AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghibli Trend: ಎಐ ಘಿಬ್ಲಿಗೆ ವೈಯುಕ್ತಿಕ ಫೋಟೋ ಅಪ್‌ಲೋಡ್ ಮಾಡ್ತಿದ್ದೀರಾ? ಇದು ಎಷ್ಟು ಸೇಫ್? ಇಲ್ಲಿದೆ ತಜ್ಞರ ಎಚ್ಚರಿಕೆ

ಕಳೆದ ಕೆಲವು ದಿನಗಳಿಂದ ಘಿಬ್ಲಿ ಟ್ರೆಂಡ್‌ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಎಲ್ಲಿ ನೋಡಿದ್ದರಲ್ಲಿಯೂ ಘಿಬ್ಲಿ ಇಮೇಜ್ ಗಳದ್ದೇ ಹವಾ. ಹೌದು, ಸೆಲೆಬ್ರಿಟಿಗಳಿಂದ ಹಿಡಿದು ಜನಸಾಮಾನ್ಯದವರೆಗೂ ChatGPT ಯ ಸ್ಟುಡಿಯೋ ಘಿಬ್ಲಿಯಲ್ಲಿ ತಮ್ಮ ಫೋಟೋಗಳನ್ನು ಕಾರ್ಟೂನ್ ಇಮೇಜ್ ಗಳಾಗಿ ಪರಿವರ್ತಿಸಿ ಎಲ್ಲರೂ ಖುಷಿ ಪಡುತ್ತಿದ್ದಾರೆ. ಆದರೆ ಪೋಸ್ಟ್ ನಲ್ಲಿ ತಜ್ಞರೊಬ್ಬರು, ಈ AI ಪ್ಲಾಟ್ ಫಾರ್ಮ್ ನಲ್ಲಿ ವೈಯಕ್ತಿಕ ಫೋಟೋಗಳನ್ನು ಅಪ್ಲೋಡ್ ಮಾಡಿ ಘಿಬ್ಲಿ ಸ್ಟೈಲ್ ಅನಿಮೇಟೆಡ್ ಫೋಟೋಗಳನ್ನು ಪರಿವರ್ತಿಸುವ ಮೂಲಕ ಅಪಾಯಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ ಎಂದು ತಜ್ಞರು ಎಚ್ಚರಿಸಿದ್ದಾರೆ.

Ghibli Trend: ಎಐ ಘಿಬ್ಲಿಗೆ ವೈಯುಕ್ತಿಕ ಫೋಟೋ ಅಪ್‌ಲೋಡ್ ಮಾಡ್ತಿದ್ದೀರಾ? ಇದು ಎಷ್ಟು ಸೇಫ್? ಇಲ್ಲಿದೆ ತಜ್ಞರ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 03, 2025 | 3:29 PM

ಅಬ್ಬಬ್ಬಾ ಈ ಘಿಬ್ಲಿ ಸ್ಟೈಲ್ (Ghibli Style) ಫೋಟೋಗಳ ಕ್ರೇಜ್ ಎಷ್ಟಾಗಿದೆ ಎಂದರೆ ಎಲ್ಲಿ ನೋಡಿದ್ದರಲ್ಲಿ ಇದರದ್ದೇ ಹವಾ ಎನ್ನುವಂತಾಗಿದೆ. ಈಗಾಗಲೇ, ಘಿಬ್ಲಿ ಶೈಲಿಯ ಚಿತ್ರಗಳು ಸೋಶಿಯಲ್ ಮೀಡಿಯಾ (Social Media) ದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಘಿಬ್ಲಿ ಸ್ಟೈಲ್ ಅನಿಮೇಟೆಡ್ ಫೋಟೋಗಳನ್ನು ಅಪ್ಲೋಡ್ ಮಾಡುವುದರಲ್ಲೇ ಹೆಚ್ಚಿನವರು ತಮ್ಮ ಸಮಯ ಕಳೆಯುತ್ತಿದ್ದಾರೆ. ಕೆಲವರಂತೂ ಈ ಹೊಸ ಟ್ರೆಂಡ್ ಗೆ ಮಾರು ಹೋಗಿದ್ದಾರೆ. ಆದರೆ ವೈರಲ್ ಆಗುತ್ತಿರುವ ಘಿಬ್ಲಿ ಟ್ರೆಂಡ್ (Ghibli Trend) ಗೌಪತ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ತಜ್ಞರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ‘AI ಪ್ಲಾಟ್ ಫಾರ್ಮ್ ನಲ್ಲಿ ವೈಯಕ್ತಿಕ ಫೋಟೋ (Personal Photo) ಗಳನ್ನು ಅಪ್ಲೋಡ್ ಮಾಡುವ ಮುನ್ನ ಇದು ಸುರಕ್ಷಿತವಾಗಿದೆಯೇ ಅಥವಾ ಇಲ್ಲವೇ? ಎಂದು ಒಮ್ಮೆ ತಿಳಿದುಕೊಳ್ಳಿ’ ಎಂದಿದ್ದಾರೆ.

Lusiza Jarovsky ಹೆಸರಿನ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು ಇದರಲ್ಲಿ, ‘ಬಳಕೆದಾರರು ತಮ್ಮ ಫೋಟೋಗಳನ್ನು ಅಪ್ಲೋಡ್ ಮಾಡಿದ ಬಳಿಕ ಆ ಫೋಟೋಗಳ ಬಳಕೆಯ ಮೇಲಿನ ಸಂಪೂರ್ಣ ನಿಯಂತ್ರಣವನ್ನು ಕಳೆದುಕೊಳ್ಳುತ್ತಾರೆ. ಹೀಗಾಗಿ ಈ ಓಪನ್ ಎಐನ ಗೌಪ್ಯತಾ ನೀತಿಯು ಬಳಕೆದಾರರ ಇನ್‌ಪುಟ್ ಅನ್ನು ಮಾದರಿ ತರಬೇತಿಗಾಗಿ ಬಳಸಬಹುದು, ಇದರಿಂದ ಬಳಕೆದಾರರಿಗೆ ಎದುರಾಗುವ ಅಪಾಯವೇ ಹೆಚ್ಚು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ವೈರಲ್​​ ಪೋಸ್ಟ್ ಇಲ್ಲಿದೆ ನೋಡಿ:

ಈ ಆಪ್ ಗಳಲ್ಲಿ ಬಳಕೆದಾರರು ಫೋಟೋ ಅಪ್‌ಲೋಡ್ ಮಾಡಿದ ಬಳಿಕ, ಫೋಟೋ ಮೇಲೆ ಯಾವುದೇ ಹಕ್ಕು ಇರುವುದಿಲ್ಲ. ಈ ಫೋಟೋಗಳು ತಮ್ಮ ಉದ್ದೇಶಗಳಿಗೂ ಬಳಸಬಹುದು. ಮಾನಹಾನಿ ಹಾಗೂ ಕಿರುಕುಳಕ್ಕೆ ಬಳಸಬಹುದಾದ ವಿಷಯವನ್ನು ರಚಿಸಲು ಸಹ ಬಳಸಬಹುದು. ಅದಲ್ಲದೇ, ಬೇರೋಬ್ಬರ ಗುರುತನ್ನು ಕದಿಯುವ ಮೂಲಕ ನೀವು ಅಪ್‌ಲೋಡ್ ಮಾಡುವ ಫೋಟೋಗಳನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ನೂರಕ್ಕೆ ನೂರರಷ್ಟಿದೆ ಎಂದು ಹೇಳಿದ್ದಾರೆ.

ಅದಲ್ಲದೇ, ಜನರ ವೈಯಕ್ತಿಕ ಫೋಟೋಗಳನ್ನು ವೈಯಕ್ತಿಕಗೊಳಿಸಿದ ಜಾಹೀರಾತುಗಳಿಗಾಗಿ ಬಳಸಬಹುದು. ಇನ್ನು ಮೂರನೇ ವ್ಯಕ್ತಿಗಳಿಗೆ ಮಾರಾಟ ಮಾಡುವ ಮೂಲಕ ತಪ್ಪು ಉದ್ದೇಶಗಳಿಗೆ ಬಳಸಬಹುದು. ಈ ಘಿಬ್ಲಿ ಸ್ಟೈಲ್ ಫೋಟೋಗಳ ಅನಧಿಕೃತ ಬಳಕೆಯು ಕಾನೂನು ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಬಳಕೆದಾರರು ತಮ್ಮ ವೈಯುಕ್ತಿಕ ಫೋಟೋ ಅಪ್ಲೋಡ್ ಮಾಡುವ ಎಚ್ಚರ ವಹಿಸಬೇಕು ಎಂದಿದ್ದಾರೆ. ಈ ಪೋಸ್ಟ್ ವೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.

ಇದನ್ನೂ ಓದಿ: ಮುಕೇಶ್ ಅಂಬಾನಿ ಐಷಾರಾಮಿ ಮನೆಯ ಮೊದಲ ತಿಂಗಳ ಕರೆಂಟ್ ಬಿಲ್ ಎಷ್ಟು ಗೊತ್ತಾ?

ಬಳಕೆದಾರರೊಬ್ಬರು, ‘ಅತ್ಯಂತ ಅಪಾಯಕಾರಿ ಗೌಪ್ಯತಾ ಉಲ್ಲಂಘನೆಗಳು ಯೋಜನೆಗಳಲ್ಲಿ ಅಡಗಿರುವುದಿಲ್ಲ, ನಮ್ಮನ್ನು ಸ್ವಇಚ್ಛೆಯಿಂದ ಭಾಗವಹಿಸುವಂತೆ ಮಾಡುವ ಈ ರೀತಿ ವೈರಲ್ ಪ್ರವೃತ್ತಿಗಳಲ್ಲಿ ಸುತ್ತುವರೆದಿರುತ್ತವೆ’ ಎಂದಿದ್ದಾರೆ. ಇನ್ನೊಬ್ಬರು, ‘ಜನರು ತಮಗೆ ಅರಿವಿಲ್ಲದೆ ಅಪಾಯದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಚಾಟ್‌ಜಿಪಿಟಿ ತಮ್ಮ ಫೋಟೋಗಳನ್ನು ಕಾರ್ಟೂನ್ ಇಮೇಜ್ ಆಗಿ ಬದಲಿಸಿದ ಬಳಿಕ ಇನ್ನಿತ್ತರ ಬಳಕೆಗಳಿಗೆ ಬಳಸುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Thu, 3 April 25

ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ