AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News : ಶ್ರೀರಾಮನು ಶ್ರೀಲಂಕಾದಿಂದ ಅಯೋಧ್ಯೆಗೆ ತೆರಳಲು ತೆಗೆದುಕೊಂಡದ್ದು 21 ದಿನಗಳಂತೆ, ವೈರಲ್ ಆಯ್ತು ಟ್ವೀಟ್

ರಾಮ ಮತ್ತು ರಾಮಾಯಣದ ಬಗ್ಗೆ ಎಲ್ಲರಿಗೂ ಕೂಡ ತಿಳಿದಿದೆ. ಮಕ್ಕಳಿರುವಾಗಲೇ ಶ್ರೀರಾಮ ಹಾಗೂ ರಾಮಾಯಣದ ಕಥೆಗಳನ್ನು ಕೇಳಿಯೇ ಬೆಳೆದಿರುತ್ತೇವೆ. ಆದರೆ ಇದೀಗ ಶ್ರೀರಾಮನಿಗೆ ಸಂಬಂಧಪಟ್ಟ ವಿಚಾರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಶ್ರೀಲಂಕಾದಿಂದ ಶ್ರೀರಾಮನು ಅಯೋಧ್ಯೆಗೆ ತೆರಳಲು 21 ದಿನಗಳ ಕಾಲ ಪ್ರಯಾಣ ಬೆಳೆಸಿದ್ದಾನೆ ಎಂದು ಗೂಗಲ್ ಮ್ಯಾಪ್ ಹೇಳುತ್ತಿದೆ. ಈ ಟ್ವೀಟ್ ವೈರಲ್ ಆಗುತ್ತಿದ್ದಂತೆ ಇದು ನಿಜಾನಾ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

Viral News : ಶ್ರೀರಾಮನು ಶ್ರೀಲಂಕಾದಿಂದ ಅಯೋಧ್ಯೆಗೆ ತೆರಳಲು ತೆಗೆದುಕೊಂಡದ್ದು 21 ದಿನಗಳಂತೆ, ವೈರಲ್ ಆಯ್ತು ಟ್ವೀಟ್
ವೈರಲ್​​ ಪೋಸ್ಟ್​
ಸಾಯಿನಂದಾ
| Edited By: |

Updated on: Oct 14, 2024 | 2:14 PM

Share

ರಾಮಾಯಣವು ಹಿಂದೂಗಳ ಪ್ರಮುಖ ಧರ್ಮಗ್ರಂಥವಾಗಿದ್ದು, ಇದರಲ್ಲಿ ಬರುವ ಕಥೆಗಳ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಶ್ರೀರಾಮ ಹಾಗೂ ರಾಮಾಯಣವು ಭಕ್ತರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ ಈಗಾಗಲೇ ಶ್ರೀರಾಮನು ಮರ್ಯಾದಾ ಪುರುಷೋತ್ತಮ ಎನ್ನುವ ಬಿರುದನ್ನು ಪಡೆದುಕೊಂಡಿದ್ದು, ಆತನನ್ನು ಆದರ್ಶವಾಗಿ ಅನೇಕರು ತೆಗೆದುಕೊಂಡಿದ್ದಾರೆ. ಆದರೆ ಇದೀಗ ಶ್ರೀಲಂಕಾದಿಂದ ಶ್ರೀರಾಮನು ಅಯೋಧ್ಯೆಗೆ ತೆರಳಲು 21 ದಿನಗಳ ಕಾಲ ಪ್ರಯಾಣ ಬೆಳೆಸಿದ್ದಾನೆ ಎನ್ನುವ ಟ್ವೀಟ್ ವೊಂದು ವೈರಲ್ ಆಗಿದೆ.

ಶ್ರೀಲಂಕಾದಿಂದ ಅಯೋಧ್ಯೆಗೆ ತೆರಳಲು 21 ದಿನಗಳು ಮತ್ತು 10 ಗಂಟೆಗಳು ತೆಗೆದುಕೊಳ್ಳುತ್ತದೆ ಎಂದು ಗೂಗಲ್ ಮ್ಯಾಪ್ ಹೇಳುತ್ತಿದೆಯಂತೆ. ಮುಕುಲ್ ದೇಖಾನೆ ಹೆಸರಿನ ಖಾತೆಯಲ್ಲಿ ಗೂಗಲ್ ಮ್ಯಾಪ್ ಸ್ಕ್ರೀನ್ ಶಾರ್ಟ್ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋದೊಂದಿಗೆ ‘ದಸರಾ ನಂತರ 21 ದಿನಗಳ ನಂತರ ದೀಪಾವಳಿಯನ್ನು ಏಕೆ ಆಚರಿಸಲಾಗುತ್ತದೆ? ಶ್ರೀರಾಮ ಚಂದ್ರನು ಶ್ರೀಲಂಕಾದಿಂದ ಅಯೋಧ್ಯೆಗೆ ನಡೆಯಲು 21 ದಿನಗಳನ್ನು ತೆಗೆದುಕೊಂಡಿದ್ದು ನಿಜಾನ? ಅದನ್ನು ಗೂಗಲ್ ಮ್ಯಾಪ್‌ನಲ್ಲಿ ಪರಿಶೀಲಿಸಿದನ್ನು ಕಂಡು ನನಗೆ ಆಘಾತವಾಯಿತು. ಲಂಕೆಯಿಂದ ಅಯೋಧ್ಯೆಗೆ ವಾಪಸ್ಸಾಗಲು 21 ದಿನಗಳನ್ನು ತೆಗೆದುಕೊಂಡಿದ್ದಾರೆ ಎಂಬುದನ್ನು ನಾನು ಮೂಕನಾಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಏನ್ ತಲೆ ಗುರು ಇವನದ್ದು, ಹೀಗೂ ಬಟ್ಟೆ ಹೊಲಿಯಬಹುದಂತೆ

ವೈರಲ್​​​ ಎಕ್ಸ್​​​ ಪೋಸ್ಟ್​​;

ಈ ಟ್ವೀಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ನೆಟ್ಟಿಗರೊಬ್ಬರು, ‘ಇದು ದಸರಾ ಮತ್ತು ದೀಪಾವಳಿ ನಡುವಿನ 21 ದಿನಗಳ ಅಂತರಕ್ಕೆ ಹೊಂದಿಕೆಯಾಗುತ್ತಿದೆ’ ಎಂದಿದ್ದಾರೆ. ಮತ್ತೊಬ್ಬರು, ‘ದೀಪಾವಳಿ ಮತ್ತು ದಸರಾದ ಮಹತ್ವವನ್ನು ಎತ್ತಿ ತೋರಿಸಿದ್ದಾರೆ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ ಶ್ರೀರಾಮನ ಮಹಾಕಾವ್ಯದ ಪ್ರಯಾಣವನ್ನು ಅತೀಯಾಗಿ ಕೆಳ ಮಟ್ಟದಲ್ಲಿ ತೋರಿಸಲಾಗಿದೆ ಎಂದು ಟೀಕಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!
ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ
ಅಮೆರಿಕದ ಪನಾಮ ಸೇತುವೆ ಮೇಲೆ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ
ಅಮೆರಿಕದ ಪನಾಮ ಸೇತುವೆ ಮೇಲೆ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ