AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಮಾಲ್​​​ನಲ್ಲಿ ಭೀಕರ ಅಗ್ನಿ ಅವಘಡ, ತುರ್ತು ನಿರ್ಗಮನ ಮಾರ್ಗವಿಲ್ಲದೆ ಕಿಟಕಿಯಲ್ಲಿ ನೇತಾಡಿದ ಜನ

ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈ ವೇಳೆಯಲ್ಲಿ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಓಡಾಡುವುದಿದೆ. ಇಂತಹ ಅದೆಷ್ಟೋ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವುದಿದೆ. ಇದೀಗ ಬಹುಮಹಡಿಯ ಕಟ್ಟಡಕ್ಕೆ ಬೆಂಕಿ ಹೊತ್ತಿ ಕೊಂಡಿದ್ದು, ಈ ವೇಳೆಯಲ್ಲಿ ಜೀವ ಉಳಿಸಿಕೊಳ್ಳುವ ಸಲುವಾಗಿ ಕಿಟಕಿ ಹಿಡಿದು ವ್ಯಕ್ತಿಗಳು ನೇತಾಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಈ ದೃಶ್ಯ ನೋಡಿ ಆತಂಕಗೊಂಡಿದ್ದಾರೆ.

Viral : ಮಾಲ್​​​ನಲ್ಲಿ ಭೀಕರ ಅಗ್ನಿ ಅವಘಡ, ತುರ್ತು ನಿರ್ಗಮನ ಮಾರ್ಗವಿಲ್ಲದೆ ಕಿಟಕಿಯಲ್ಲಿ ನೇತಾಡಿದ ಜನ
ವಿಡಿಯೋ ವೈರಲ್ Image Credit source: Twitter
ಸಾಯಿನಂದಾ
|

Updated on: Apr 30, 2025 | 10:34 AM

Share

ಗಾಜಿಯಾಬಾದ್, ಏ 30: ಯಾವಾಗ ಹೇಗೆ ಬೆಂಕಿ ಅವಘಡಗಳು ಹಾಗೂ ಅಪಘಾತಗಳು ಸಂಭವಿಸುತ್ತದೆ ಎಂದು ಹೇಳಲು ಆಗದು. ಈ ರೀತಿ ಘಟನೆ (incident) ಗಳು ನಡೆದಾಗ ಪ್ರಾಣಹಾನಿ ಮಾತ್ರವಲ್ಲದೇ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತದೆ. ಅದರಲ್ಲಿಯೂ ಬೆಂಕಿ ಅವಘಡಗಳು ಸಂಭವಿಸಿದಾಗ ಜೀವ ಉಳಿದರೆ ಸಾಕು ಎಂದು ಎಲ್ಲೆಂದರಲ್ಲಿ ಓಡುವವರನ್ನು ನೋಡಬಹುದು. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮಾಲ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಲ್ಲಿದ್ದ ಜನರು ಜೀವ ಉಳಿಸಿಕೊಳ್ಳಲು ಕಟ್ಟಡದ ಕಿಟಕಿಗಳ ಮೇಲೆ ನೇತಾಡಿದ್ದು ಜೀವ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ದೃಶ್ಯವನ್ನು ನೋಡಬಹುದು. ಉತ್ತರ ಪ್ರದೇಶದ ಗಾಜಿಯಾಬಾದ್ (Ghaziabad of Uttar Pradesh)ನ ರಾಜನಗರದ ಮಾಲ್ (a mall in Rajnagar) ವೊಂದರಲ್ಲಿ ಈ ಘಟನೆಯೂ ನಡೆದಿದೆ ಎನ್ನಲಾಗಿದೆ.

Lokesh Rai ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಕಟ್ಟಡವೊಂದರಲ್ಲಿ ಕಪ್ಪು ಹೊಗೆ ಹೊರಬರುತ್ತಿರುವುದನ್ನು ಕಾಣಬಹುದು. ಇತ್ತ ತಮ್ಮ ಜೀವ ಉಳಿಸಿಕೊಳ್ಳುವ ಸಲುವಾಗಿ ಕೆಲವರು ಬಾಲ್ಕನಿಗಳ ಮೇಲೆ ನಿಂತುಕೊಂಡಿದ್ದರೆ, ಇನ್ನು ಕೆಲವರು ಕಿಟಕಿಗಳ ಮೇಲೆ ನೇತಾಡುತ್ತಿರುವುದನ್ನು ನೋಡಬಹುದು. ಅದಲ್ಲದೇ, ಕರವಸ್ತ್ರದಲ್ಲಿ ತಮ್ಮ ಮೂಗು ಮುಚ್ಚಿಕೊಂಡು ನಿಂತಿರುವುದನ್ನು ಕಾಣಬಹುದು.

ಇದನ್ನೂ ಓದಿ
Image
ಮೆಟ್ರೋ ನಿಲ್ದಾಣದಲ್ಲಿ ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ ಯುವಕ
Image
ಚಾಟ್ ಜಿಪಿಟಿ ಬಳಸಿ ಆಟೋ ಚಾಲಕನ ಜೊತೆಗೆ ಚೌಕಾಸಿ ಮಾಡಿದ ಯುವಕ
Image
ರೈಲಿನಲ್ಲಿ ಸಹ ಪ್ರಯಾಣಿಕರನ್ನು ರಂಜಿಸಿದ ಅಂಧ ವ್ಯಕ್ತಿ
Image
ಕನ್ನಡ ಅದ್ಭುತ ಭಾಷೆ, ಕಲಿತು ಮಾತನಾಡಿ: ಅಮೆರಿಕ ಉದ್ಯಮಿ ಬರ್ಟ್ ಮುಲ್ಲರ್ ಕರೆ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋ ಹನ್ನೆರಡು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು ನೆಟ್ಟಿಗರು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ. ಈ ಅಪಾಯಕಾರಿ ವಿಡಿಯೋ ನೋಡಿದ ಬಳಕೆದಾರರೊಬ್ಬರು, ‘ಗಾಜಿಯಾಬಾದ್ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಯಾವುದೇ ಜೀವಹಾನಿಯಾಗಿಲ್ಲ, ಅಪಾಯಕ್ಕೆ ಸಿಲುಕಿಕೊಂಡಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಮೆಟ್ರೋ ನಿಲ್ದಾಣದಲ್ಲಿ ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ ಯುವಕ, ಕುಣಿದು ಕುಪ್ಪಳಿಸಿದ ಯುವತಿ

ಇನ್ನೊಬ್ಬರು, ‘ಈ ವಿಡಿಯೋ ನೋಡಲು ಭಯಾನಕವಾಗಿದೆ, ಆ ಕ್ಷಣವನ್ನು ನೆನೆಸಿಕೊಂಡರೇನೇ ಮೈ ಜುಮ್ಮ್ ಎನ್ನುತ್ತದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಈ ರೀತಿ ಅವಘಡಗಳು ಸಂಭವಿಸಿದಾಗ ಆ ಕ್ಷಣ ಏನು ಮಾಡಬೇಕೆಂದು ತಿಳಿಯುವುದಿಲ್ಲ, ಜೀವ ಉಳಿದರೆ ಸಾಕು ಎನ್ನುವುದೊಂದೇ ಇರುತ್ತದೆ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನು ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಆದರೆ ಈ ಘಟನೆಯಲ್ಲಿ ಯಾವುದೇ ಗಾಯ ಹಾಗೂ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ