Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಏಕಾಏಕಿ ಆಫೀಸ್ ಬಾಗಿಲು ಓಪನ್, ಅದೃಶ್ಯ ವ್ಯಕ್ತಿಯೊಂದಿಗೆ ಸಿಬ್ಬಂದಿಯ ಮಾತುಕತೆ,

ನಿಜವಾಗಿಯೂ ದೆವ್ವಗಳು ಇದೆಯಾ ಎನ್ನುವುದಕ್ಕೆ ಸ್ಪಷ್ಟವಾದ ಉತ್ತರವಿಲ್ಲವಾದರೂ, ದೆವ್ವ ಭೂತಗಳು ಇಲ್ಲವೇ ಇಲ್ಲ ಎಂದೇಳಲು ಸಾಧ್ಯವಿಲ್ಲ. ಇದೀಗ ಕಚೇರಿವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ವೊಬ್ಬರು ಬೆಳಗ್ಗಿನ ಜಾವ ಮೂರು ಗಂಟೆ ಸುಮಾರಿಗೆ ಅದೃಶ್ಯವಾದ ವ್ಯಕ್ತಿಯೊಂದಿಗೆ ಮಾತುಕತೆ ನಡೆಸುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆಯುತ್ತಿದೆ.

Video : ಏಕಾಏಕಿ ಆಫೀಸ್ ಬಾಗಿಲು ಓಪನ್, ಅದೃಶ್ಯ ವ್ಯಕ್ತಿಯೊಂದಿಗೆ ಸಿಬ್ಬಂದಿಯ ಮಾತುಕತೆ,
ವೈರಲ್​​​ ವಿಡಿಯೋ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 10, 2024 | 2:41 PM

ದೆವ್ವ ಭೂತಗಳು, ಪ್ರೇತಾತ್ಮಗಳು ಇವೆ ಎಂದು ಕೆಲವರು ನಂಬಿದರೆ, ಇನ್ನು ಕೆಲವರು ಇಲ್ಲ ಎಂದೇ ವಾದಿಸುತ್ತಾರೆ. ಆದರೆ ಒಳಗೊಳಗೆ ಭಯ ಅಂತೂ ಎಲ್ಲರಲ್ಲೂ ಇದ್ದೆ ಇರುತ್ತದೆ. ಕೆಲವೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ದೆವ್ವಗಳು ಇದೆ ಎನ್ನುವುದಕ್ಕೆ ಸಾಕ್ಷಿಯನ್ನು ಒದಗಿಸುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ, ಮುಂಜಾನೆಯ ವೇಳೆಯಲ್ಲಿ ಕಚೇರಿವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ವೊಬ್ಬರು ಅದೃಶ್ಯವಾಗಿರುವ ವ್ಯಕ್ತಿಯೊಂದಿಗೆ ಸಂವಹನ ನಡೆಸುತ್ತಿರುವ ವಿಚಿತ್ರ ವೀಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ವಿಡಿಯೋವೊಂದನ್ನು ಸಿಸಿಟಿವಿ ಈಡಿಯಟ್ಸ್ ಹೆಸರಿನ ಎಕ್ಸ್ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, “ಸೆಕ್ಯೂರಿಟಿ ಗಾರ್ಡ್ ಅದೃಶ್ಯ ವ್ಯಕ್ತಿಯನ್ನು ಬೆಳಗ್ಗೆ 3 ಗಂಟೆಗೆ ಕಚೇರಿ ಒಳಗೆ ಸ್ವಾಗತಿಸುತ್ತಾರೆ” ಎಂದು ಬರೆಯಲಾಗಿದೆ. ಈ ವಿಡಿಯೋದಲ್ಲಿ ಬೆಳಗ್ಗೆ 3 ಗಂಟೆಗೆ ಆಫೀಸಿನ ಬಾಗಿಲು ಸ್ವಯಂಚಾಲಿತವಾಗಿ ತೆರೆಯುತ್ತದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಆ ತಕ್ಷಣವೇ ಕುರ್ಚಿಯ ಮೇಲೆ ಕುಳಿತಿರುವ ಸಿಬ್ಬಂದಿ ತಕ್ಷಣವೇ ಮೇಲಕ್ಕೆ ಎದ್ದು ಕಾಣದ ಸಂದರ್ಶಕರನ್ನು ಒಳಗೆ ಸ್ವಾಗತಿಸಿ ಆ ಬಳಿಕ ಭದ್ರತಾ ತಪಾಸಣೆಯನ್ನು ಮಾಡಲಾಗುವುದನ್ನು ಕಾಣಬಹುದು. ಆ ಬಳಿಕ ಸಿಬ್ಬಂದಿಯು ಗಾಲಿ ಕುರ್ಚಿಯನ್ನು ಕೂರಲು ಕೊಟ್ಟು ಆ ಅದೃಶ್ಯವಾದ ವ್ಯಕ್ತಿಯೊಂದಿಗೆ ಮಾತನಾಡುವುದನ್ನು ನೋಡಬಹುದು. ಈ ವಿಡಿಯೋವನ್ನು ನೋಡುತ್ತಿದ್ದಂತೆ ಒಂದು ಕ್ಷಣ ಎದೆ ಝಲ್ ಎನ್ನುವಂತಿದೆ.

ಇದನ್ನೂ ಓದಿ: ರೈಲ್ವೆ ಸ್ಟೇಷನ್‌ ಬ್ರಿಡ್ಜ್‌ನಲ್ಲಿ ನಿಂತು ಸಾವರ್ಜನಿಕರ ಎದುರೇ ಪ್ರೇಮಿಗಳ ಮುತ್ತಿನಾಟ

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ನೆಟ್ಟಿಗನೊಬ್ಬರು ಇದು ನಿಜವಾಗಿಯೂ ಭ್ರಮೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ಆ ಸೆಕ್ಯೂರಿಟಿ ಗಾರ್ಡ್ ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದಾಗ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ