AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಸ್ಟೇಶನ್​ ಗೋಡೆ ಹತ್ತಿದ ಯುವತಿಯನ್ನು ಆಕೆಗೆ ಗೊತ್ತಾಗದಂತೆ ಕಾಪಾಡಿದ ಪೊಲೀಸ್​; ವಿಡಿಯೋ ವೈರಲ್

ಯುವತಿ ಮೆಟ್ರೋಸ್ಟೇಶನ್​ನ ಸೆಕ್ಟರ್​ 28ರ ಗೋಡೆಯ ಮೇಲೆ ಕುಳಿತಿದ್ದಳು. ಆಕೆಯ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದರು. ಮೆಟ್ರೋ ಸ್ಟೇಶನ್​ನ ಸೆಕ್ಯೂರಿಟಿ ಸಿಬ್ಬಂದಿಯೂ ಆಕೆಯ ಬಳಿ ಸುರಕ್ಷಿತವಾಗಿ ಕೆಳಗೆ ಬರುವಂತೆ ಕೇಳಿಕೊಳ್ಳುತ್ತಿದ್ದರು.

ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಸ್ಟೇಶನ್​ ಗೋಡೆ ಹತ್ತಿದ ಯುವತಿಯನ್ನು ಆಕೆಗೆ ಗೊತ್ತಾಗದಂತೆ ಕಾಪಾಡಿದ ಪೊಲೀಸ್​; ವಿಡಿಯೋ ವೈರಲ್
ದೆಹಲಿ ಮೆಟ್ರೋ ಸ್ಟೇಶನ್​​ನಲ್ಲಿ ಯುವತಿಯನ್ನು ರಕ್ಷಿಸಿದ ಪೊಲೀಸ್​
TV9 Web
| Edited By: |

Updated on:Jul 25, 2021 | 6:57 PM

Share

ಮೆಟ್ರೋ ಸ್ಟೇಶನ್​​ನ ಎತ್ತರದ ಗೋಡೆಯೊಂದನ್ನು ಹತ್ತಿ, ಅಲ್ಲಿಂದ ಹಾರಲು ಯತ್ನಿಸುತ್ತಿದ್ದ ಯುವತಿಯನ್ನು ಅದೇ ಸ್ಟೇಶನ್​​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲವು ಪೊಲೀಸ್​ ಸಿಬ್ಬಂದಿ ಸರಿಯಾದ ಸಮಯದಲ್ಲಿ ರಕ್ಷಿಸಿದ್ದಾರೆ. ದೆಹಲಿ ಸಮೀಪದ ಫರಿದಾಬಾದ್​ನಲ್ಲಿರುವ ಮೆಟ್ರೋಸ್ಟೇಶನ್​ನಲ್ಲಿ ಘಟನೆ ನಡೆದಿದ್ದು, 45 ಸೆಕೆಂಡ್​​ಗಳ ವಿಡಿಯೋ ಇದೀಗ ಸಿಕ್ಕಾಪಟೆ ವೈರಲ್ ಆಗಿದೆ.

ಆ ಯುವತಿ ಮೆಟ್ರೋಸ್ಟೇಶನ್​ನ ಸೆಕ್ಟರ್​ 28ರ ಗೋಡೆಯ ಮೇಲೆ ಕುಳಿತಿದ್ದಳು. ಆಕೆಯ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದರು. ಮೆಟ್ರೋ ಸ್ಟೇಶನ್​ನ ಸೆಕ್ಯೂರಿಟಿ ಸಿಬ್ಬಂದಿಯೂ ಆಕೆಯ ಬಳಿ ಸುರಕ್ಷಿತವಾಗಿ ಕೆಳಗೆ ಬರುವಂತೆ ಕೇಳಿಕೊಳ್ಳುತ್ತಿದ್ದರು. ಆದರೆ ಆಕೆ ಅಲ್ಲೇ ಮೌನವಾಗಿ ಕುಳಿತಿದ್ದಳು. ಕೆಳಗೆ ಹಾರಲೂ ಇಲ್ಲ..ಮೇಲೆ ಬರಲೂ ಇಲ್ಲ. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸ್ ಸಿಬ್ಬಂದಿಯೂ ಅಲ್ಲಿ ಬಂದಿದ್ದಾರೆ. ಅದರಲ್ಲಿ ಕಾನ್​ಸ್ಟೆಬಲ್​ ಒಬ್ಬರು, ಆಕೆಗೆ ಗೊತ್ತಾಗದಂತೆ ಸುಮ್ಮನೆ ಆಕೆ ಇದ್ದ ಸ್ಥಳಕ್ಕೆ ಹೋಗಿ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಪೊಲೀಸ್​ ಕಾನ್​ಸ್ಟೆಬಲ್​ ಬಂದಿದ್ದು ಹುಡುಗಿಗೆ ಗೊತ್ತಾಗಲೇ ಇಲ್ಲ. ಅವರು ಹಿಡಿದುಕೊಂಡ ಬಳಿಕ, ಇನ್ನೊಬ್ಬರೂ ಮೇಲಿನಿಂದಲೇ ಹಾಕಿ ಬಂದು ಆಕೆಯನ್ನು ಹಿಡಿದುಕೊಂಡಿದ್ದಾರೆ. ನಂತರ ಅವರಿಬ್ಬರೂ ಸೇರಿ ಆಕೆಯನ್ನು ಕಾಪಾಡಿದ್ದಾರೆ.

ಹುಡುಗಿಯನ್ನು ಯಶಸ್ವಿಯಾಗಿ ರಕ್ಷಿಸಿದ ಕಾನ್​ಸ್ಟೆಬಲ್​ ಸರ್ಫ್​ರಾಜ್​ ಅವರನ್ನು ಪೊಲೀಸ್ ಕಮಿಷನರ್​ ಒಪಿ ಸಿಂಗ್ ಶ್ಲಾಘಿಸಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರೂ ಫುಲ್ ಖುಷಿ ವ್ಯಕ್ತಪಡಿಸಿದ್ದಾರೆ. ಅವರ ಸಮಯಪ್ರಜ್ಞೆಗೆ ದೊಡ್ಡ ಸಲಾಂ ಎಂದಿದ್ದಾರೆ. ಈ ವಿಡಿಯೋ ನೋಡಿ..

ಇದನ್ನೂ ಓದಿ: Uttara Kannada Flood: ಉತ್ತರ ಕನ್ನಡ ಪ್ರವಾಹ; ಭೂಕುಸಿತಕ್ಕೆ ತತ್ತರಿಸಿದ ಯಲ್ಲಾಪುರದ ಗ್ರಾಮಗಳು

Girl Who Attempting Suicide is saved by Police In Delhi

Published On - 6:56 pm, Sun, 25 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ