AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telia Bhola Fish: ಬಲೆಗೆ ಸಿಕ್ಕ 75 ಕೆಜಿ ದೈತ್ಯ ಮೀನು ಬರೋಬ್ಬರಿ 36 ಲಕ್ಷ ರೂಪಾಯಿಗೆ ಮಾರಾಟ; ಮೀನುಗಾರರು ಫುಲ್ ಖುಷ್

ನದಿಯಲ್ಲಿ ಬಲೆಯಲ್ಲಿ ಸಿಕ್ಕ ಟೆಲಿಯಾ ಭೋಲಾ ಮೀನಿನಿಂದ ಮೀನುಗಾರರ ಅದೃಷ್ಟವೇ ಬದಲಾಗಿದೆ. ಸುಮಾರು 36 ಲಕ್ಷ ರೂಪಾಯಿಗೆ ಮೀನು ಮಾರಾಟವಾಗಿದೆ.

Telia Bhola Fish: ಬಲೆಗೆ ಸಿಕ್ಕ 75 ಕೆಜಿ ದೈತ್ಯ ಮೀನು ಬರೋಬ್ಬರಿ 36 ಲಕ್ಷ ರೂಪಾಯಿಗೆ ಮಾರಾಟ; ಮೀನುಗಾರರು ಫುಲ್ ಖುಷ್
ಟೆಲಿಯಾ ಭೋಲಾ ಮೀನು
TV9 Web
| Updated By: shruti hegde|

Updated on:Oct 27, 2021 | 11:08 AM

Share

ಮೀನುಗಾರರು ನದಿಯಲ್ಲಿ ಬಲೆ ಹಾಕಿದರೆ ಸಾಕು ಗುಂಪು ಗುಂಪು ಮೀನುಗಳು ಬಲೆಗೆ ಬಿದ್ದಿರುತ್ತಿತ್ತು. ಆದರೆ ಅಂದು ಮಾತ್ರ ಮೀನುಗಾರರ ಅದೃಷ್ಟವೇ ಬದಲಾಗುವ ದಿನವಾಗಿತ್ತು. ಎಲ್ಲಾ ದಿನದಂತೆಯೇ ಮೀನುಗಾರರು ಮೀನು ಹಿಡಿಯಲು ನದಿಗೆ ಹೋಗಿದ್ದಾನೆ. ಬಲೆಗೆ ಸಿಕ್ಕಿದ ದೈತ್ಯ ಮೀನು ನೋಡಿ ಮೀನುಗಾರರು ಆಶ್ಚರ್ಯಚಕಿತರಾದರು. ಅದರಲ್ಲಿಯೂ ಬಲೆಗೆ ಸಿಕ್ಕ ಟೆಲಿಯಾ ಭೋಲಾ ಮೀನಿನಿಂದ ಮೀನುಗಾರರ ಅದೃಷ್ಟವೇ ಬದಲಾಗಿದೆ.

ಪಶ್ಚಿಮ ಬಂಗಾಳದ ಸುಂದರ್​ಬನ್​ ನದಿಯಲ್ಲಿ ಸುಮಾರು 7 ಅಡಿ ಉದ್ದ ಮತ್ತು 78.4 ಕಿಲೋ ತೂಕದ ದೈತ್ಯಾಕಾರದ ಟೆಲಿಯಾ ಭೋಲಾ ಮೀನನ್ನು ಕಂಡ ನೀನುಗಾರರ ಗುಂಪು ಆಶ್ಚರ್ಯಗೊಂಡರು. ಬಲೆಗೆ ಸಿಕ್ಕಿ ಹಾಕಿಕೊಂಡಿದ್ದ ದೈತ್ಯಾಕಾರದ ಮೀನನ್ನು ಎಳೆದು ತರಲು ಮೀನುಗಾರರು ಹರಸಾಹವೇ ಪಡೆಬೇಕಾಯಿತು. ಮನುಷ್ಯನ ಸಾಮಾನ್ಯ ಎತ್ತರದಷ್ಟೇ ಇದ್ದ ಆ ಮೀನು ಕಂಡು ಮೀನುಗಾರರಿಗೆ ಅಚ್ಚರಿಯಾಗಿದೆ. ಅಪರೂಪದ ಮೀನನ್ನು ನೋಡಲು ಸ್ಥಳೀಯರು ಮುಗಿ ಬಿದ್ದಿದ್ದು, ಇದರ ಮಾರಾಟದಿಂದ ಮೀನುಗಾರರು 36 ಲಕ್ಷ ರೂಪಾಯಿ ಗಳಿಸಿಕೊಂಡಿದ್ದಾರೆ.

ಕಳೆದ ಶನಿವಾರ ದೈತ್ಯ ಮೀನನ್ನು ಮಾರಾಟ ಮಾಡಲಾಯಿತು. ಇದೇ ಮೊದಲಿಗೆ ಇಷ್ಟೊಂದು ಬೃಹತ್ ಗಾತ್ರದ ಮೀನನ್ನು ನೋಡಿ ಜನರು ಆಶ್ಚರ್ಯಗೊಂಡರು. ಈ ಮೀನನ್ನು ಸುಮಾರು 36 ಲಕ್ಷ ರೂಪಾಯಿಗೆ ಹರಾಜು ಮಾಡಲಾಗಿದ್ದು, ಕೋಲ್ಕತ್ತಾ ಮೂಲದ ಮೀನು ವ್ಯಾಪಾರ ಕಂಪನಿ ಇದನ್ನು ಖರೀದಿಸಿತು ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಈ ಮಾರುಕಟ್ಟೆಯಲ್ಲಿ ನಾವು ಇಷ್ಟು ದೈತ್ಯ ಮೀನನ್ನು ಎಂದೂ ನೋಡಿರಲಿಲ್ಲ. ಹರಾಜಿನಲ್ಲಿ ಪ್ರತಿ ಕಿಲೋಗೆ 47,880 ರೂಪಾಯಿಗೆ ಮೀನನ್ನು ಮಾರಾಟ ಮಾಡಲಾಗಿದೆ. ಆಡುಮಾತಿನಲ್ಲಿ ಟೆಲಿಬಾ ಭೋಲಾ ಎಂದು ಕರೆಯಲ್ಪಡುವ ದೈತ್ಯ ಮೀನು ಅಪಾರ ಔಷಧೀಯ ಗುಣಗಳನ್ನು ಹೊಂದಿದೆ. ಮೀನಿನ ಮಾಂಸದಲ್ಲಿ ಅನೇಕ ಪೌಷ್ಟಿಕ ಗುಣಗಳನ್ನು ಹೊಂದಿದೆ. ಇದು ತುಂಬಾ ದುಬಾರಿ ಮೀನು ಎಂದು ಮೀನುಗಾರರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಂಡ ಸೈನಿಕರಿಗೆ ಸಲ್ಯೂಟ್ ಮಾಡಿದ 4 ವರ್ಷದ ಬಾಲಕ; ವಿಡಿಯೋ ವೈರಲ್

Viral Video: ಮನಿಕೆ ಮಗೆ ಹಿತೆ ಹಾಡಿಗೆ ಯುವತಿಯ ಬೆಲ್ಲಿ ಡಾನ್ಸ್​; ನೆಟ್ಟಿಗರೆಲ್ಲಾ ಫಿದಾ

Published On - 11:06 am, Wed, 27 October 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!