AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಸ್ಟೇಶನ್​ ಗೋಡೆ ಹತ್ತಿದ ಯುವತಿಯನ್ನು ಆಕೆಗೆ ಗೊತ್ತಾಗದಂತೆ ಕಾಪಾಡಿದ ಪೊಲೀಸ್​; ವಿಡಿಯೋ ವೈರಲ್

ಯುವತಿ ಮೆಟ್ರೋಸ್ಟೇಶನ್​ನ ಸೆಕ್ಟರ್​ 28ರ ಗೋಡೆಯ ಮೇಲೆ ಕುಳಿತಿದ್ದಳು. ಆಕೆಯ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದರು. ಮೆಟ್ರೋ ಸ್ಟೇಶನ್​ನ ಸೆಕ್ಯೂರಿಟಿ ಸಿಬ್ಬಂದಿಯೂ ಆಕೆಯ ಬಳಿ ಸುರಕ್ಷಿತವಾಗಿ ಕೆಳಗೆ ಬರುವಂತೆ ಕೇಳಿಕೊಳ್ಳುತ್ತಿದ್ದರು.

ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಸ್ಟೇಶನ್​ ಗೋಡೆ ಹತ್ತಿದ ಯುವತಿಯನ್ನು ಆಕೆಗೆ ಗೊತ್ತಾಗದಂತೆ ಕಾಪಾಡಿದ ಪೊಲೀಸ್​; ವಿಡಿಯೋ ವೈರಲ್
ದೆಹಲಿ ಮೆಟ್ರೋ ಸ್ಟೇಶನ್​​ನಲ್ಲಿ ಯುವತಿಯನ್ನು ರಕ್ಷಿಸಿದ ಪೊಲೀಸ್​
TV9 Web
| Edited By: |

Updated on:Jul 25, 2021 | 6:57 PM

Share

ಮೆಟ್ರೋ ಸ್ಟೇಶನ್​​ನ ಎತ್ತರದ ಗೋಡೆಯೊಂದನ್ನು ಹತ್ತಿ, ಅಲ್ಲಿಂದ ಹಾರಲು ಯತ್ನಿಸುತ್ತಿದ್ದ ಯುವತಿಯನ್ನು ಅದೇ ಸ್ಟೇಶನ್​​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲವು ಪೊಲೀಸ್​ ಸಿಬ್ಬಂದಿ ಸರಿಯಾದ ಸಮಯದಲ್ಲಿ ರಕ್ಷಿಸಿದ್ದಾರೆ. ದೆಹಲಿ ಸಮೀಪದ ಫರಿದಾಬಾದ್​ನಲ್ಲಿರುವ ಮೆಟ್ರೋಸ್ಟೇಶನ್​ನಲ್ಲಿ ಘಟನೆ ನಡೆದಿದ್ದು, 45 ಸೆಕೆಂಡ್​​ಗಳ ವಿಡಿಯೋ ಇದೀಗ ಸಿಕ್ಕಾಪಟೆ ವೈರಲ್ ಆಗಿದೆ.

ಆ ಯುವತಿ ಮೆಟ್ರೋಸ್ಟೇಶನ್​ನ ಸೆಕ್ಟರ್​ 28ರ ಗೋಡೆಯ ಮೇಲೆ ಕುಳಿತಿದ್ದಳು. ಆಕೆಯ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದರು. ಮೆಟ್ರೋ ಸ್ಟೇಶನ್​ನ ಸೆಕ್ಯೂರಿಟಿ ಸಿಬ್ಬಂದಿಯೂ ಆಕೆಯ ಬಳಿ ಸುರಕ್ಷಿತವಾಗಿ ಕೆಳಗೆ ಬರುವಂತೆ ಕೇಳಿಕೊಳ್ಳುತ್ತಿದ್ದರು. ಆದರೆ ಆಕೆ ಅಲ್ಲೇ ಮೌನವಾಗಿ ಕುಳಿತಿದ್ದಳು. ಕೆಳಗೆ ಹಾರಲೂ ಇಲ್ಲ..ಮೇಲೆ ಬರಲೂ ಇಲ್ಲ. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸ್ ಸಿಬ್ಬಂದಿಯೂ ಅಲ್ಲಿ ಬಂದಿದ್ದಾರೆ. ಅದರಲ್ಲಿ ಕಾನ್​ಸ್ಟೆಬಲ್​ ಒಬ್ಬರು, ಆಕೆಗೆ ಗೊತ್ತಾಗದಂತೆ ಸುಮ್ಮನೆ ಆಕೆ ಇದ್ದ ಸ್ಥಳಕ್ಕೆ ಹೋಗಿ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಪೊಲೀಸ್​ ಕಾನ್​ಸ್ಟೆಬಲ್​ ಬಂದಿದ್ದು ಹುಡುಗಿಗೆ ಗೊತ್ತಾಗಲೇ ಇಲ್ಲ. ಅವರು ಹಿಡಿದುಕೊಂಡ ಬಳಿಕ, ಇನ್ನೊಬ್ಬರೂ ಮೇಲಿನಿಂದಲೇ ಹಾಕಿ ಬಂದು ಆಕೆಯನ್ನು ಹಿಡಿದುಕೊಂಡಿದ್ದಾರೆ. ನಂತರ ಅವರಿಬ್ಬರೂ ಸೇರಿ ಆಕೆಯನ್ನು ಕಾಪಾಡಿದ್ದಾರೆ.

ಹುಡುಗಿಯನ್ನು ಯಶಸ್ವಿಯಾಗಿ ರಕ್ಷಿಸಿದ ಕಾನ್​ಸ್ಟೆಬಲ್​ ಸರ್ಫ್​ರಾಜ್​ ಅವರನ್ನು ಪೊಲೀಸ್ ಕಮಿಷನರ್​ ಒಪಿ ಸಿಂಗ್ ಶ್ಲಾಘಿಸಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರೂ ಫುಲ್ ಖುಷಿ ವ್ಯಕ್ತಪಡಿಸಿದ್ದಾರೆ. ಅವರ ಸಮಯಪ್ರಜ್ಞೆಗೆ ದೊಡ್ಡ ಸಲಾಂ ಎಂದಿದ್ದಾರೆ. ಈ ವಿಡಿಯೋ ನೋಡಿ..

ಇದನ್ನೂ ಓದಿ: Uttara Kannada Flood: ಉತ್ತರ ಕನ್ನಡ ಪ್ರವಾಹ; ಭೂಕುಸಿತಕ್ಕೆ ತತ್ತರಿಸಿದ ಯಲ್ಲಾಪುರದ ಗ್ರಾಮಗಳು

Girl Who Attempting Suicide is saved by Police In Delhi

Published On - 6:56 pm, Sun, 25 July 21

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ