AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಅಡಿ ಉದ್ದದ ದೈತ್ಯ ಅನಕೊಂಡ ರಸ್ತೆ ದಾಟುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆ; ಕೆಲಹೊತ್ತು ಟ್ರಾಫಿಕ್ ಜಾಮ್

Viral Video: ರಸ್ತೆಯಲ್ಲಿ ವಾಹನಗಳು ಸಾಗುತ್ತಿದ್ದವು. ಈ ವೇಳೆ ಅನಕೊಂಡವೊಂದು ರಸ್ತೆ ದಾಟಿ ಒಂದುಕಡೆಯಿಂದ ಮತ್ತೊಂದು ಕಡೆಗೆ ದಾಟಲು ಮುಂದಾಗಿದೆ.

10 ಅಡಿ ಉದ್ದದ ದೈತ್ಯ ಅನಕೊಂಡ ರಸ್ತೆ ದಾಟುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆ; ಕೆಲಹೊತ್ತು ಟ್ರಾಫಿಕ್ ಜಾಮ್
10 ಅಡಿ ಉದ್ದದ ದೈತ್ಯ ಅನಕೊಂಡ ರಸ್ತೆ ದಾಟುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸರೆ; ಕೆಲಹೊತ್ತು ಟ್ರಾಫಿಕ್ ಜಾಮ್
TV9 Web
| Edited By: |

Updated on:Aug 25, 2021 | 11:33 AM

Share

ಇತ್ತೀಚೆಗಂತೂ ಕಾಡು ಪ್ರಾಣಿಗಳು ರಸ್ತೆಗಳಲ್ಲಿ ಓಡಾಡುತ್ತಿರುವ ಘಟನೆಯ ದೃಶ್ಯಗಳು ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಸೆರೆಯಾದ ದೃಶ್ಯದಲ್ಲಿ ದೈತ್ಯ ಅನಕೊಂಡವೊಂದು ರಸ್ತೆ ದಾಟುತ್ತಿದೆ. ಈ ಭಯಾನಕ ದೃಶ್ಯ ಕ್ಯಾಮಾರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸುಮಾರು 10 ಅಡಿ ಉದ್ದದ ದೈತ್ಯ ಅನಕೊಂಡ ರಸ್ತೆ ದಾಟುತ್ತಿರುವುದರಿಂದ ಕೆಲಹೊತ್ತು ಟ್ರಾಫಿಕ್ ಜಾಮ್ ಆಗಿದೆ.

ರಸ್ತೆಯಲ್ಲಿ ವಾಹನಗಳು ಸಾಗುತ್ತಿದ್ದವು. ಈ ವೇಳೆ ಅನಕೊಂಡವೊಂದು ರಸ್ತೆ ದಾಟಿ ಒಂದುಕಡೆಯಿಂದ ಮತ್ತೊಂದು ಕಡೆಗೆ ದಾಟಲು ಮುಂದಾಗಿದೆ. ದೈತ್ಯಾಕಾರದ ಹಾವನ್ನು ನೋಡಿ ಕೆಲವರು ಬೆರಗಾಗಿದ್ದಾರೆ. ಇನ್ನು ಕೆಲವರು ಕ್ಯಾಮರಾದಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ.

ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ಅನಕೊಂಡ ರಸ್ತೆ ದಾಟುವವರೆಗೂ ಕೆಲಹೊತ್ತು ವಾಹನಗಳೆಲ್ಲಾ ರಸ್ತೆಯ ಮಧ್ಯೆಯಲ್ಲಿಯೇ ನಿಂತಿತ್ತು. ಒಂದು ಕಡೆಯಿಂದ ಮತ್ತೊಂದು ಕಡೆಗೆ ದಾಟಿದ ಹಾವು ಹುಲ್ಲಿರುವ ಪ್ರದೇಶಕ್ಕೆ ತೆರಳಿದೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ.

ಹಾವಿಗೆ ಯಾವುದೇ ಹಾನಿ ಮಾಡದೇ ರಸ್ತೆ ದಾಟುವವರೆಗೆ ವಾಹನಗಳನ್ನು ನಿಲ್ಲಿಸಿದ್ದರಿಂದ ಪ್ರಯಾಣಕರಿಗೆ ಮತ್ತು ಸುತ್ತಲಿದ್ದ ಜನರಿಗೆ ಶ್ಲಾಘನೆ ವ್ಯಕ್ತವಾಗಿದೆ. ದೈತ್ಯ ಹಾವು ನೋಡಿದ ನೆಟ್ಟಿಗರಲ್ಲಿ ಕೆಲವರು ಭಯಗೊಂಡಿದ್ದಾರೆ. ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:

Shocking News: ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ 5 ಅಡಿ ಉದ್ದದ ನಾಗರಹಾವು!

Video: ವಿಮಾನವೇರಿದ ಹಾವು..; ಸರಕು ಹಾಕುವ ಜಾಗದಲ್ಲಿ ಸ್ನೇಕ್​ ನೋಡಿ ಕಂಗಾಲಾದ ಸಿಬ್ಬಂದಿ

(Giant anaconda cross busy road video goes viral)

Published On - 11:33 am, Wed, 25 August 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ