AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Republic Day; ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ರಚಿಸಿ ಶುಭ ಕೋರಿದ ಗೂಗಲ್​

ಗಣರಾಜ್ಯೋತ್ಸವ ಅಂಗವಾಗಿ ಗೂಗಲ್​ ಕೂಡ ವಿಶೇಷ ಡೂಡಲ್​ ಮೂಲಕ ದೇಶದ ಜನತೆಗೆ ಶುಭ ಕೋರಿದೆ.  ಈ ಬಾರಿಯ ಡುಡಲ್​ನಲ್ಲಿ ಆನೆ, ಒಂಟೆ,ಕುದುರೆ, ನಾಯಿ ಪ್ರಾಣಿಗಳನ್ನು ಕಾಣಬಹುದು.

India Republic Day; ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ರಚಿಸಿ ಶುಭ ಕೋರಿದ ಗೂಗಲ್​
ಗೂಗಲ್​ ಡೂಡಲ್​
Follow us
TV9 Web
| Updated By: Pavitra Bhat Jigalemane

Updated on:Jan 26, 2022 | 9:53 AM

ದೇಶದೆಲ್ಲೆಡೆ 73ನೇ ಗಣರಾಜ್ಯೋತ್ಸವ (Republic Day) ಆಚರಿಸಲಾಗುತ್ತಿದೆ. ಬ್ರಿಟಿಷರ ದಾಸ್ಯದಿಂದ ಮುಕ್ತಿ ಪಡೆದ ಮೇಲೆ ಸ್ವತಂತ್ರ ಸಂವಿಧಾನವನ್ನು ರಚಿಸಿ, ಪ್ರಜಾಪ್ರಭುತ್ವ ದೇಶವಾಗಿ ಮಾಡಿದ ದಿನ ಇಂದು.  ಜನವರಿ 26, 1950ರಲ್ಲಿ ಭಾರತೀಯ ಸಂವಿಧಾನ(Indian Constitution) ಅಧಿಕೃತವಾಗಿ ಜಾರಿಗೆ ಬಂದಿತು.  ಹೀಗಾಗಿ ಈ ದಿನವನ್ನು ಗಣತಂತ್ರ ದಿನ ಎಂದು ಆಚರಿಸಲಾಗುತ್ತದೆ.  ಗಣರಾಜ್ಯೋತ್ಸವ ಅಂಗವಾಗಿ ಗೂಗಲ್​ ಕೂಡ ವಿಶೇಷ ಡೂಡಲ್​ (Google Doodle) ಮೂಲಕ ದೇಶದ ಜನತೆಗೆ ಶುಭ ಕೋರಿದೆ. ಈ ಬಾರಿಯ ಡೂಡಲ್​ನಲ್ಲಿ ಆನೆ, ಒಂಟೆ,ಕುದುರೆ, ನಾಯಿ ಪ್ರಾಣಿಗಳನ್ನು ಕಾಣಬಹುದು. ಜತೆಗೆ ಎರಡು ಪಾರಿವಾಳಗಳು ಹಾರುತ್ತಿವೆ.  ಸಾಕ್ಸೋಫೋನ್​, ತಬಲಾ ಸೇರಿದಂತೆ ಕೇಸರಿ, ಬಿಳಿ, ಹಸಿರಿನಲ್ಲಿ ಗೂಗಲ್​​ ಅಕ್ಷರಗಳನ್ನು ಬರೆಯಲಾಗಿದೆ. ಈ ಮೂಲಕ ವಿಶೇಷವಾಗಿ ಗೂಗಲ್​ ಡೂಡಲ್​ ಅನ್ನು ತಯಾರಿಸಿದೆ.

ಈ ಬಾರಿ ಗಣರಾಜ್ಯೋತ್ಸವಕ್ಕೂ ಕೊರೋನಾ ಕರಿನೆರಳು ಆವರಿಸಿದೆ. ಹೆಚ್ಚು ಜನರು ಸೇರುವಂತಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆಗೂ ಬ್ರೇಕ್​ ಬಿದ್ದಿದೆ. ಈ ನಡುವೆ ದೆಹಲಿ ರಾಜಪಥನ್​ನಿಂದ ನ್ಯಾಷನಲ್​ ಸ್ಟೇಡಿಯಂವರೆಗೆ ಮೆರವಣಿಗೆ ನಡೆಯಲಿದೆ. ವಿವಿಧ ರಾಜ್ಯಗಳ ಜಾನಪದ ಕಲಾ ಪ್ರದರ್ಶನ ಜತೆಗೆ ಬಾನಂಗಳದಲ್ಲಿ ವಿಮಾನಗಳ ಹಾರಾಟ ನಡೆಯಲಿದೆ.

ಇನ್ನು ಕೊರೋನಾ ಕಾರಣದಿಂದ ದೆಹಲಿಯಲ್ಲೂ ಕಟ್ಟೆಚ್ಚರವಹಿಸಲಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಎರಡೂ ಡೋಸ್​ ವ್ಯಾಕ್ಸಿನೇಷನ್​ ಕಡ್ಡಾಯಗೊಳಿಸಲಾಗಿದ್ದು, 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಷವನ್ನು ನಿಷೇಧಿಸಲಾಗಿದೆ. ಹೀಗಾಗಿ ಕಳೆದ ವರ್ಷದಂತೆ  ಈ ವರ್ಷವೂ ಬಿಗಿ ನಿಯಮಗಳ ಮಧ್ಯೆ ಗಣರಾಜ್ಯೋತ್ಸವ ಆಚರಣೆಯಾಗುತ್ತಿದೆ.

ಡಾ.ಬಿ ಆರ್​ ಅಂಬೇಡ್ಕರ್​ ಅವರ ನೇತೃತ್ವದಲ್ಲಿ ಕರಡು ಸಮಿತಿ ರಚಿಸಿ ಭಾರತದ ಸಂವಿಧಾನ ರಚಿಸಲಾಗಿದೆ. ಭಾರತದ ಸಂವಿಧಾನ ಜಗತ್ತಿನ ಅತಿ ದೊಡ್ಡ ಸಂವಿಧಾನವಾಗಿದೆ. ಈವರೆಗೆ 94 ತಿದ್ದುಪಡಿಗಳನ್ನು  ಭಾರತೀಯ ಸಂವಿಧಾನದಲ್ಲಿ ಮಾಡಲಾಗಿದೆ. ಈ ದಿನ ರಾಷ್ಟ್ರಪತಿಗಳು ದೆಹಲಿಯಲ್ಲಿ ಭಾರತದ ಧ್ವಜವನ್ನು ಹಾರಿಸಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಸೇರಿದಂತೆ ಭಾರತಕ್ಕಾಗಿ ಪ್ರಾಣತೆತ್ತ ಸೈನಿಕರಿಗೂ ನಮನ ಸಲ್ಲಿಸುತ್ತಾರೆ. ಗಣರಾಜ್ಯೋತ್ಸವದ ಅಂಗವಾಗಿ ದೇಶದ ಸಾಧಕರಿಗೆ ದೇಶದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ:

Republic Day 2022: ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್​ ಶಾ

Published On - 9:43 am, Wed, 26 January 22

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ