AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್‌ ಶಿಫ್ಟ್​ ಹೊರೆ ಕಡಿಮೆ ಮಾಡಲು 10 ರೋಗಿಗಳನ್ನು ಕೊಂದ ನರ್ಸ್

ಜರ್ಮನಿಯ ಪ್ಯಾಲಿಯೇಟಿವ್ ಕೇರ್ ನರ್ಸ್​10 ರೋಗಿಗಳನ್ನು ಕೊಂದು, 27 ಮಂದಿಯನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನೈಟ್ ಶಿಫ್ಟ್ ಕೆಲಸದ ಒತ್ತಡವನ್ನು ಕಡಿಮೆ ಮಾಡಲು, ರೋಗಿಗಳಿಗೆ ಮಾರ್ಫಿನ್ ಹಾಗೂ ನಿದ್ರಾಜನಕ ಚುಚ್ಚುಮದ್ದು ನೀಡಿದ್ದಾರೆ. ಈ ಕೃತ್ಯದ ಬಗ್ಗೆ ಕೋರ್ಟ್​​ ಮುಂದೆ ತಪ್ಪೊಪ್ಪಿಕೊಂಡಿದ್ದು, ಆಚೆನ್ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ನೈಟ್‌ ಶಿಫ್ಟ್​ ಹೊರೆ ಕಡಿಮೆ ಮಾಡಲು 10 ರೋಗಿಗಳನ್ನು ಕೊಂದ ನರ್ಸ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 07, 2025 | 11:03 AM

Share

ನೈಟ್​​​​ ಶಿಫ್ಟ್​​​ನಲ್ಲಿ ಕೆಲಸದ ಒತ್ತಡ ಕಡಿಮೆ ಮಾಡಲು ನರ್ಸ್​ 10 ರೋಗಿಗಳನ್ನು ಕೊಂದಿರುವ ಘಟನೆ ಜರ್ಮನಿಯಲ್ಲಿ (German nurse) ನಡೆದಿದೆ. ಇದೀಗ ಪ್ಯಾಲಿಯೇಟಿವ್ ಕೇರ್ ನರ್ಸ್ (ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆರೈಕೆ ಮಾಡುವ ನರ್ಸ್​)ಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಈ ನರ್ಸ್​​​ 10 ರೋಗಿಗಳನ್ನು ಕೊಂದದ್ದು ಮಾತ್ರವಲ್ಲದೆ, 27 ರೋಗಿಗಳನ್ನು ಕೊಲ್ಲಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಬಿಬಿಸಿ ವರದಿಯ ಪ್ರಕಾರ, ಈ ನರ್ಸ್​​​ಗೆ ಜರ್ಮನಿಯ ಆಚೆನ್‌ನ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಈ ಘಟನೆ 2023-2024ರಲ್ಲಿ ಪಶ್ಚಿಮ ಜರ್ಮನಿಯ ವೂರ್ಸೆಲೆನ್‌ನಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಈ 44 ವರ್ಷದ ನರ್ಸ್ ವೃದ್ಧರು ಮತ್ತು ಮಾರಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳನ್ನು ಟಾರ್ಗೆಟ್​​​ ಮಾಡಿ, ಮಾರ್ಫಿನ್ ಮತ್ತು ಮಿಡಜೋಲಮ್ ಎಂಬ ನಿದ್ರಾಜನಕ ಚುಚ್ಚುಮದ್ದು ನೀಡುತ್ತಿದ್ದರು. ಇದರಿಂದ ರಾತ್ರಿ ವೇಳೆ ರೋಗಿಗಳು ಸುಮ್ಮನಾಗುತ್ತಿದ್ದರು ಎಂದು ಕೋರ್ಟ್​​ ಮುಂದೆ ನರ್ಸ್​​​ ಹೇಳಿದ್ದಾರೆ. ರಾತ್ರಿ ವೇಳೆ ನನಗೆ ರೋಗಿಗಳು ಕಿರಿಕಿರಿ ಮಾಡುತ್ತಿದ್ದರು. ಸರಿಯಾಗಿ ನಿದ್ದೆಯೂ ಬರುತ್ತಿರಲಿಲ್ಲ. ರಾತ್ರಿಯಿಂದ ಬೆಳಿಗ್ಗೆ ವರೆಗೆ ಅವರ ಸೇವೆ ಮಾಡುತ್ತ ಇರಬೇಕು. ಇದರಿಂದ ಬೇಸತ್ತು ಹೀಗೆ ಮಾಡಿದ್ದೇನೆ ಎಂದು ನರ್ಸ್​​​​ ಕೋರ್ಟ್​​ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ನರ್ಸ್​​​ ಮಾಡಿದ ಈ ಕೃತ್ಯಕ್ಕೆ ಕೋರ್ಟ್​​ ಜೀವಾವಧಿ ಶಿಕ್ಷೆ ನೀಡಿ, ಆದೇಶ ಹೊರಡಿಸಿದೆ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿರುವ ಮೀನನ್ನು ಹುಡುಕಿ ಜಾಣರೆನಿಸಿಕೊಳ್ಳಿ

ಪ್ರಕರಣಕ್ಕೆ ಸಂಬಂಧಿಸಿದ  ತನಿಖೆ ನಡೆಯುತ್ತಿದೆ:

ನರ್ಸ್​ 2007ರಲ್ಲಿ ನರ್ಸಿಂಗ್ ತರಬೇತಿ ಪೂರ್ಣಗೊಳಿಸಿ, 2020ರಲ್ಲಿ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ರಾತ್ರಿ ವೇಳೆ ಕೆಲಸ ಮಾಡಿ ಅಭ್ಯಾಸವಿಲ್ಲದ ಕಾರಣ, ರೋಗಿಗಳನ್ನು ನಿಭಾಯಿಸುವುದು ಕಷ್ಟವಾಗಿತ್ತು. ರೋಗಿಗಳ ಕಾಟ ತಡೆಯಲಾಗದೆ. ನರ್ಸ್​ ಮಾರ್ಫಿನ್ ಮತ್ತು ಮಿಡಜೋಲಮ್ ಚುಚ್ಚುಮದ್ದು ನೀಡಿದ್ದರು. ಇದು ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿದು, ಪೊಲೀಸರಿಗೆ ದೂರು ನೀಡುತ್ತಾರೆ. ಈ ಬಗ್ಗೆ ತನಿಖೆ ನಡೆಸಿ, 2024ರಲ್ಲಿ ಬಂಧಿಸುತ್ತಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಲೂ ತನಿಖೆ ನಡೆಯುತ್ತಿದೆ. ಜರ್ಮನಿಯಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿದೆ ಎಂದು ಬಿಬಿಸಿ ವರದಿ ಹೇಳಿದೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ​​​

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್