AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಮೈ ಮೇಲೆ ದೆವ್ವ ಬಂದಂತೆ ವರ್ತಿಸುತ್ತಿರುವ ವಿದ್ಯಾರ್ಥಿನಿಯರು, ಗಾಬರಿಗೊಂಡ ಶಿಕ್ಷಕ ವೃಂದ

ದೆವ್ವಗಳು ಇವೆಯೇ, ಪ್ರೇತಾತ್ಮಗಳು ರಾತ್ರಿಯ ವೇಳೆ ಸಂಚಾರ ಮಾಡುತ್ತವೆಯೇ ಹೀಗೊಂದು ಪ್ರಶ್ನೆಗಳು ಎಲ್ಲರಲ್ಲಿ ಮೂಡುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಮೈ ಮೇಲೆ ದೆವ್ವಗಳು ಬಂದಿವೆ. ವಿದ್ಯಾರ್ಥಿ ನಿಯರು ವಿಚಿತ್ರವಾಗಿ ವರ್ತಿಸುತ್ತಿದ್ದು, ಈ ವಿಡಿಯೋ ನೋಡಿದ ನೆಟ್ಟಿಗರಲ್ಲಿ ಕೆಲವರು ಗಾಬರಿಯಾಗಿದ್ದಾರೆ.

Viral Video : ಮೈ ಮೇಲೆ ದೆವ್ವ ಬಂದಂತೆ ವರ್ತಿಸುತ್ತಿರುವ ವಿದ್ಯಾರ್ಥಿನಿಯರು, ಗಾಬರಿಗೊಂಡ ಶಿಕ್ಷಕ ವೃಂದ
ವೈರಲ್​​ ವಿಡಿಯೋ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 26, 2024 | 5:27 PM

ದೈವಿ ಶಕ್ತಿಯಿದ್ದಲ್ಲಿ ದುಷ್ಟ ಶಕ್ತಿಗಳು ಇರುವುದು ಸಹಜ. ಆದರೆ ಮನುಷ್ಯನು ಎಷ್ಟೇ ಧೈರ್ಯವಂತನಾಗಿದ್ದರೂ ಭೂತ ಪ್ರೇತಗಳಿಗೆ ಸಹಜವಾಗಿಯೇ ಹೆದರುತ್ತಾರೆ. ಅದಲ್ಲದೇ, ರಾತ್ರಿಯ ವೇಳೆ ಶ್ವಾನಗಳ ಕಣ್ಣಿಗೆ ದೆವ್ವ, ಆತ್ಮಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ನಡುರಾತ್ರಿಯಲ್ಲಿ ಈ ಶ್ವಾನಗಳು ದೆವ್ವಗಳನ್ನು ಕಂಡಾಗ ವಿಚಿತ್ರವಾಗಿ ಕೂಗುತ್ತವೆ ಎನ್ನುವುದು ಎಲ್ಲರ ನಂಬಿಕೆ. ಆದರೆ ಕೆಲವೊಮ್ಮೆ ಈ ಕೆಟ್ಟ ಶಕ್ತಿಗಳು ಮನುಷ್ಯನ ಮೈಯನ್ನು ಸೇರಿಕೊಳ್ಳುವುದಿದೆ.

ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಈ ಶಾಲೆಯ ವಿದ್ಯಾರ್ಥಿನಿಯರು ದೆವ್ವಗಳು ಮೈ ಮೇಲೆ ಬಂದಂತೆ ವರ್ತಿಸಿದ್ದಾರೆ. ಅಷ್ಟೇ ಅಲ್ಲದೇ, ಏಕಾಏಕಿ ತರಗತಿ ಕೊಠಡಿಯೊಳಗಿನಿಂದ ಕಿರುಚುತ್ತ ಹೊರಗೆ ಬಂದು ನೆಲೆದ ಮೇಲೆ ಒರಳಾಡುತ್ತಿದ್ದಾರೆ. ಮೈ ಮೇಲೆ ಏನೋ ಮೆಟ್ಟಿಕೊಂಡವರಂತೆ ವಿಚಿತ್ರವಾಗಿ ವರ್ತಿಸುತ್ತಿದ್ದಾರೆ. ಈ ವಿಚಿತ್ರವಾದ ವರ್ತನೆಯನ್ನು ಶಾಲಾ ಶಿಕ್ಷಕರು ಹಾಗೂ ಉಳಿದ ವಿದ್ಯಾರ್ಥಿಗಳು ಗಾಬರಿಯಿಂದ ನೋಡುತ್ತಾ ನಿಂತಿದ್ದಾರೆ.

Its me basu ಎನ್ನುವ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮೈ ನಡುಕ ಹುಟ್ಟಿಸುವ ವಿಡಿಯೋವೊಂದನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ದೆವ್ವ ಮೈ ಮೇಲೆ ಬಂದಿರುವಂತೆ ವರ್ತಿಸುವುದನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ. ಈ ವಿಡಿಯೋ ಇಪ್ಪತ್ತಾರು ಸಾವಿರಕ್ಕೂ ಅಧಿಕ ವ್ಯೂಸ್ ಕಂಡಿದ್ದು, ಈ ವಿಡಿಯೋ ನೋಡಿದ ನೆಟ್ಟಿಗರು ಗಾಬರಿಗೊಂಡಿದ್ದಾರೆ.

ಇದನ್ನೂ ಓದಿ: ಈ ಪುಟಾಣಿ ಮನೆ ಹೋಗ್ಲಿಲ್ಲ ಅಂದ್ರೆ ಅಜ್ಜ ಅಜ್ಜಿ ಗಾಬರಿಯಾಗ್ತಾರಂತೆ, ಕ್ಯೂಟ್ ವಿಡಿಯೋ ವೈರಲ್

ಕೆಲವರು ತಮಾಷೆಯಾಗಿಯೇ ಕಾಮೆಂಟ್ ಗಳನ್ನು ಮಾಡಿದ್ದು, ಬಳಕೆದಾರರೊಬ್ಬರು, ‘ಶಾಲೆಗೆ ಹೋಗುವ ಮನಸ್ಸಿಲ್ಲ ಅದಕ್ಕೆ ಈ ರೀತಿ ನಾಟಕ, ಯಾವ ದೆವ್ವನೂ ಇಲ್ಲ, ಭೂತನು ಇಲ್ಲ’ ಎಂದಿದ್ದಾರೆ. ಮತ್ತೊಬ್ಬರು, ‘ ಟೀಚರ್ ಹೋಮ್ ವರ್ಕ್ ಕೇಳಿರ್ಬೇಕು, ಅದಕ್ಕೆ ದೆವ್ವ ಬಂದಿರುತ್ತೆ’ ಎಂದಿದ್ದಾರೆ. ಇನ್ನೊಬ್ಬರು, ‘ಹುಲಿಕಲ್ ನಟರಾಜ್ ಅವರನ್ನು ಭೇಟಿ ಮಾಡಿ ಎಲ್ಲಾ ಸರಿ ಆಗುತ್ತೆ’ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ