Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಓಂಕಾರದ ಮಹಿಮೆ; ತಾಯಿ ಓಂಕಾರವನ್ನು ಪಠಿಸುತ್ತಿದ್ದಂತೆ ಅಳುವುದನ್ನು ನಿಲ್ಲಿಸಿದ ಮಗು

ಇಲ್ಲೊಬ್ಬರು ತಾಯಿ ಮಗುನಿನ ಅಳು ನಿಲ್ಲಿಸಲು ಓಂಕಾರ ಮಂತ್ರವನ್ನು ಪಠಿಸಿದ್ದು, ಓಂಕಾರ ನಾದವನ್ನು  ಕೇಳುತ್ತಿದ್ದಂತೆ ಜೋರಾಗಿ ಅಳುತ್ತಿದ್ದ ಕಂದಮ್ಮ ಅಳು ನಿಲ್ಲಿಸಿ ಶಾಂತ ರೂಪಕ್ಕೆ ತಿರುಗಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಲ್ಲಿ  ವೈರಲ್ ಆಗಿದ್ದು, ಓಂಕಾರದ ಶಕ್ತಿಯನ್ನು ಕಂಡು ನೆಟ್ಟಿಗರು ಪುಳಕಿತರಾಗಿದ್ದಾರೆ.

Viral Video: ಓಂಕಾರದ ಮಹಿಮೆ; ತಾಯಿ ಓಂಕಾರವನ್ನು ಪಠಿಸುತ್ತಿದ್ದಂತೆ ಅಳುವುದನ್ನು ನಿಲ್ಲಿಸಿದ ಮಗು
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: May 22, 2024 | 3:00 PM

ಭಾರತೀಯ ಸಂಸ್ಕೃತಿಯಲ್ಲಿ ಓಂಕಾರಕ್ಕೆ ಹೆಚ್ಚಿನ ಮಹತ್ವವಿದೆ. ಪ್ರತಿಯೊಂದು ವೇದ ಮಂತ್ರವೂ ಓಂಕಾರದಿಂದಲೇ ಆರಂಭವಾಗುತ್ತದೆ. ಓಂಕಾರವನ್ನು ಪಠಿಸುವುದರಿಂದ ಮನಸ್ಸಿನ ಒತ್ತಡ ಕಡಿಮೆ ಮಾಡುವುದರ ಜೊತೆಗೆ ಇದು ಮನಸ್ಸಿನ ಏಕಾಗ್ರತೆಯನ್ನು  ಹೆಚ್ಚಿಸುತ್ತದೆ ಹಾಗೂ ಮನಸ್ಸಿಗೆ ಹಿತ ಅನುಭವವನ್ನು ಉಂಟು ಮಾಡುತ್ತದೆ. ಹೀಗೆ ಓಂಕಾರದ ಅತ್ಯದ್ಭುತ ಪ್ರಯೋಜನಗಳ ಬಗ್ಗೆ ವೈಜ್ಞಾನಿಕವಾಗಿಯೂ ಸಾಬಿತಾಗಿದ್ದು, ವಿದೇಶಿಗರು ಮಕ್ಕಳ ಅಳುವನ್ನು ನಿಲ್ಲಿಸಲು ಕೂಡಾ  ಓಂಕಾರವನ್ನು ಪಠಿಸುತ್ತಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ತಾಯಿಯೊಬ್ಬರು ಎಷ್ಟೇ ಪ್ರಯತ್ನ ಪಟ್ಟರೂ ಮಗು ಅಳು ನಿಲ್ಲಿಸದಿದ್ದಾಗ, ಕೊನೆಗೆ  ಓಂಕಾರವನ್ನು ಪಠಿಸಿದ್ದಾರೆ. ಓಂಕಾರ ನಾದ ಕೇಳುತ್ತಿದ್ದಂತೆ ಮಗು ತಕ್ಷಣ ಅಳುವನ್ನು ನಿಲ್ಲಿಸಿ, ಶಾಂತವಾಗಿದೆ. ಈ ಅಮೋಘ ದೃಶ್ಯವನ್ನು ಕಂಡು ನೆಟ್ಟಿಗರು ಪುಳಕಿತರಾಗಿದ್ದಾರೆ.

ಈ ಕುರಿತ ವಿಡಿಯೋವನ್ನು @hushaar_giraki  ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, “ಓಂಕಾರದ ಮಹಿಮೆ ನೋಡಿ, ನಮ್ಮ ಭಾರತ ನಮ್ಮ ಹೆಮ್ಮೆ” ಎಂಬ ಶಿರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್ ವಿಡಿಯೋದಲ್ಲಿ ಪುಟಾಣಿ ಮಗುವೊಂದು ಜೋರಾಗಿ ಅಳುತ್ತಿರುವ ದೃಶ್ಯವನ್ನು ಕಾಣಬಹುದು. ತಾಯಿ ಏನೇ ಮಾಡಿದರೂ ಕೂಡಾ  ಮಗು ಅಳುವುದನ್ನು ನಿಲ್ಲಿಸುವುದಿಲ್ಲ, ಆಗ ಆಕೆ ಓಂಕಾರವನ್ನು ಪಠಿಸಲು ಆರಂಭಿಸುತ್ತಾಳೆ. ಓಂಕಾರ ನಾದವನ್ನು ಕೇಳುತ್ತಿದ್ದಂತೆ ತಕ್ಷಣ ಅಳು ನಿಲ್ಲಿಸಿ ಮಗು ಶಾಂತ ರೂಪಕ್ಕೆ ತಿರುಗಿದೆ.

ಇದನ್ನೂ ಓದಿ: ಹೆದ್ದಾರಿ ದಾಟುತ್ತಿದ್ದಾಗ ಹುಲಿಗೆ ಡಿಕ್ಕಿ ಹೊಡೆದ ಟ್ರಕ್, ರಸ್ತೆಯಲ್ಲಿ ನರಳಿ ಹುಲಿ ಸಾವು 

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಒಂದುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಅತ್ಯದ್ಭುತ ದೃಶ್ಯ ನೋಡುಗರನ್ನು ರೋಮಾಂಚನಗೊಳಿಸಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ