AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಡೆ ಜಡೆ ಜಗಳ: ನಡು ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿನಿಯರ ಬಡೆದಾಟ; ವಿಡಿಯೋ ವೈರಲ್​

ಉತ್ತರಾಖಂಡ್‌ನ ರೂರ್ಕಿಯ ಹೋಟೆಲ್​ನ ಪಾರ್ಕಿಂಗ್​ನಲ್ಲಿ ಹುಡಗಿಯರು ಒಬ್ಬರಿಗೊಬ್ಬರು ಬಡಿದಾಡಿಕೊಂಡಿರುವ ವಿಡಿಯೋ ವೈರಲ್​ ಆಗಿದೆ.

ಜಡೆ ಜಡೆ ಜಗಳ: ನಡು ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿನಿಯರ ಬಡೆದಾಟ; ವಿಡಿಯೋ ವೈರಲ್​
ಬಡಿದಾಡಿಕೊಂಡ ವಿದ್ಯಾರ್ಥಿನಿಯರು
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 26, 2022 | 10:36 PM

ಉತ್ತಾರಾಖಂಡ: ಉತ್ತರಾಖಂಡ್‌ನ (Uttarakhand) ರೂರ್ಕಿಯ ಹೋಟೆಲ್​ನ ಪಾರ್ಕಿಂಗ್​ನಲ್ಲಿ ಹುಡಗಿಯರು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ (Video Viral) ​ ಆಗಿದೆ. ಯಾವ ವಿಚಾರಕ್ಕೆ ಬಡಿದಾಡಿಕೊಂಡಿದ್ದಾರೆ ಎಂಬುವುದು ತಿಳಿದು ಬಂದಿಲ್ಲ. ಆದರೆ ಹುಡಗಿಯರ ಮಧ್ಯೆ ಮೊದಲು ವಾಗ್ವಾದ ಶುರುವಾಗಿದೆ. ಇದು ತಾರಕಕ್ಕೆ ಏರಿ ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಹುಡಗೀರು ಶಾಲಾ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ. ಸದ್ಯ ಹುಡುಗಿಯರ ಕಾಳಗದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ಘಟನೆ ಯಾವಗ ನಡೆದಿದೆ ಎಂದು ನಿಖರವಾದ ದಿನಾಂಕ ತಿಳಿದಿಲ್ಲ.

ಇನ್ನೂ ವಿಡಿಯೋದಲ್ಲಿ ನಲ್ವಾರಿಂದ ಐದು ಹುಡುಗಿಯರು ಬಡಿದಾಡಿಕೊಳ್ಳುತ್ತಿರುವುದನ್ನು ಕಾಣಬಹುದಾಗಿದೆ. ವಿಡಿಯೋದಲ್ಲಿ ಓರ್ವಳನ್ನು ನೆಲಕ್ಕೆ ಕೆಡವಿದ್ದಾರೆ. ನಂತರ ಆಕೆಯ ಕೂದಲನ್ನು ಹಿಡಿದು ಎಳೆದಾಡಿದ್ದಾರೆ. ಈ ವೇಳೆ ಓರ್ವ ಹುಡಿಗಿ ಅಲ್ಲೆ ಇದ್ದ ಬಡಿಗೆಯನ್ನು ತಂದು ಕೆಳೆಗೆ ಬಿದ್ದ ಹುಡುಗಿಗೆ ಥಳಿಸಿದ್ದಾಳೆ. ಬಳಿಕ ಮತ್ತೋರ್ವಳು ಕೆಳಗೆ ಬಿದ್ದ ಹುಡುಗಿಯ ಕೂದಲು, ಅಂಗಿ ಹಿಡಿದು ಎಳೆದಾಡಿದ್ದಾಳೆ. ನಂತರ ಇಬ್ಬರು ಕಳೆಗೆ ಬಿದ್ದು ಗುದ್ದಾಡಿದ್ದಾರೆ.

ಕೆಲವು ಸೆಕೆಂಡುಗಳ ನಂತರ, ಜಗಳವನ್ನು ನಿಲ್ಲಿಸಲು ಹಲವಾರು ಜನರು ಹುಡುಗಿಯರ ಗುಂಪಿನ ಕಡೆಗೆ ಹೋಗುವುದನ್ನು ಕಾಣಬಹುದು. ಈ ಬಗ್ಗೆ ಇದುವರೆಗೆ ಯಾವುದೇ ದೂರು ಬಂದಿಲ್ಲ ಎಂದು ಸಿವಿಲ್ ಲೈನ್ ಕೊತ್ವಾಲಿ ಉಸ್ತುವಾರಿ ದೇವೇಂದ್ರ ಚೌಹಾಣ್ ಹೇಳಿದ್ದಾರೆ ಎಂದು ಡಿಎನ್​ಎ ವರದಿ ಮಾಡಿದೆ. ಯಾರಾದರು ದೂರು ದಾಖಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ