇ ಆದ ಒಂದು ಅಂಗಡಿಯನ್ನು ನಡೆಸಬಹುದಾ, ಏನಂತೀರಿ? ಅಂದಹಾಗೆ ಈ ಅಂಗಡಿ ಇರುವುದು ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ. ಅಲ್ಲಿ ಪೂಜೆಗೆ ಸಂಬಂಧಿಸಿದ ಎಲ್ಲ ಸಾಮಾನುಗಳೂ ಸಿಗುತ್ತವೆ’ ಎಂಬ ನೋಟ್​ ಈ ವಿಡಿಯೋಗಿದೆ.

ಎಷ್ಟು ಸ್ಪಷ್ಟವಾಗಿ ಕನ್ನಡ ಉಚ್ಚರಿಸಿದ್ದೀರಿ ಮೇಡಮ್​, ಧನ್ಯವಾದ ನಿಮಗೆ ಎಂದಿದ್ದಾರೆ ಹಲವರು. ನಿಮಗಿರುವ ಕನ್ನಡಾಭಿಮಾನ ಮೆಚ್ಚತಕ್ಕದ್ದು. ಇಲ್ಲಿಯೇ ಅನ್ನ ಉಂಡು ಇಲ್ಲಿಯೇ ನೀರು ಕುಡಿದು ಇಲ್ಲೇ ವಾಸಿಸುವವರಿಗೆ ಕನ್ನಡದ ಬಗ್ಗೆ ಸ್ವಾಭಿಮಾನವಿಲ್ಲವಲ್ಲ ಎಂದಿದ್ಧಾರೆ ಒಬ್ಬರು. ನೀವು ಹೋದ ಜನ್ಮದಲ್ಲಿ ಕರ್ನಾಟಕದಲ್ಲಿ ಹುಟ್ಟಿದ್ದಿರಿ ಎನ್ನಿಸುತ್ತದೆ ಎಂದಿದ್ದಾರೆ ಇನ್ನೂ ಒಬ್ಬರು.

ಹೊಸತನ್ನು ಕಲಿಯಬೇಕೆಂದರೆ ಮುಕ್ತ ಮನಸ್ಸಿನಿಂದ ಇರಬೇಕು. ಕಲಿತಷ್ಟೂ ಬೆಳೆಯುತ್ತೀರಿ. ಬೆಳೆಯಬೇಕೆಂದರೆ ಸ್ವೀಕರಿಸುವುದನ್ನು ಕಲಿಯಬೇಕು.

ನಿಮ್ಮ ಅಭಿಪ್ರಾಯವೇನು ಈ ವಿಡಿಯೋ ನೋಡಿದ ಮೇಲೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ