AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Republic Day; ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ರಚಿಸಿ ಶುಭ ಕೋರಿದ ಗೂಗಲ್​

ಗಣರಾಜ್ಯೋತ್ಸವ ಅಂಗವಾಗಿ ಗೂಗಲ್​ ಕೂಡ ವಿಶೇಷ ಡೂಡಲ್​ ಮೂಲಕ ದೇಶದ ಜನತೆಗೆ ಶುಭ ಕೋರಿದೆ.  ಈ ಬಾರಿಯ ಡುಡಲ್​ನಲ್ಲಿ ಆನೆ, ಒಂಟೆ,ಕುದುರೆ, ನಾಯಿ ಪ್ರಾಣಿಗಳನ್ನು ಕಾಣಬಹುದು.

India Republic Day; ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ರಚಿಸಿ ಶುಭ ಕೋರಿದ ಗೂಗಲ್​
ಗೂಗಲ್​ ಡೂಡಲ್​
TV9 Web
| Updated By: Pavitra Bhat Jigalemane|

Updated on:Jan 26, 2022 | 9:53 AM

Share

ದೇಶದೆಲ್ಲೆಡೆ 73ನೇ ಗಣರಾಜ್ಯೋತ್ಸವ (Republic Day) ಆಚರಿಸಲಾಗುತ್ತಿದೆ. ಬ್ರಿಟಿಷರ ದಾಸ್ಯದಿಂದ ಮುಕ್ತಿ ಪಡೆದ ಮೇಲೆ ಸ್ವತಂತ್ರ ಸಂವಿಧಾನವನ್ನು ರಚಿಸಿ, ಪ್ರಜಾಪ್ರಭುತ್ವ ದೇಶವಾಗಿ ಮಾಡಿದ ದಿನ ಇಂದು.  ಜನವರಿ 26, 1950ರಲ್ಲಿ ಭಾರತೀಯ ಸಂವಿಧಾನ(Indian Constitution) ಅಧಿಕೃತವಾಗಿ ಜಾರಿಗೆ ಬಂದಿತು.  ಹೀಗಾಗಿ ಈ ದಿನವನ್ನು ಗಣತಂತ್ರ ದಿನ ಎಂದು ಆಚರಿಸಲಾಗುತ್ತದೆ.  ಗಣರಾಜ್ಯೋತ್ಸವ ಅಂಗವಾಗಿ ಗೂಗಲ್​ ಕೂಡ ವಿಶೇಷ ಡೂಡಲ್​ (Google Doodle) ಮೂಲಕ ದೇಶದ ಜನತೆಗೆ ಶುಭ ಕೋರಿದೆ. ಈ ಬಾರಿಯ ಡೂಡಲ್​ನಲ್ಲಿ ಆನೆ, ಒಂಟೆ,ಕುದುರೆ, ನಾಯಿ ಪ್ರಾಣಿಗಳನ್ನು ಕಾಣಬಹುದು. ಜತೆಗೆ ಎರಡು ಪಾರಿವಾಳಗಳು ಹಾರುತ್ತಿವೆ.  ಸಾಕ್ಸೋಫೋನ್​, ತಬಲಾ ಸೇರಿದಂತೆ ಕೇಸರಿ, ಬಿಳಿ, ಹಸಿರಿನಲ್ಲಿ ಗೂಗಲ್​​ ಅಕ್ಷರಗಳನ್ನು ಬರೆಯಲಾಗಿದೆ. ಈ ಮೂಲಕ ವಿಶೇಷವಾಗಿ ಗೂಗಲ್​ ಡೂಡಲ್​ ಅನ್ನು ತಯಾರಿಸಿದೆ.

ಈ ಬಾರಿ ಗಣರಾಜ್ಯೋತ್ಸವಕ್ಕೂ ಕೊರೋನಾ ಕರಿನೆರಳು ಆವರಿಸಿದೆ. ಹೆಚ್ಚು ಜನರು ಸೇರುವಂತಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆಗೂ ಬ್ರೇಕ್​ ಬಿದ್ದಿದೆ. ಈ ನಡುವೆ ದೆಹಲಿ ರಾಜಪಥನ್​ನಿಂದ ನ್ಯಾಷನಲ್​ ಸ್ಟೇಡಿಯಂವರೆಗೆ ಮೆರವಣಿಗೆ ನಡೆಯಲಿದೆ. ವಿವಿಧ ರಾಜ್ಯಗಳ ಜಾನಪದ ಕಲಾ ಪ್ರದರ್ಶನ ಜತೆಗೆ ಬಾನಂಗಳದಲ್ಲಿ ವಿಮಾನಗಳ ಹಾರಾಟ ನಡೆಯಲಿದೆ.

ಇನ್ನು ಕೊರೋನಾ ಕಾರಣದಿಂದ ದೆಹಲಿಯಲ್ಲೂ ಕಟ್ಟೆಚ್ಚರವಹಿಸಲಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಎರಡೂ ಡೋಸ್​ ವ್ಯಾಕ್ಸಿನೇಷನ್​ ಕಡ್ಡಾಯಗೊಳಿಸಲಾಗಿದ್ದು, 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಷವನ್ನು ನಿಷೇಧಿಸಲಾಗಿದೆ. ಹೀಗಾಗಿ ಕಳೆದ ವರ್ಷದಂತೆ  ಈ ವರ್ಷವೂ ಬಿಗಿ ನಿಯಮಗಳ ಮಧ್ಯೆ ಗಣರಾಜ್ಯೋತ್ಸವ ಆಚರಣೆಯಾಗುತ್ತಿದೆ.

ಡಾ.ಬಿ ಆರ್​ ಅಂಬೇಡ್ಕರ್​ ಅವರ ನೇತೃತ್ವದಲ್ಲಿ ಕರಡು ಸಮಿತಿ ರಚಿಸಿ ಭಾರತದ ಸಂವಿಧಾನ ರಚಿಸಲಾಗಿದೆ. ಭಾರತದ ಸಂವಿಧಾನ ಜಗತ್ತಿನ ಅತಿ ದೊಡ್ಡ ಸಂವಿಧಾನವಾಗಿದೆ. ಈವರೆಗೆ 94 ತಿದ್ದುಪಡಿಗಳನ್ನು  ಭಾರತೀಯ ಸಂವಿಧಾನದಲ್ಲಿ ಮಾಡಲಾಗಿದೆ. ಈ ದಿನ ರಾಷ್ಟ್ರಪತಿಗಳು ದೆಹಲಿಯಲ್ಲಿ ಭಾರತದ ಧ್ವಜವನ್ನು ಹಾರಿಸಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಸೇರಿದಂತೆ ಭಾರತಕ್ಕಾಗಿ ಪ್ರಾಣತೆತ್ತ ಸೈನಿಕರಿಗೂ ನಮನ ಸಲ್ಲಿಸುತ್ತಾರೆ. ಗಣರಾಜ್ಯೋತ್ಸವದ ಅಂಗವಾಗಿ ದೇಶದ ಸಾಧಕರಿಗೆ ದೇಶದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ:

Republic Day 2022: ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್​ ಶಾ

Published On - 9:43 am, Wed, 26 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ