AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಡೆ ಜಡೆ ಜಗಳ: ನಡು ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿನಿಯರ ಬಡೆದಾಟ; ವಿಡಿಯೋ ವೈರಲ್​

ಉತ್ತರಾಖಂಡ್‌ನ ರೂರ್ಕಿಯ ಹೋಟೆಲ್​ನ ಪಾರ್ಕಿಂಗ್​ನಲ್ಲಿ ಹುಡಗಿಯರು ಒಬ್ಬರಿಗೊಬ್ಬರು ಬಡಿದಾಡಿಕೊಂಡಿರುವ ವಿಡಿಯೋ ವೈರಲ್​ ಆಗಿದೆ.

ಜಡೆ ಜಡೆ ಜಗಳ: ನಡು ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿನಿಯರ ಬಡೆದಾಟ; ವಿಡಿಯೋ ವೈರಲ್​
ಬಡಿದಾಡಿಕೊಂಡ ವಿದ್ಯಾರ್ಥಿನಿಯರು
TV9 Web
| Edited By: ವಿವೇಕ ಬಿರಾದಾರ|

Updated on: Dec 26, 2022 | 10:36 PM

Share

ಉತ್ತಾರಾಖಂಡ: ಉತ್ತರಾಖಂಡ್‌ನ (Uttarakhand) ರೂರ್ಕಿಯ ಹೋಟೆಲ್​ನ ಪಾರ್ಕಿಂಗ್​ನಲ್ಲಿ ಹುಡಗಿಯರು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ (Video Viral) ​ ಆಗಿದೆ. ಯಾವ ವಿಚಾರಕ್ಕೆ ಬಡಿದಾಡಿಕೊಂಡಿದ್ದಾರೆ ಎಂಬುವುದು ತಿಳಿದು ಬಂದಿಲ್ಲ. ಆದರೆ ಹುಡಗಿಯರ ಮಧ್ಯೆ ಮೊದಲು ವಾಗ್ವಾದ ಶುರುವಾಗಿದೆ. ಇದು ತಾರಕಕ್ಕೆ ಏರಿ ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಹುಡಗೀರು ಶಾಲಾ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ. ಸದ್ಯ ಹುಡುಗಿಯರ ಕಾಳಗದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ಘಟನೆ ಯಾವಗ ನಡೆದಿದೆ ಎಂದು ನಿಖರವಾದ ದಿನಾಂಕ ತಿಳಿದಿಲ್ಲ.

ಇನ್ನೂ ವಿಡಿಯೋದಲ್ಲಿ ನಲ್ವಾರಿಂದ ಐದು ಹುಡುಗಿಯರು ಬಡಿದಾಡಿಕೊಳ್ಳುತ್ತಿರುವುದನ್ನು ಕಾಣಬಹುದಾಗಿದೆ. ವಿಡಿಯೋದಲ್ಲಿ ಓರ್ವಳನ್ನು ನೆಲಕ್ಕೆ ಕೆಡವಿದ್ದಾರೆ. ನಂತರ ಆಕೆಯ ಕೂದಲನ್ನು ಹಿಡಿದು ಎಳೆದಾಡಿದ್ದಾರೆ. ಈ ವೇಳೆ ಓರ್ವ ಹುಡಿಗಿ ಅಲ್ಲೆ ಇದ್ದ ಬಡಿಗೆಯನ್ನು ತಂದು ಕೆಳೆಗೆ ಬಿದ್ದ ಹುಡುಗಿಗೆ ಥಳಿಸಿದ್ದಾಳೆ. ಬಳಿಕ ಮತ್ತೋರ್ವಳು ಕೆಳಗೆ ಬಿದ್ದ ಹುಡುಗಿಯ ಕೂದಲು, ಅಂಗಿ ಹಿಡಿದು ಎಳೆದಾಡಿದ್ದಾಳೆ. ನಂತರ ಇಬ್ಬರು ಕಳೆಗೆ ಬಿದ್ದು ಗುದ್ದಾಡಿದ್ದಾರೆ.

ಕೆಲವು ಸೆಕೆಂಡುಗಳ ನಂತರ, ಜಗಳವನ್ನು ನಿಲ್ಲಿಸಲು ಹಲವಾರು ಜನರು ಹುಡುಗಿಯರ ಗುಂಪಿನ ಕಡೆಗೆ ಹೋಗುವುದನ್ನು ಕಾಣಬಹುದು. ಈ ಬಗ್ಗೆ ಇದುವರೆಗೆ ಯಾವುದೇ ದೂರು ಬಂದಿಲ್ಲ ಎಂದು ಸಿವಿಲ್ ಲೈನ್ ಕೊತ್ವಾಲಿ ಉಸ್ತುವಾರಿ ದೇವೇಂದ್ರ ಚೌಹಾಣ್ ಹೇಳಿದ್ದಾರೆ ಎಂದು ಡಿಎನ್​ಎ ವರದಿ ಮಾಡಿದೆ. ಯಾರಾದರು ದೂರು ದಾಖಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು