AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಸ್ಟೇಶನ್​ ಗೋಡೆ ಹತ್ತಿದ ಯುವತಿಯನ್ನು ಆಕೆಗೆ ಗೊತ್ತಾಗದಂತೆ ಕಾಪಾಡಿದ ಪೊಲೀಸ್​; ವಿಡಿಯೋ ವೈರಲ್

ಯುವತಿ ಮೆಟ್ರೋಸ್ಟೇಶನ್​ನ ಸೆಕ್ಟರ್​ 28ರ ಗೋಡೆಯ ಮೇಲೆ ಕುಳಿತಿದ್ದಳು. ಆಕೆಯ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದರು. ಮೆಟ್ರೋ ಸ್ಟೇಶನ್​ನ ಸೆಕ್ಯೂರಿಟಿ ಸಿಬ್ಬಂದಿಯೂ ಆಕೆಯ ಬಳಿ ಸುರಕ್ಷಿತವಾಗಿ ಕೆಳಗೆ ಬರುವಂತೆ ಕೇಳಿಕೊಳ್ಳುತ್ತಿದ್ದರು.

ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಸ್ಟೇಶನ್​ ಗೋಡೆ ಹತ್ತಿದ ಯುವತಿಯನ್ನು ಆಕೆಗೆ ಗೊತ್ತಾಗದಂತೆ ಕಾಪಾಡಿದ ಪೊಲೀಸ್​; ವಿಡಿಯೋ ವೈರಲ್
ದೆಹಲಿ ಮೆಟ್ರೋ ಸ್ಟೇಶನ್​​ನಲ್ಲಿ ಯುವತಿಯನ್ನು ರಕ್ಷಿಸಿದ ಪೊಲೀಸ್​
TV9 Web
| Updated By: Lakshmi Hegde|

Updated on:Jul 25, 2021 | 6:57 PM

Share

ಮೆಟ್ರೋ ಸ್ಟೇಶನ್​​ನ ಎತ್ತರದ ಗೋಡೆಯೊಂದನ್ನು ಹತ್ತಿ, ಅಲ್ಲಿಂದ ಹಾರಲು ಯತ್ನಿಸುತ್ತಿದ್ದ ಯುವತಿಯನ್ನು ಅದೇ ಸ್ಟೇಶನ್​​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲವು ಪೊಲೀಸ್​ ಸಿಬ್ಬಂದಿ ಸರಿಯಾದ ಸಮಯದಲ್ಲಿ ರಕ್ಷಿಸಿದ್ದಾರೆ. ದೆಹಲಿ ಸಮೀಪದ ಫರಿದಾಬಾದ್​ನಲ್ಲಿರುವ ಮೆಟ್ರೋಸ್ಟೇಶನ್​ನಲ್ಲಿ ಘಟನೆ ನಡೆದಿದ್ದು, 45 ಸೆಕೆಂಡ್​​ಗಳ ವಿಡಿಯೋ ಇದೀಗ ಸಿಕ್ಕಾಪಟೆ ವೈರಲ್ ಆಗಿದೆ.

ಆ ಯುವತಿ ಮೆಟ್ರೋಸ್ಟೇಶನ್​ನ ಸೆಕ್ಟರ್​ 28ರ ಗೋಡೆಯ ಮೇಲೆ ಕುಳಿತಿದ್ದಳು. ಆಕೆಯ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದರು. ಮೆಟ್ರೋ ಸ್ಟೇಶನ್​ನ ಸೆಕ್ಯೂರಿಟಿ ಸಿಬ್ಬಂದಿಯೂ ಆಕೆಯ ಬಳಿ ಸುರಕ್ಷಿತವಾಗಿ ಕೆಳಗೆ ಬರುವಂತೆ ಕೇಳಿಕೊಳ್ಳುತ್ತಿದ್ದರು. ಆದರೆ ಆಕೆ ಅಲ್ಲೇ ಮೌನವಾಗಿ ಕುಳಿತಿದ್ದಳು. ಕೆಳಗೆ ಹಾರಲೂ ಇಲ್ಲ..ಮೇಲೆ ಬರಲೂ ಇಲ್ಲ. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸ್ ಸಿಬ್ಬಂದಿಯೂ ಅಲ್ಲಿ ಬಂದಿದ್ದಾರೆ. ಅದರಲ್ಲಿ ಕಾನ್​ಸ್ಟೆಬಲ್​ ಒಬ್ಬರು, ಆಕೆಗೆ ಗೊತ್ತಾಗದಂತೆ ಸುಮ್ಮನೆ ಆಕೆ ಇದ್ದ ಸ್ಥಳಕ್ಕೆ ಹೋಗಿ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಪೊಲೀಸ್​ ಕಾನ್​ಸ್ಟೆಬಲ್​ ಬಂದಿದ್ದು ಹುಡುಗಿಗೆ ಗೊತ್ತಾಗಲೇ ಇಲ್ಲ. ಅವರು ಹಿಡಿದುಕೊಂಡ ಬಳಿಕ, ಇನ್ನೊಬ್ಬರೂ ಮೇಲಿನಿಂದಲೇ ಹಾಕಿ ಬಂದು ಆಕೆಯನ್ನು ಹಿಡಿದುಕೊಂಡಿದ್ದಾರೆ. ನಂತರ ಅವರಿಬ್ಬರೂ ಸೇರಿ ಆಕೆಯನ್ನು ಕಾಪಾಡಿದ್ದಾರೆ.

ಹುಡುಗಿಯನ್ನು ಯಶಸ್ವಿಯಾಗಿ ರಕ್ಷಿಸಿದ ಕಾನ್​ಸ್ಟೆಬಲ್​ ಸರ್ಫ್​ರಾಜ್​ ಅವರನ್ನು ಪೊಲೀಸ್ ಕಮಿಷನರ್​ ಒಪಿ ಸಿಂಗ್ ಶ್ಲಾಘಿಸಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರೂ ಫುಲ್ ಖುಷಿ ವ್ಯಕ್ತಪಡಿಸಿದ್ದಾರೆ. ಅವರ ಸಮಯಪ್ರಜ್ಞೆಗೆ ದೊಡ್ಡ ಸಲಾಂ ಎಂದಿದ್ದಾರೆ. ಈ ವಿಡಿಯೋ ನೋಡಿ..

ಇದನ್ನೂ ಓದಿ: Uttara Kannada Flood: ಉತ್ತರ ಕನ್ನಡ ಪ್ರವಾಹ; ಭೂಕುಸಿತಕ್ಕೆ ತತ್ತರಿಸಿದ ಯಲ್ಲಾಪುರದ ಗ್ರಾಮಗಳು

Girl Who Attempting Suicide is saved by Police In Delhi

Published On - 6:56 pm, Sun, 25 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ