AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್‌ ಶಿಫ್ಟ್​ ಹೊರೆ ಕಡಿಮೆ ಮಾಡಲು 10 ರೋಗಿಗಳನ್ನು ಕೊಂದ ನರ್ಸ್

ಜರ್ಮನಿಯ ಪ್ಯಾಲಿಯೇಟಿವ್ ಕೇರ್ ನರ್ಸ್​10 ರೋಗಿಗಳನ್ನು ಕೊಂದು, 27 ಮಂದಿಯನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನೈಟ್ ಶಿಫ್ಟ್ ಕೆಲಸದ ಒತ್ತಡವನ್ನು ಕಡಿಮೆ ಮಾಡಲು, ರೋಗಿಗಳಿಗೆ ಮಾರ್ಫಿನ್ ಹಾಗೂ ನಿದ್ರಾಜನಕ ಚುಚ್ಚುಮದ್ದು ನೀಡಿದ್ದಾರೆ. ಈ ಕೃತ್ಯದ ಬಗ್ಗೆ ಕೋರ್ಟ್​​ ಮುಂದೆ ತಪ್ಪೊಪ್ಪಿಕೊಂಡಿದ್ದು, ಆಚೆನ್ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ನೈಟ್‌ ಶಿಫ್ಟ್​ ಹೊರೆ ಕಡಿಮೆ ಮಾಡಲು 10 ರೋಗಿಗಳನ್ನು ಕೊಂದ ನರ್ಸ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 07, 2025 | 11:03 AM

Share

ನೈಟ್​​​​ ಶಿಫ್ಟ್​​​ನಲ್ಲಿ ಕೆಲಸದ ಒತ್ತಡ ಕಡಿಮೆ ಮಾಡಲು ನರ್ಸ್​ 10 ರೋಗಿಗಳನ್ನು ಕೊಂದಿರುವ ಘಟನೆ ಜರ್ಮನಿಯಲ್ಲಿ (German nurse) ನಡೆದಿದೆ. ಇದೀಗ ಪ್ಯಾಲಿಯೇಟಿವ್ ಕೇರ್ ನರ್ಸ್ (ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆರೈಕೆ ಮಾಡುವ ನರ್ಸ್​)ಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಈ ನರ್ಸ್​​​ 10 ರೋಗಿಗಳನ್ನು ಕೊಂದದ್ದು ಮಾತ್ರವಲ್ಲದೆ, 27 ರೋಗಿಗಳನ್ನು ಕೊಲ್ಲಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಬಿಬಿಸಿ ವರದಿಯ ಪ್ರಕಾರ, ಈ ನರ್ಸ್​​​ಗೆ ಜರ್ಮನಿಯ ಆಚೆನ್‌ನ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಈ ಘಟನೆ 2023-2024ರಲ್ಲಿ ಪಶ್ಚಿಮ ಜರ್ಮನಿಯ ವೂರ್ಸೆಲೆನ್‌ನಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಈ 44 ವರ್ಷದ ನರ್ಸ್ ವೃದ್ಧರು ಮತ್ತು ಮಾರಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳನ್ನು ಟಾರ್ಗೆಟ್​​​ ಮಾಡಿ, ಮಾರ್ಫಿನ್ ಮತ್ತು ಮಿಡಜೋಲಮ್ ಎಂಬ ನಿದ್ರಾಜನಕ ಚುಚ್ಚುಮದ್ದು ನೀಡುತ್ತಿದ್ದರು. ಇದರಿಂದ ರಾತ್ರಿ ವೇಳೆ ರೋಗಿಗಳು ಸುಮ್ಮನಾಗುತ್ತಿದ್ದರು ಎಂದು ಕೋರ್ಟ್​​ ಮುಂದೆ ನರ್ಸ್​​​ ಹೇಳಿದ್ದಾರೆ. ರಾತ್ರಿ ವೇಳೆ ನನಗೆ ರೋಗಿಗಳು ಕಿರಿಕಿರಿ ಮಾಡುತ್ತಿದ್ದರು. ಸರಿಯಾಗಿ ನಿದ್ದೆಯೂ ಬರುತ್ತಿರಲಿಲ್ಲ. ರಾತ್ರಿಯಿಂದ ಬೆಳಿಗ್ಗೆ ವರೆಗೆ ಅವರ ಸೇವೆ ಮಾಡುತ್ತ ಇರಬೇಕು. ಇದರಿಂದ ಬೇಸತ್ತು ಹೀಗೆ ಮಾಡಿದ್ದೇನೆ ಎಂದು ನರ್ಸ್​​​​ ಕೋರ್ಟ್​​ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ನರ್ಸ್​​​ ಮಾಡಿದ ಈ ಕೃತ್ಯಕ್ಕೆ ಕೋರ್ಟ್​​ ಜೀವಾವಧಿ ಶಿಕ್ಷೆ ನೀಡಿ, ಆದೇಶ ಹೊರಡಿಸಿದೆ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿರುವ ಮೀನನ್ನು ಹುಡುಕಿ ಜಾಣರೆನಿಸಿಕೊಳ್ಳಿ

ಪ್ರಕರಣಕ್ಕೆ ಸಂಬಂಧಿಸಿದ  ತನಿಖೆ ನಡೆಯುತ್ತಿದೆ:

ನರ್ಸ್​ 2007ರಲ್ಲಿ ನರ್ಸಿಂಗ್ ತರಬೇತಿ ಪೂರ್ಣಗೊಳಿಸಿ, 2020ರಲ್ಲಿ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ರಾತ್ರಿ ವೇಳೆ ಕೆಲಸ ಮಾಡಿ ಅಭ್ಯಾಸವಿಲ್ಲದ ಕಾರಣ, ರೋಗಿಗಳನ್ನು ನಿಭಾಯಿಸುವುದು ಕಷ್ಟವಾಗಿತ್ತು. ರೋಗಿಗಳ ಕಾಟ ತಡೆಯಲಾಗದೆ. ನರ್ಸ್​ ಮಾರ್ಫಿನ್ ಮತ್ತು ಮಿಡಜೋಲಮ್ ಚುಚ್ಚುಮದ್ದು ನೀಡಿದ್ದರು. ಇದು ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿದು, ಪೊಲೀಸರಿಗೆ ದೂರು ನೀಡುತ್ತಾರೆ. ಈ ಬಗ್ಗೆ ತನಿಖೆ ನಡೆಸಿ, 2024ರಲ್ಲಿ ಬಂಧಿಸುತ್ತಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಲೂ ತನಿಖೆ ನಡೆಯುತ್ತಿದೆ. ಜರ್ಮನಿಯಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿದೆ ಎಂದು ಬಿಬಿಸಿ ವರದಿ ಹೇಳಿದೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ​​​

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು