AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್‌ ಶಿಫ್ಟ್​ ಹೊರೆ ಕಡಿಮೆ ಮಾಡಲು 10 ರೋಗಿಗಳನ್ನು ಕೊಂದ ನರ್ಸ್

ಜರ್ಮನಿಯ ಪ್ಯಾಲಿಯೇಟಿವ್ ಕೇರ್ ನರ್ಸ್​10 ರೋಗಿಗಳನ್ನು ಕೊಂದು, 27 ಮಂದಿಯನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನೈಟ್ ಶಿಫ್ಟ್ ಕೆಲಸದ ಒತ್ತಡವನ್ನು ಕಡಿಮೆ ಮಾಡಲು, ರೋಗಿಗಳಿಗೆ ಮಾರ್ಫಿನ್ ಹಾಗೂ ನಿದ್ರಾಜನಕ ಚುಚ್ಚುಮದ್ದು ನೀಡಿದ್ದಾರೆ. ಈ ಕೃತ್ಯದ ಬಗ್ಗೆ ಕೋರ್ಟ್​​ ಮುಂದೆ ತಪ್ಪೊಪ್ಪಿಕೊಂಡಿದ್ದು, ಆಚೆನ್ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ನೈಟ್‌ ಶಿಫ್ಟ್​ ಹೊರೆ ಕಡಿಮೆ ಮಾಡಲು 10 ರೋಗಿಗಳನ್ನು ಕೊಂದ ನರ್ಸ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 07, 2025 | 11:03 AM

Share

ನೈಟ್​​​​ ಶಿಫ್ಟ್​​​ನಲ್ಲಿ ಕೆಲಸದ ಒತ್ತಡ ಕಡಿಮೆ ಮಾಡಲು ನರ್ಸ್​ 10 ರೋಗಿಗಳನ್ನು ಕೊಂದಿರುವ ಘಟನೆ ಜರ್ಮನಿಯಲ್ಲಿ (German nurse) ನಡೆದಿದೆ. ಇದೀಗ ಪ್ಯಾಲಿಯೇಟಿವ್ ಕೇರ್ ನರ್ಸ್ (ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆರೈಕೆ ಮಾಡುವ ನರ್ಸ್​)ಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಈ ನರ್ಸ್​​​ 10 ರೋಗಿಗಳನ್ನು ಕೊಂದದ್ದು ಮಾತ್ರವಲ್ಲದೆ, 27 ರೋಗಿಗಳನ್ನು ಕೊಲ್ಲಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಬಿಬಿಸಿ ವರದಿಯ ಪ್ರಕಾರ, ಈ ನರ್ಸ್​​​ಗೆ ಜರ್ಮನಿಯ ಆಚೆನ್‌ನ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಈ ಘಟನೆ 2023-2024ರಲ್ಲಿ ಪಶ್ಚಿಮ ಜರ್ಮನಿಯ ವೂರ್ಸೆಲೆನ್‌ನಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಈ 44 ವರ್ಷದ ನರ್ಸ್ ವೃದ್ಧರು ಮತ್ತು ಮಾರಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳನ್ನು ಟಾರ್ಗೆಟ್​​​ ಮಾಡಿ, ಮಾರ್ಫಿನ್ ಮತ್ತು ಮಿಡಜೋಲಮ್ ಎಂಬ ನಿದ್ರಾಜನಕ ಚುಚ್ಚುಮದ್ದು ನೀಡುತ್ತಿದ್ದರು. ಇದರಿಂದ ರಾತ್ರಿ ವೇಳೆ ರೋಗಿಗಳು ಸುಮ್ಮನಾಗುತ್ತಿದ್ದರು ಎಂದು ಕೋರ್ಟ್​​ ಮುಂದೆ ನರ್ಸ್​​​ ಹೇಳಿದ್ದಾರೆ. ರಾತ್ರಿ ವೇಳೆ ನನಗೆ ರೋಗಿಗಳು ಕಿರಿಕಿರಿ ಮಾಡುತ್ತಿದ್ದರು. ಸರಿಯಾಗಿ ನಿದ್ದೆಯೂ ಬರುತ್ತಿರಲಿಲ್ಲ. ರಾತ್ರಿಯಿಂದ ಬೆಳಿಗ್ಗೆ ವರೆಗೆ ಅವರ ಸೇವೆ ಮಾಡುತ್ತ ಇರಬೇಕು. ಇದರಿಂದ ಬೇಸತ್ತು ಹೀಗೆ ಮಾಡಿದ್ದೇನೆ ಎಂದು ನರ್ಸ್​​​​ ಕೋರ್ಟ್​​ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ನರ್ಸ್​​​ ಮಾಡಿದ ಈ ಕೃತ್ಯಕ್ಕೆ ಕೋರ್ಟ್​​ ಜೀವಾವಧಿ ಶಿಕ್ಷೆ ನೀಡಿ, ಆದೇಶ ಹೊರಡಿಸಿದೆ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿರುವ ಮೀನನ್ನು ಹುಡುಕಿ ಜಾಣರೆನಿಸಿಕೊಳ್ಳಿ

ಪ್ರಕರಣಕ್ಕೆ ಸಂಬಂಧಿಸಿದ  ತನಿಖೆ ನಡೆಯುತ್ತಿದೆ:

ನರ್ಸ್​ 2007ರಲ್ಲಿ ನರ್ಸಿಂಗ್ ತರಬೇತಿ ಪೂರ್ಣಗೊಳಿಸಿ, 2020ರಲ್ಲಿ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ರಾತ್ರಿ ವೇಳೆ ಕೆಲಸ ಮಾಡಿ ಅಭ್ಯಾಸವಿಲ್ಲದ ಕಾರಣ, ರೋಗಿಗಳನ್ನು ನಿಭಾಯಿಸುವುದು ಕಷ್ಟವಾಗಿತ್ತು. ರೋಗಿಗಳ ಕಾಟ ತಡೆಯಲಾಗದೆ. ನರ್ಸ್​ ಮಾರ್ಫಿನ್ ಮತ್ತು ಮಿಡಜೋಲಮ್ ಚುಚ್ಚುಮದ್ದು ನೀಡಿದ್ದರು. ಇದು ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿದು, ಪೊಲೀಸರಿಗೆ ದೂರು ನೀಡುತ್ತಾರೆ. ಈ ಬಗ್ಗೆ ತನಿಖೆ ನಡೆಸಿ, 2024ರಲ್ಲಿ ಬಂಧಿಸುತ್ತಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಲೂ ತನಿಖೆ ನಡೆಯುತ್ತಿದೆ. ಜರ್ಮನಿಯಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿದೆ ಎಂದು ಬಿಬಿಸಿ ವರದಿ ಹೇಳಿದೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ​​​

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು