AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಸ್ಟೇಶನ್​ ಗೋಡೆ ಹತ್ತಿದ ಯುವತಿಯನ್ನು ಆಕೆಗೆ ಗೊತ್ತಾಗದಂತೆ ಕಾಪಾಡಿದ ಪೊಲೀಸ್​; ವಿಡಿಯೋ ವೈರಲ್

ಯುವತಿ ಮೆಟ್ರೋಸ್ಟೇಶನ್​ನ ಸೆಕ್ಟರ್​ 28ರ ಗೋಡೆಯ ಮೇಲೆ ಕುಳಿತಿದ್ದಳು. ಆಕೆಯ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದರು. ಮೆಟ್ರೋ ಸ್ಟೇಶನ್​ನ ಸೆಕ್ಯೂರಿಟಿ ಸಿಬ್ಬಂದಿಯೂ ಆಕೆಯ ಬಳಿ ಸುರಕ್ಷಿತವಾಗಿ ಕೆಳಗೆ ಬರುವಂತೆ ಕೇಳಿಕೊಳ್ಳುತ್ತಿದ್ದರು.

ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಸ್ಟೇಶನ್​ ಗೋಡೆ ಹತ್ತಿದ ಯುವತಿಯನ್ನು ಆಕೆಗೆ ಗೊತ್ತಾಗದಂತೆ ಕಾಪಾಡಿದ ಪೊಲೀಸ್​; ವಿಡಿಯೋ ವೈರಲ್
ದೆಹಲಿ ಮೆಟ್ರೋ ಸ್ಟೇಶನ್​​ನಲ್ಲಿ ಯುವತಿಯನ್ನು ರಕ್ಷಿಸಿದ ಪೊಲೀಸ್​
TV9 Web
| Edited By: |

Updated on:Jul 25, 2021 | 6:57 PM

Share

ಮೆಟ್ರೋ ಸ್ಟೇಶನ್​​ನ ಎತ್ತರದ ಗೋಡೆಯೊಂದನ್ನು ಹತ್ತಿ, ಅಲ್ಲಿಂದ ಹಾರಲು ಯತ್ನಿಸುತ್ತಿದ್ದ ಯುವತಿಯನ್ನು ಅದೇ ಸ್ಟೇಶನ್​​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲವು ಪೊಲೀಸ್​ ಸಿಬ್ಬಂದಿ ಸರಿಯಾದ ಸಮಯದಲ್ಲಿ ರಕ್ಷಿಸಿದ್ದಾರೆ. ದೆಹಲಿ ಸಮೀಪದ ಫರಿದಾಬಾದ್​ನಲ್ಲಿರುವ ಮೆಟ್ರೋಸ್ಟೇಶನ್​ನಲ್ಲಿ ಘಟನೆ ನಡೆದಿದ್ದು, 45 ಸೆಕೆಂಡ್​​ಗಳ ವಿಡಿಯೋ ಇದೀಗ ಸಿಕ್ಕಾಪಟೆ ವೈರಲ್ ಆಗಿದೆ.

ಆ ಯುವತಿ ಮೆಟ್ರೋಸ್ಟೇಶನ್​ನ ಸೆಕ್ಟರ್​ 28ರ ಗೋಡೆಯ ಮೇಲೆ ಕುಳಿತಿದ್ದಳು. ಆಕೆಯ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದರು. ಮೆಟ್ರೋ ಸ್ಟೇಶನ್​ನ ಸೆಕ್ಯೂರಿಟಿ ಸಿಬ್ಬಂದಿಯೂ ಆಕೆಯ ಬಳಿ ಸುರಕ್ಷಿತವಾಗಿ ಕೆಳಗೆ ಬರುವಂತೆ ಕೇಳಿಕೊಳ್ಳುತ್ತಿದ್ದರು. ಆದರೆ ಆಕೆ ಅಲ್ಲೇ ಮೌನವಾಗಿ ಕುಳಿತಿದ್ದಳು. ಕೆಳಗೆ ಹಾರಲೂ ಇಲ್ಲ..ಮೇಲೆ ಬರಲೂ ಇಲ್ಲ. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸ್ ಸಿಬ್ಬಂದಿಯೂ ಅಲ್ಲಿ ಬಂದಿದ್ದಾರೆ. ಅದರಲ್ಲಿ ಕಾನ್​ಸ್ಟೆಬಲ್​ ಒಬ್ಬರು, ಆಕೆಗೆ ಗೊತ್ತಾಗದಂತೆ ಸುಮ್ಮನೆ ಆಕೆ ಇದ್ದ ಸ್ಥಳಕ್ಕೆ ಹೋಗಿ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಪೊಲೀಸ್​ ಕಾನ್​ಸ್ಟೆಬಲ್​ ಬಂದಿದ್ದು ಹುಡುಗಿಗೆ ಗೊತ್ತಾಗಲೇ ಇಲ್ಲ. ಅವರು ಹಿಡಿದುಕೊಂಡ ಬಳಿಕ, ಇನ್ನೊಬ್ಬರೂ ಮೇಲಿನಿಂದಲೇ ಹಾಕಿ ಬಂದು ಆಕೆಯನ್ನು ಹಿಡಿದುಕೊಂಡಿದ್ದಾರೆ. ನಂತರ ಅವರಿಬ್ಬರೂ ಸೇರಿ ಆಕೆಯನ್ನು ಕಾಪಾಡಿದ್ದಾರೆ.

ಹುಡುಗಿಯನ್ನು ಯಶಸ್ವಿಯಾಗಿ ರಕ್ಷಿಸಿದ ಕಾನ್​ಸ್ಟೆಬಲ್​ ಸರ್ಫ್​ರಾಜ್​ ಅವರನ್ನು ಪೊಲೀಸ್ ಕಮಿಷನರ್​ ಒಪಿ ಸಿಂಗ್ ಶ್ಲಾಘಿಸಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರೂ ಫುಲ್ ಖುಷಿ ವ್ಯಕ್ತಪಡಿಸಿದ್ದಾರೆ. ಅವರ ಸಮಯಪ್ರಜ್ಞೆಗೆ ದೊಡ್ಡ ಸಲಾಂ ಎಂದಿದ್ದಾರೆ. ಈ ವಿಡಿಯೋ ನೋಡಿ..

ಇದನ್ನೂ ಓದಿ: Uttara Kannada Flood: ಉತ್ತರ ಕನ್ನಡ ಪ್ರವಾಹ; ಭೂಕುಸಿತಕ್ಕೆ ತತ್ತರಿಸಿದ ಯಲ್ಲಾಪುರದ ಗ್ರಾಮಗಳು

Girl Who Attempting Suicide is saved by Police In Delhi

Published On - 6:56 pm, Sun, 25 July 21

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು