AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು; ಯಕ್ಷಗಾನದಲ್ಲೂ ಗಿಲ್ಲಿ ಹಾಡಿನದ್ದೇ ಹವಾ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಮನಸ್ಸು ಗೆಲ್ಲುತ್ತವೆ. ಇದೀಗ ಯಕ್ಷಗಾನದಲ್ಲೂ ಬಿಗ್ ಬಾಸ್ ವಿನ್ನರ್ ಗಿಲ್ಲಿ ಹಾಡಿನದ್ದೇ ಹವಾ. ವೇದಿಕೆಯ ಮೇಲೆ ಕಲಾವಿದರು, ಗಿಲ್ಲಿಯ ಹಾಡು ಹಾಡಿ ಪ್ರೇಕ್ಷಕರನ್ನು ರಂಜಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು; ಯಕ್ಷಗಾನದಲ್ಲೂ ಗಿಲ್ಲಿ ಹಾಡಿನದ್ದೇ ಹವಾ
ವೈರಲ್ ವಿಡಿಯೋImage Credit source: Facebook
ಸಾಯಿನಂದಾ
|

Updated on: Feb 11, 2026 | 5:58 PM

Share

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ಎಂದಾಗ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಯಕ್ಷಗಾನ ವನ್ನು ನೋಡುವುದೇ ಕಣ್ಣಿಗೆ ಆನಂದ. ಪ್ರಸಂಗದಲ್ಲಿ ತಮಾಷೆಭರಿತವಾದ ಸಂಭಾಷಣೆಗಳು ಪ್ರೇಕ್ಷಕರನ್ನು ನಕ್ಕು ನಗಿಸುತ್ತವೆ. ಆದರೆ ಪೌರಾಣಿಕ ಪ್ರಸಂಗದ ನಡುವೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳು ಸೇರಿಸುತ್ತಾರೆ. ಆದರೆ ಇದೀಗ ಯಕ್ಷಗಾನದಲ್ಲಿ ಬಿಗ್ ಬಾಸ್ ವಿನ್ನರ್ ಗಿಲ್ಲಿ (Bigg Boss Winner Gilli) ಹಾಡಿನ ಹವಾ ಜೋರಾಗಿದೆ. ಹೌದು, ಬಿಗ್ ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ನಟ ಹೇಳುತ್ತಿದ್ದ ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು ಹಾಡು ಹೇಳಿ ಕಲಾವಿದರು ಪ್ರೇಕ್ಷಕ ವರ್ಗವನ್ನು ರಂಜಿಸುವ ಪ್ರಯತ್ನ ಮಾಡಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಯಕ್ಷ ಚರಿತ್ರೆ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕಲಾವಿದರು ವೇದಿಕೆಯ ಮೇಲೆ ದೊಡ್ಡವ್ವ ದೊಡ್ಡವ್ವ ದೋಸೆ ಕೊಡು, ಚಿಕ್ಕವ್ವ ಚಿಕ್ಕವ್ವ ಚಕ್ಲಿ ಕೊಡು ಎಂದು ಹೇಳಿದ್ದು, ಈ ತಮಾಷೆ ಭರಿತ ಸಂಭಾಷಣೆಯನ್ನು ನೀವಿಲ್ಲಿ ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಬಾಲಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ಒಬ್ಬ ಬಳಕೆದಾರ ಮಿತಿ ಮೀರಿದ ಹಾಸ್ಯ, ಇದು ಯಕ್ಷಗಾನಕ್ಕೆ ಅಗತ್ಯ ಇದೆಯೇ ಎಂದು ಕೇಳಿದ್ದಾರೆ. ಇನ್ನೊಬ್ಬರು, ಗಿಲ್ಲಿ ಸೂಪರ್ ಎಂದು ಹೇಳಿದರೆ, ಮತ್ತೊಬ್ಬರು, ನೆಗೆಟಿವ್ ಕಾಮೆಂಟ್ ಮಾಡುವವರು ಗಿಲ್ಲಿ ಹೇಟರ್ಸ್ ನೀವು ತಲೆ ಕೆಡಿಸಿಕೊಳ್ಳಬೇಡಿ ಅಷ್ಟಕ್ಕೂ ಆ ಹಾಡಲ್ಲಿ ಅಂತಹ ಕೆಟ್ಟ ಶಬ್ದ ಏನು ಇಲ್ಲ ಚನ್ನಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ