AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಗೊತ್ತಿಲ್ಲ, ನನ್ನನ್ನು ಯಾಕೆ ರಿಜೆಕ್ಟ್ ಮಾಡಿದರೋ’ ಬೀದಿಯಲ್ಲಿ ಬಿಕ್ಕಿದ ಮರಿಕೋಗಿಲೆ

Viral Song : ಈ ಮಗುವನ್ನು ತಿರಸ್ಕರಿಸಲು ಸಾಧ್ಯವೇ ಇಲ್ಲ ಎಂದು ಐಎಎಸ್​ ಅಧಿಕಾರಿ ಅವನೀಶ್ ಶರಣ್ ಟ್ವೀಟ್​ ಮಾಡಿದ್ದಾರೆ. ಅಲ್ಲದೆ, ಈಕೆಯ ಧ್ವನಿಮಾಧುರ್ಯಕ್ಕೆ 5.8 ಲಕ್ಷ ನೆಟ್ಟಿಗರು ಫಿದಾ ಆಗಿದ್ದಾರೆ. ಕೇಳಿ ಪಿಯಾ ತೋಸೆ ನೈನಾ...

Viral Video: ‘ಗೊತ್ತಿಲ್ಲ, ನನ್ನನ್ನು ಯಾಕೆ ರಿಜೆಕ್ಟ್ ಮಾಡಿದರೋ’ ಬೀದಿಯಲ್ಲಿ ಬಿಕ್ಕಿದ ಮರಿಕೋಗಿಲೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 08, 2022 | 4:43 PM

Viral : ಪ್ರತಿಭಾವಂತರಿಂದ ನಮ್ಮ ದೇಶ ತುಂಬಿತುಳುಕುತ್ತಿದೆ ಎನ್ನುವುದಕ್ಕೆ ಸಾಕ್ಷಿ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುವ ಇಂಥ ಇಂಪಾದ ಹಾಡುಗಳು. ಸಾಕಷ್ಟು ರಿಯಾಲಿಟಿ ಷೋಗಳಲ್ಲಿ ಅದೆಷ್ಟೋ ಪ್ರತಿಭಾವಂತ ಮಕ್ಕಳು, ಹದಿಹರೆಯದವರ ಗಾನವೈಖರಿಯನ್ನು ಕೇಳಿರುತ್ತೀರಿ. ಕೇಳಿ ಇವರಿಗೆ ಒಳ್ಳೆಯ ಅವಕಾಶ ಸಿಗಬೇಕೆಂದು ಮನಸ್ಸಿನಲ್ಲೇ ಹಾರೈಸಿರುತ್ತೀರಿ ಅಥವಾ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುತ್ತೀರಿ. ಹೀಗೆ ಈ ಹುಡುಗಿಗೆ ಇಲ್ಲಿ ಪಿಯಾ ತೋಸೆ ನೈನಾ ಲಾಗೇ ರೇ ಹಾಡನ್ನು ಇಂಪಾಗಿ ಹಾಡುತ್ತಲೇ ದುಃಖ ಉಮ್ಮಳಿಸಿ ಬಂದಿದೆ. ಐಎಎಸ್ ಅಧಿಕಾರಿ ಅವನೀಶ್​ ಶರಣ್ ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. 5.8 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಇದು ಪಡೆದಿದೆ. ಯಾಕೆ ಆಕೆ ಅತ್ತಿದ್ದು?

ಈ ಹುಡುಗಿ ಗಾಯನ ಸ್ಪರ್ಧೆಯೊಂದರ ಆಡಿಷನ್​ ಕೊಟ್ಟು ಹೊರಬಂದಾಗ ವರದಿಗಾರರೊಬ್ಬರು ಮಾತನಾಡಿಸಿದ್ದಾರೆ. ಆಗ ಆಕೆ ಲತಾ ಮಂಗೇಶ್ಕರ ಹಾಡಿದ ಪಿಯಾ ತೋಸೇ ನೈನಾ ಹಾಡನ್ನು ಹಾಡುತ್ತ, ತಾನು ಸೆಲೆಕ್ಟ್ ಆಗದೇ ಇದ್ದುದಕ್ಕಾಗಿ ಮಧ್ಯದಲ್ಲಿಯೇ ಹಾಡು ನಿಲ್ಲಿಸಿ ಬಿಕ್ಕಿದ್ದಾಳೆ. ಆದರೆ ಎಂಥ ಮಧುರ ಧ್ವನಿ ಇವಳದು, ಯಾರೂ ಮನಸೋಲುವಂಥದ್ದು.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ಮುಗ್ಧ ಹುಡುಗಿಯ ಶಾರೀರ, ನಾದ ಹೊಮ್ಮಿಸುವಿಕೆ ನನ್ನ ಹೃದಯವನ್ನು ಗೆದ್ದಿದೆ. ನಿಮ್ಮ ರಿಯಾಲಿಟಿ ಷೋಗೆ ಇವಳನ್ನು ಸೇರಿಸಿಕೊಳ್ಳುವ ಮೂಲಕ ಪ್ರತಿಭೆಗೆ ನ್ಯಾಯ ಒದಗಿಸಿ ಎಂದು Soni tv, Ztv ಗೆ ಹಲವಾರು ಜನರು ಪ್ರತಿಕ್ರಿಯೆಗಳ ಮೂಲಕ ಮನವಿ ಮಾಡಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋ ನೋಡಲು ಕ್ಲಿಕ್ ಮಾಡಿ

Published On - 4:33 pm, Mon, 8 August 22

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ