AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೇವತೆ ಕಣಮ್ಮಾ ನೀನು; ಬಿಸಿಲ ತಾಪಕ್ಕೆ  ದಣಿದ ಜೀವಗಳಿಗೆ  ಮಜ್ಜಿಗೆ ಹಂಚಿದ ಯುವತಿ  

ದೆಹಲಿಯಲ್ಲಿ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಬಿಸಿಲ ಝಳಕ್ಕೆ ಜನರು ಬಸವಳಿಯುತ್ತಿದ್ದಾರೆ. ಅದರಲ್ಲೂ ಬಿಸಿಲಿನಲ್ಲಿ ನಿಂತು ಕೆಲಸ ಮಾಡುವವರ ಪರಿಸ್ಥಿತಿ ಹೇಳತೀರದ್ದಾಗಿದೆ. ಹೀಗೆ ಉರಿ ಬಿಸಿಲನ್ನೂ ಲೆಕ್ಕಿಸದೆ ಹೊಟ್ಟೆಪಾಡಿಗಾಗಿ ಕೆಲಸ ಮಾಡುವಂತಹ ಜೀವಗಳಿಗೆ ಇಲ್ಲೊಂದು ಯುವತಿ ಮಜ್ಜಿಗೆ ಹಂಚುವ ಮೂಲಕ ತನ್ನ ಕೈಲಾದ ಅಳಿಲು ಸೇವೆಯನ್ನು ಮಾಡಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. 

Viral Video: ದೇವತೆ ಕಣಮ್ಮಾ ನೀನು; ಬಿಸಿಲ ತಾಪಕ್ಕೆ  ದಣಿದ ಜೀವಗಳಿಗೆ  ಮಜ್ಜಿಗೆ ಹಂಚಿದ ಯುವತಿ  
ಮಾಲಾಶ್ರೀ ಅಂಚನ್​
| Edited By: |

Updated on: Jun 04, 2024 | 11:00 AM

Share

ಮಾನವೀಯತೆ, ದಯಾ ಗುಣಕ್ಕಿಂತ ಮಿಗಿಲಾದುದು ಯಾವುದು ಇಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಮಾನವೀಯತೆ, ಮನುಷ್ಯತ್ವ ಎನ್ನುವುದು ಮರೆಯಾಗುತ್ತಿದೆ. ಹೀಗೆ ತಮ್ಮವರ ಕಷ್ಟಕ್ಕೆ ಸ್ಪಂದಿಸಲು ಹಿಂದೆ ಮುಂದೆ ನೋಡುವ ಜನರ ಮಧ್ಯೆ ಇಂದಿಗೂ ಕೆಲವರು ಮಾನವೀಯ ಗುಣಗಳನ್ನು ಅಳವಡಿಸಿಕೊಂಡು ಇತರರ ಕಷ್ಟಕ್ಕೆ ಸ್ಪಂದಿಸುವ ಜನರಿದ್ದಾರೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಯುವತಿಯೊಬ್ಬಳು ಬಿಸಿಲ ತಾಪಕ್ಕೆ ಬಸವಳಿದ ಜೀವಗಳಿಗೆ ಮಜ್ಜಿಗೆ ಹಂಚುವ ಮೂಲಕ ತನ್ನ ಕೈಲಾದ ಅಳಿಲು ಸೇವೆಯನ್ನು ಮಾಡಿದ್ದಾಳೆ. ಈ ಯುವತಿಯ ಈ ಮಾನವೀಯ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಸುಚಿ ಶರ್ಮಾ ಎಂಬ ಯುವತಿ ಈ ವಿಡಿಯೋವನ್ನು ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ಇತ್ತೀಚಿಗೆ ದಿನದಿಂದ ದಿನಕ್ಕೆ ದೆಹಲಿಯಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನಲ್ಲಿ ನಿಂತು ಕೆಲಸ ಮಾಡುವವರ ಪರಿಸ್ಥಿತಿ ಹೇಳತೀರದಾಗಿದೆ. ಹೀಗಿರುವಾಗ ಇಂತಹ ದಣಿದ ಜೀವಗಳ ದಾಹ ತೀರಿಸಲು ಸುಚಿ ಶರ್ಮಾ ಮಜ್ಜಿಗೆ ಹಂಚುವ ಮೂಲಕ ತನ್ನ ಕೈಲಾದಷ್ಟು ಅಳಿಲು ಸೇವೆಯನ್ನು ಮಾಡಿದ್ದಾಳೆ.

ವೈರಲ್‌ ವಿಡಿಯೋದಲ್ಲಿ ಸುಚಿ ಶರ್ಮಾ ಉರಿ ಬಿಸಿಲನ್ನೂ ಲೆಕ್ಕಿಸದೆ ಕಷ್ಟಪಟ್ಟು ಕೆಲಸ ಮಾಡುವ ಜೀವಗಳಿಗೆ ಮಜ್ಜಿಗೆ ಹಂಚುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಅಸ್ಸಾಂನಲ್ಲಿ  ಪತ್ತೆಯಾಯಿತು 4 ಕಣ್ಣುಗಳಿರುವ  ಅಪರೂಪದ ಮೀನು; ವೈರಲ್‌ ವಿಡಿಯೋ

ವೈರಲ್​​ ವಿಡಿಯೋ ಇಲ್ಲಿದೆ:

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 8 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ನೆಟ್ಟಿಗರು ಈ ಯುವತಿಯ ಈ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್