Video: ಸ್ಕೂಲ್​​​ನಲ್ಲಿ ದೆವ್ವ, ಮಕ್ಕಳ ಭಯ ಹೋಗಲಾಡಿಸಲು ಅಮಾವಾಸ್ಯೆ ರಾತ್ರಿಯಂದು ಶಾಲೆಯಲ್ಲಿ ಒಂಟಿಯಾಗಿ ಮಲಗಿದ ಮೇಷ್ಟ್ರು

ನಿಜವಾಗಿಯೂ ದೆವ್ವಗಳು ಇದೆಯಾ ಎಂಬುದು ಯಾರಿಗೂ ಗೊತ್ತಿಲ್ಲ. ಆದ್ರೆ ಈ ಮಕ್ಕಳಂತೂ ದೆವ್ವ ಭೂತದ ವಿಷಯಕ್ಕೆ ಸಿಕ್ಕಾಪಟ್ಟೆ ಭಯಪಟ್ಟುಕೊಳ್ಳುತ್ತಾರೆ. ಅದೇ ರೀತಿ ಇಲ್ಲೊಂದು ಶಾಲೆಯಲ್ಲಿಯೂ ದೆವ್ವ-ಭೂತದ ಕಾಟಯಿದೆಯೆಂಬ ವದಂತಿ ಹರಡಿದ್ದು, ಅಲ್ಲಿನ ಶಾಲಾ ಮಕ್ಕಳು ಶಾಲೆಗೆ ಬರಲೂ ಭಯಪಡುತ್ತಿದ್ದರು. ಮಕ್ಕಳ ಈ ಭಯವನ್ನು ಹೋಗಲಾಡಿಸಲು ಮೇಷ್ಟ್ರು ರಾತ್ರಿಯಿಡಿ ಶಾಲೆಯ ಕೊಠಡಿಯಲ್ಲಿಯೇ ಮಲಗಿದ್ದು, ಈ ಕುರಿತ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

Video: ಸ್ಕೂಲ್​​​ನಲ್ಲಿ ದೆವ್ವ, ಮಕ್ಕಳ ಭಯ ಹೋಗಲಾಡಿಸಲು ಅಮಾವಾಸ್ಯೆ ರಾತ್ರಿಯಂದು ಶಾಲೆಯಲ್ಲಿ ಒಂಟಿಯಾಗಿ ಮಲಗಿದ ಮೇಷ್ಟ್ರು
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 10, 2024 | 5:13 PM

ದೆವ್ವ ಭೂತಗಳು ನಿಜವಾಗಿಯೂ ಇದೆಯೇ ಎಂಬುದು ಯಾರಿಗೂ ಗೊತ್ತಿಲ್ಲ. ಕೆಲವರು ದೆವ್ವಗಳು ಇದೆಯೆಂದು ನಂಬಿದರೆ ಇನ್ನೂ ಕೆಲವರು ಇದೆಲ್ಲಾ ಕಟ್ಟುಕಥೆ ಪ್ರಪಂಚದಲ್ಲಿ ದೆವ್ವಭೂತ ಎಂಬುದು ಇಲ್ಲವೇ ಇಲ್ಲ ಎಂದು ಹೇಳುತ್ತಾರೆ. ಹೀಗಿದ್ದರೂ ಹೆಚ್ಚಿನವರು ದೆವ್ವ ಎಂಬ ಹೆಸರು ಕೇಳಿದ್ರೆ ಭಯಪಟ್ಟುಕೊಳ್ಳುತ್ತಾರೆ. ಅದರಲ್ಲೂ ಮಕ್ಕಳಿಗೆ ದೆವ್ವ ಭೂತದ ಭಯ ಸ್ವಲ್ಪ ಜಾಸ್ತಿಯೇ. ಇಲ್ಲೊಂದು ಶಾಲೆಯ ಮಕ್ಕಳೂ ಕೂಡಾ ತಮ್ಮ ಶಾಲೆಯಲ್ಲಿ ದೆವ್ವಗಳಿವೆ ಎಂದು ಹೆದರಿದ್ದು, ಈ ಮಕ್ಕಳ ಭಯವನ್ನು ಹೋಗಲಾಡಿಸಲು ಶಿಕ್ಷಕರೊಬ್ಬರು ರಾತ್ರಿಯಿಡಿ ಶಾಲೆಯ ಕೊಠಡಿಯಲ್ಲಿಯೇ ಮಲಗಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

ಈ ಘಟನೆ ತೆಲಂಗಾಣದ ಅದಿಲ್‌ಬಾದ್‌ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಆನಂದಪುರದ ಸರ್ಕಾರಿ ಶಾಲೆಯೊಂದರಲ್ಲಿ ಕೆಲ ದಿನಗಳಿಂದ ವಿದ್ಯಾರ್ಥಿಗಳು ನಮ್ಮ ಶಾಲೆಯಲ್ಲಿ ದೆವ್ವದ ಸಂಚಾರವಿದೆಯೆಂದು ಸಿಕ್ಕಾಪಟ್ಟೆ ಭಯಪಟ್ಟಿದ್ದು, ಶಾಲೆಯ ಶಿಕ್ಷಕರಾದ ರವೀಂದರ್‌ ಅಮವಾಸ್ಯೆಯ ರಾತ್ರಿ ಶಾಲೆಯಲ್ಲಿ ಒಬ್ಬರೇ ಮಲಗುವ ಮೂಲಕ ವಿದ್ಯಾರ್ಥಿಗಳ ಭಯವನ್ನು ಹೋಗಲಾಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ (ಎಕ್ಸ್​​​ ಖಾತೆ)

ಈ ಕುರಿತ ಪೋಸ್ಟ್‌ ಒಂದನ್ನು ಸುಧಾಕರ್‌ (sudhakarudumula) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗಿರುವ ಎರಡು ವಿಡಿಯೋಗಳ ಪೈಕಿ ಒಂದು ವಿಡಿಯೋದಲ್ಲಿ ಶಿಕ್ಷಕರೊಬ್ಬರು ಮಕ್ಕಳ ಭಯವನ್ನು ಹೋಗಲಾಡಿಸಲು ಒಂಟಿಯಾಗಿ ಅಮವಾಸ್ಯೆ ರಾತ್ರಿಯಲ್ಲಿ ಶಾಲೆಯ ಕೊಠಡಿಯಲ್ಲಿ ಮಲಗಿರುವ ದೃಶ್ಯವನ್ನು ಕಾಣಬಹುದು. ಎರಡನೇ ದೃಶ್ಯದಲ್ಲಿ ಮುಂಜಾನೇ ಬೇಗ ಎದ್ದು ಶಿಕ್ಷಕನನ್ನು ಕಾಣಲು ಶಾಲೆಗೆ ಬಂದ ವಿದ್ಯಾರ್ಥಿಗಳು ತಮ್ಮ ಮೇಷ್ಟ್ರು ಸುರಕ್ಷಿತವಾಗಿರುವುದನ್ನು ಕಂಡು ಇಲ್ಲಿ ಯಾವುದೇ ದ್ವೆವಗಳು ಇಲ್ಲ ಎಂಬುದು ಮನವರಿಕೆಯಾಗಿದೆ. ದೆವ್ವದ ಭಯ ಹೋಗಲಾಡಿಸಿದ ಶಿಕ್ಷಕನಿಗೆ ವಿದ್ಯಾರ್ಥಿಗಳು ಧನ್ಯವಾದ ತಿಳಿಸುವುದನ್ನು ಕಾಣಬಹುದು.

ಇದನ್ನೂ ಓದಿ: ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು; ಇದರ ಹಿಂದಿನ ಕಾರಣ ಏನು?

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 44 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರರು “ಮಕ್ಕಳ ಈ ಭಯವನ್ನು ಹೋಗಲಾಡಿಸಿದ ಧೈರ್ಯವಂತ ಶಿಕ್ಷಕರಿಗೆ ನನ್ನ ವಂದನೆಗಳು” ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಮೇಷ್ಟ್ರ ಈ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:12 pm, Wed, 10 July 24

ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ