AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹದಗೆಟ್ಟ ಊರಿನ ರಸ್ತೆಯ ಬಗ್ಗೆ ವಿವರಿಸಲು ರಿಪೋರ್ಟರ್​ ಆದ ಬಾಲಕಿ

ಬಾಲಕಿಯೊಬ್ಬಳು ರಿಪೋರ್ಟರ್​ ಆಗುವ ಮೂಲಕ ತಮ್ಮ ಊರಿನ ರಸ್ತೆಯ ದುಸ್ಥಿತಿಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ. ಸದ್ಯ ವಿಡಿಯೋ ಸಖತ್​ ವೈರಲ್​ ಆಗಿದೆ.

Viral Video: ಹದಗೆಟ್ಟ ಊರಿನ ರಸ್ತೆಯ ಬಗ್ಗೆ ವಿವರಿಸಲು ರಿಪೋರ್ಟರ್​ ಆದ ಬಾಲಕಿ
ವರದಿಗಾರ್ತಿಯಾಗಿರುವ ಬಾಲಕಿ
Follow us
TV9 Web
| Updated By: Pavitra Bhat Jigalemane

Updated on:Jan 11, 2022 | 12:11 PM

ಜಮ್ಮು&ಕಾಶ್ಮೀರ: ಸಾಮಾಜಿಕ ಜಾಲತಾಣಗಳು ಕೇವಲ ತಮಾಷೆ ವಿಡಿಯೋಗಳಿಗೆ ವೇದಿಕೆಯಾಗಿ ಉಳಿಯದೆ ಸಾಮಾಜದ ಉತ್ತಮ ಕೆಲಸಗಳಿಗೂ ಪ್ಲಾಟ್​ಫಾರ್ಮ್​ ಆಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಪುಟ್ಟ ಮಕ್ಕಳು ಕೂಡ ತಮ್ಮ ಕ್ರಿಯೇವಿಟಿಯನ್ನು ಬಳಸಿಕೊಂಡು ಸಮಾಜಿಕ ಕೆಲಸಗಳಿಗೆ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಅದಕ್ಕೆ ಉದಾಹರಣೆ ಎಂಬಂತೆ ಕಾಶ್ಮೀರದ ಪುಟ್ಟ ಬಾಲಕಿಯೊಬ್ಬಳು ತನ್ನೂರಿನ ರಸ್ತೆಯ ದುಸ್ಥಿತಿಯ ಬಗ್ಗೆ ವಿಡಿಯೋ ಮಾಡಿ ಹಂಚಿಕೊಂಡಿದ್ದಾಳೆ. ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸುರಿದ ಹಿಮ ಮಳೆಗೆ ರಸ್ತೆಗಳು ಹದಗೆಟ್ಟಿವೆ. ರಸ್ತೆ ಮಧ್ಯೆ ಗುಂಡಿಗಳಾಗಿ ನೀರು ನಿಂತು ಜನ ಓಡಾಡಲೂ ಸಾಧ್ಯವಾಗದೆ ಕಷ್ಟಪಡುತ್ತಿದ್ದಾರೆ. ಈ ನಡುವೆ ಬಾಲಕಿಯೊಬ್ಬಳು ರಿಪೋರ್ಟರ್​ ಆಗುವ ಮೂಲಕ ತಮ್ಮ ಊರಿನ ರಸ್ತೆಯ ದುಸ್ಥಿತಿಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ. ಸದ್ಯ ವಿಡಿಯೋ ಸಖತ್​ ವೈರಲ್​ ಆಗಿದೆ. ಗುಲಾಬಿ ಬಣ್ಣದ ಜಾಕೆಟ್​ ಧರಿಸಿದ ಪುಟ್ಟ ಬಾಲಕಿಯೊಬ್ಬಳು ಮೈಕ್​ ಹಿಡಿದು ರಸ್ತೆ ಹದಗೆಟ್ಟ ಬಗ್ಗೆ ದೂರಿದ್ದಾಳೆ. 

ವಿಡಿಯೋದಲ್ಲಿ ಬಾಲಕಿ ಹಾಳಾದ ರಸ್ತೆಯನ್ನು ತೋರಿಸಿ ಮಾತನಾಡಿ ಇಷ್ಟು ಕೆಟ್ಟ ರಸ್ತೆ ಇರುವುದರಿಂದ ಸಂಬಂಧಿಕರು ಮನೆಗೆ ಬರುತ್ತಿಲ್ಲ, ನಮಗೂ ನಡೆದಾಡಲು ಕಷ್ಟವಾಗುತ್ತಿದೆ. ನೋಡಿ ಎಷ್ಟು ಕಸ ಮತ್ತು ಕೆಸರು ತುಂಬಿಕೊಂಡಿದೆ ಎಂದು ತೋರಿಸುತ್ತಾಳೆ. 2 ನಿಮಿಷದವರೆಗೆ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗಿ ಕೆಸರು ತುಂಬಿದ ರಸ್ತೆಯಲ್ಲಿ ಓಡಾಡಿ ರಸ್ತೆ ಹದಗೆಟ್ಟ ಬಗ್ಗೆ ಅಲ್ಲಿಯ ಜನರು ಸಂಚರಿಸಲು ಕಷ್ಟಪಡುತ್ತಿರುವ ಬಗ್ಗೆ ವಿವರಿಸಿದ್ದಾಳೆ.  ಅಲ್ಲದೇ ಅಲ್ಲಿ ಹಾಕಿರುವ ಕಸಗಳನ್ನು ನೋಡಿ ಕೋಪಗೊಂಡು ಜನರೂ ಕೂಡ ಎಷ್ಟು ಕೊಳಕು ಮನಸ್ಥಿತಿಯವರಾಗಿದ್ದಾರೆ ಎಂದು  ಕೂಗಿದ್ದಾಳೆ.

ವಿಡಿಯೋದ ಕೊನೆಯಲ್ಲಿ ತನ್ನ ವಿಡಿಯೋವನ್ನು ಲೈಕ್,​ ಶೇರ್​ ಮಾಡಿ ಚಾನೆಲ್ ಅನ್ನು ಸಬ್ಸ್ಕ್ರೈಬ್​ ಮಾಡುವಂತೆ ಕೇಳಿದ್ದಾಳೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ. ಒಂದು ಮಿಲಿಯನ್​ಗೂ ಅಧಿಕ ವೀಕ್ಷಣೆಗೊಂಡ ವಿಡಿಯೋ  ಲಕ್ಷಾಂತರ ಬಾರಿ ರೀ ಶೇರ್ ಆಗಿದೆ.

ಈ ಹಿಂದೆ ಪ್ರಧಾನಿ ಮೋದಿಯವರನ್ನು ಉಲ್ಲೇಖಸಿ ಬಾಲಕಿಯೊಬ್ಬಳು ಶಾಲೆಯಲ್ಲಿ ಹೆಚ್ಚು ಹೋಮ್​ ವರ್ಕ್​ ಕೊಡುತ್ತಾರೆ ಎಂದು ದೂರಿದ್ದಳು. ಇದೀಗ ಬಾಲಕಿ ಸರ್ಕಾರವನ್ನು ಎಚ್ಚರಿಸುವ ರೀತಿ ವಿಡಿಯೋ ಮಾಡಿ ತನ್ನ ಊರಿನ ಪರಿಸ್ಥಿಯನ್ನು ತೋರಿಸಿದ್ದಾಳೆ.

ಇದನ್ನೂ ಓದಿ:

ನೀರಿನ ಟ್ಯಾಂಕ್​ನಲ್ಲಿ ಕೋಟಿ ರೂ. ಅಡಗಿಸಿಟ್ಟ ಉದ್ಯಮಿ: ಐಟಿ ದಾಳಿಯಲ್ಲಿ ಹೊರತೆಗೆದ ನೋಟುಗಳನ್ನು ಹೇರ್​ ಡ್ರೈಯರ್​ನಲ್ಲಿ ಒಣಗಿಸಿದ ಅಧಿಕಾರಿಗಳು

Published On - 12:08 pm, Tue, 11 January 22

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ