ಜೀವಶಾಸ್ತ್ರಜ್ಞ ರುಡಾಲ್ಫ್ ವೀಗಲ್​ಗೆ ಗೂಗಲ್ ಡೂಡಲ್ ವಿಶೇಷ ಗೌರವ

Google Doodle: ಸಾಂಕ್ರಾಮಿಕ ಟೈಫಸ್ ವಿರುದ್ಧ ಲಸಿಕೆಯನ್ನು ಕಂಡು ಹಿಡಿದ ಹಾಗೂ ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಹಲವಾರು ಯಹೂದಿಗಳ ಜೀವ ಉಳಿಸಿದ ರುಡಾಲ್ಫ್ ವೀಗಲ್ ಅವರಿಗೆ ಗೂಗಲ್ ಗೌರವ ಸಲ್ಲಿಸಿದೆ.

ಜೀವಶಾಸ್ತ್ರಜ್ಞ ರುಡಾಲ್ಫ್ ವೀಗಲ್​ಗೆ ಗೂಗಲ್ ಡೂಡಲ್ ವಿಶೇಷ ಗೌರವ
Follow us
| Updated By: shruti hegde

Updated on: Sep 02, 2021 | 9:23 AM

ಇಂದು ಗೂಗಲ್ ತನ್ನ ಡೂಡಲ್​ನಲ್ಲಿ ಪೋಲಿಷ್ ಜೀವಾಸ್ತ್ರಜ್ಞ ರುಡಾಲ್ಫ್ ವೀಗಲ್ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಸಾಂಕ್ರಾಮಿಕ ಟೈಫಸ್ ವಿರುದ್ಧ ಲಸಿಕೆಯನ್ನು ಕಂಡು ಹಿಡಿದ ಹಾಗೂ ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಹಲವಾರು ಯಹೂದಿಗಳ ಜೀವ ಉಳಿಸಿದ ರುಡಾಲ್ಫ್ ವೀಗಲ್ ಅವರಿಗೆ ಗೂಗಲ್ ಗೌರವ ಸಲ್ಲಿಸಿದೆ. 138ನೇ ವರ್ಷದ ಜನ್ಮದಿನದ ಪ್ರಯುಕ್ತ ಗೂಗಲ್ ಈ ದಿನವನ್ನು ಆಚರಿಸುತ್ತಿದೆ. ಜೀವರಕ್ಷಕ ಔಷಧಿಗಳನ್ನು ಸೃಷ್ಟಿಸುತ್ತ, ಜೀವಶಾಸ್ತ್ರಜ್ಞ ಪ್ರಯೋಗಾಲಯದಲ್ಲಿ ಔಷಧಿಗಳನ್ನು ಕಂಡು ಹಿಡಿಯುತ್ತರುವ ವಿನ್ಯಾಸದೊಂದಿಗೆ ಡೂಡಲ್ ರಚಿಸಲಾಗಿದೆ.

ರುಡಾಲ್ಫ್ ಸ್ಟೀಫನ್ ವೀಗಲ್ 1883ರಲ್ಲಿ ಜನಸಿದರು. 1907ರಲ್ಲಿ ಪೋಲಂಡ್​ನ ಲೌ ವಿಶ್ವವಿದ್ಯಾಲಯದಲ್ಲಿ ಜೈವಿಕ ವಿಜ್ಞಾನದಲ್ಲಿ ಪದವಿಯನ್ನು ಪಡೆದರು. ಮಾತ್ರವಲ್ಲದೇ ಪ್ರಾಣಿ ಶಾಸ್ತ್ರ ಮತ್ತು ಅಂಗರಚನಾ ಶಾಸ್ತ್ರದಲ್ಲಿ ಪದವಿ ಪಡೆದರು.

ಮೊದಲನೆಯ ಮಹಾಯುದ್ಧದ ಸಮಯದಲ್ಲಿ ಟೈಫಸ್ ಸಾಂಕ್ರಾಮಿಕದಿಂದಾಗಿ ಯುರೋಪ್ ಜನರು ನರಳುತ್ತಿದ್ದರು. ಈ ಸಾಂಕ್ರಾಮಿಕದ ತೀವ್ರ ಹರಡುವಿಕೆಯಿಂದ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡರು. ಹೀಗಾಗಿ ವೀಗೆಲ್ ಈ ಕುರಿತಾಗಿ ಸಂಶೋಧನೆಗೆ ಮುಂದಾದರು. ಜತೆಗೆ ಟೈಫಸ್ ವಿರುದ್ಧ ಲಸಿಕೆಯನ್ನು ಕಂಡು ಹಿಡಿದ ಮೊದಲ ವಿಜ್ಞಾನಿ ಎಂಬ ಹೆಸರಿಗೆ ಪಾತ್ರರಾದರು.

1933ರ ಸಮಯದಲ್ಲಿ ಈ ಲಸಿಕೆ ಪರೀಕ್ಷೆಗಳನ್ನು ನಡೆಸಿ ಸುಮಾರು 5000ಕ್ಕೂ ಹೆಚ್ಚು ಯಹೂದಿಗಳ ಪ್ರಾಣ ಉಳಿಸಿತು. ಲಸಿಕೆ ಕಂಡುಹಿಡಿದಿದ್ದರಿಂದ ಹಾಗೂ ಅವರ ಮಾನವೀಯ ಕಾರ್ಯಗಳನ್ನು ಮೆಚ್ಚಿ ನೊಬೆಲ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡರು. ಹಸ್ತಕ್ಷೇಪದಿಂದಾಗಿ ಎರಡು ಬಾರಿ ಪ್ರಶಸ್ತಿಯನ್ನು ಸ್ವೀಕರಿಸಲಾಗಲಿಲ್ಲ. 1957ರಲ್ಲಿ ತಮ್ಮ ಕೊನೆಯುಸಿರು ಬಿಟ್ಟರು. ಬಳಿಕ 2003ರಲ್ಲಿ ಇಸ್ರೆಲ್ ಅವರಿಗೆ ರಾಷ್ಟ್ರಗಳಲ್ಲಿ ನೀತಿವಂತ ಎಂಬ ಬಿರುದು ನೀಡಿ ಗೌರವಿಸಿತು.

ಇದನ್ನೂ ಓದಿ:

Happy father’s day 2021: ಅಪ್ಪಂದಿರ ದಿನಾಚರಣೆಗೆ​ ಡೂಡಲ್​ ಮೂಲಕ ಶುಭ ಹಾರೈಸಿದ ಗೂಗಲ್​

Mother’s Day 2021: ಅಮ್ಮಂದಿರ ದಿನಕ್ಕೆ ಗೂಗಲ್ ಡೂಡಲ್​ ಗೌರವ; ನೀವ್ಯಾಕೆ ತಡ ಮಾಡುತ್ತೀರಿ ನಿಮ್ಮ ತಾಯಿಗೊಂದು ಸ್ಪೆಶಲ್​ ವಿಶ್ ಮಾಡಿ 

(Google honors polish biologist Rudolf weigl)

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್