AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ., 63 ವರ್ಷಗಳಷ್ಟು ಹಳೆಯದಾದ ಬಿಲ್​​ ವೈರಲ್​​​

ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ ಗ್ರಾಂಗೆ 10,000 ರೂ. ದಾಟಿದೆ. ಏಪ್ರಿಲ್ 1ಕ್ಕೆ 8,510 ರೂ. ಇದ್ದ ಬೆಲೆ ಏಪ್ರಿಲ್ 22ಕ್ಕೆ 9,290ರೂ. ಏರಿಕೆಯಾಗಿದೆ. ಇದೀಗ 1959ರ ಒಂದು ಹಳೆಯ ಬಿಲ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಿಲ್ ಪ್ರಕಾರ 1959ರಲ್ಲಿ 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ.. ಸದ್ಯ ಬಿಲ್​​ ಕಂಡು ನೆಟ್ಟಿಗರು ಶಾಕ್​​ ಆಗಿದ್ದು, ಫೋಟೋ ವ್ಯಾಪಕವಾಗಿ ಹರಿದಾಡುತ್ತಿದೆ.

Viral Post: 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ., 63 ವರ್ಷಗಳಷ್ಟು ಹಳೆಯದಾದ ಬಿಲ್​​ ವೈರಲ್​​​
Viral 1959 Gold Bill
ಅಕ್ಷತಾ ವರ್ಕಾಡಿ
|

Updated on:Apr 23, 2025 | 12:10 PM

Share

ಭಾರತದಲ್ಲಿ ಇದೇ ಮೊದಲ ಬಾರಿಗೆ 1 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ 10,000 ರೂ ಗಡಿ ದಾಟಿದೆ. ಏಪ್ರಿಲ್ 1 ಕ್ಕೆ 8,510 ರೂ ಇದ್ದ ಬೆಲೆ ಏಪ್ರಿಲ್ 22 ವೇಳೆಗೆ 9,290 ಕ್ಕೆ ಹೆಚ್ಚಳ ಆಗಿದೆ. ಒಂದೇ ತಿಂಗಳಲ್ಲಿ ಭರ್ಜರಿ ಏರಿಕೆಯಾಗಿದ್ದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಅಲ್ಲೋಲಕಲ್ಲೋಲ ಆಗಿದೆ. ಇದೀಗ, 1959ರಲ್ಲಿ ಚಿನ್ನ ಖರೀದಿಸಿದ ಹಳೆಯ ಬಿಲ್​​ವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. 63 ವರ್ಷಗಳಷ್ಟು ಹಳೆಯದಾದ ಈ ಬಿಲ್ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ.

ಸದ್ಯ ಸೋಶಿಯಲ್​​ ಮೀಡಿಯಾಗಳಲ್ಲಿ ವೈಲರ್ ಆಗಿರುವ ಬಿಲ್‍ 1959ರದ್ದು. ಈ ಬಿಲ್‍ನಲ್ಲಿ 621 ಮತ್ತು 251 ರೂ.ಗಳ ಚಿನ್ನದ ವಸ್ತುಗಳನ್ನು ಖರೀದಿಸಿರುವುದನ್ನು ಕಾಣಬಹುದು. ಇದರ ಜೊತೆಗೆ ಬೆಳ್ಳಿಯ ವಸ್ತುಗಳ ದರಗಳನ್ನು ನೀಡಲಾಗಿದೆ. ಇವುಗಳ ಒಟ್ಟು ಬಿಲ್ 909 ರೂ. ಆಗಿದೆ. ಈ ಬಿಲ್​​ ಪ್ರಕಾರ 1959ರಲ್ಲಿ 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂಪಾಯಿ ಇತ್ತು. ಇದರ ಪ್ರಕಾರ ಒಂದು ಗ್ರಾಂ ಚಿನ್ನದ ಬೆಲೆ ಕೇವಲ 10 ರೂಪಾಯಿ. ಅಂದರೆ ಒಂದು ಕ್ಷಣ ನಂಬುವುದಕ್ಕೂ ಅಸಾಧ್ಯ.

ಇದನ್ನೂ ಓದಿ: ಚಿನ್ನದ ಬೆಲೆ ಎಷ್ಟು ದಿನ ಹೀಗೆ ಏರುತ್ತೆ? ಬೆಲೆ ಕಡಿಮೆ ಆಗೋ ಸಾಧ್ಯತೆ ಎಷ್ಟು? ಇಲ್ಲಿದೆ ಡೀಟೇಲ್ಸ್

ವೈರಲ್​ ಫೋಟೋ ಇಲ್ಲಿದೆ ನೋಡಿ:

@upscworldofficial ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ಹಳೆಯ ಬಿಲ್​​ನ ಫೋಟೋ ಹಂಚಿಕೊಳ್ಳಲಾಗಿದೆ. ಇದು ಮಹಾರಾಷ್ಟ್ರದ ಜುವೆಲ್ಲರಿ ಶಾಪ್​ ಒಂದರಲ್ಲಿ ಶಿವಲಿಂಗ ಎನ್ನುವ ವ್ಯಕ್ತಿ ಖರೀದಿ ಮಾಡಿದುವುದಾಗಿ ಬಿಲ್​ನಿಂದ ತಿಳಿದುಬಂದಿದೆ. ಸದ್ಯ ಬಿಲ್​​ ಕಂಡು ನೆಟ್ಟಿಗರು ಶಾಕ್​​ ಆಗಿದ್ದು, ಫೋಟೋ ವ್ಯಾಪಕವಾಗಿ ಹರಿದಾಡುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Wed, 23 April 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!