Tulu In Google Translator: ತುಳುವರಿಗೊಂದು ಸಂತಸದ ಸುದ್ದಿ; ಗೂಗಲ್‌ ಟ್ರಾನ್ಸ್‌ಲೇಟರ್‌ ಪಟ್ಟಿಗೆ ಸೇರಿದ ತುಳು ಭಾಷೆ

ಕ್ಷಣಾರ್ಧದಲ್ಲಿ ಯಾವುದೇ ಭಾಷೆಯ ಪದಗಳನ್ನು ಭಾಷಾಂತರಿಸಬಲ್ಲ ಗೂಗಲ್‌ ಟ್ರಾನ್ಸ್‌ಲೇಟರ್‌ಗೆ ಇದೀಗ ತುಳು ಭಾಷೆ ಕೂಡ ಸೇಪರ್ಡೆಯಾಗಿದ್ದು, ಈಗ ಗೂಗಲ್‌ ಅನುವಾದದಲ್ಲಿ ಕನ್ನಡ, ಇಂಗ್ಲೀಷ್‌ ಸೇರಿದಂತೆ ಯಾವುದೇ ಭಾಷೆಯ ಪದಗಳನ್ನು ತುಳುವಿಗೆ ಭಾಷಾಂತರಿಸಿಕೊಳ್ಳಬಹುದಾದ ಆಯ್ಕೆ ದೊರಕಿದೆ. ಈ ಒಂದು ಖುಷಿಯ ವಿಚಾರ ತುಳುವರಿಗೆ ಸಂತಸ ತಂದಿದೆ.

Tulu In Google Translator: ತುಳುವರಿಗೊಂದು ಸಂತಸದ ಸುದ್ದಿ; ಗೂಗಲ್‌ ಟ್ರಾನ್ಸ್‌ಲೇಟರ್‌ ಪಟ್ಟಿಗೆ ಸೇರಿದ ತುಳು ಭಾಷೆ
Follow us
| Updated By: ಅಕ್ಷತಾ ವರ್ಕಾಡಿ

Updated on:Jun 28, 2024 | 6:38 PM

ಟೆಕ್‌ ದೈತ್ಯ ಗೂಗಲ್‌ ತನ್ನ ಬಳಕೆದಾರರಿಗೆ ಮ್ಯಾಪ್‌, ಜಿಮೇಲ್‌, ಕ್ರೋಮ್‌, ಗೂಗಲ್‌ ಡ್ರೈವ್‌ನಂತಹ ಹಲವಾರು ಉಪಯುಕ್ತ ಅಪ್ಲಿಕೇಶನ್‌ಗಳನ್ನು ನೀಡುತ್ತಾ ಬಂದಿದೆ. ಅವುಗಳಲ್ಲಿ ಗೂಗಗ್‌ ಟ್ರಾನ್ಸ್‌ಲೇಟರ್‌ ಪ್ರಪಂಚದಾದ್ಯಂತ ಬಹಳಷ್ಟು ಜನಪ್ರಿಯವಾಗಿದೆ. ಇದಕ್ಕೆ ಕಾರಣವೆಂದರೆ ಇದು ಹೊಂದಿರುವ ಅತ್ಯುತ್ತಮ ಭಾಷಾ ಅನುವಾದ ವೈಶಿಷ್ಟ್ಯಗಳು. ಗೂಗಲ್‌ ಟ್ರಾನ್ಸ್‌ಲೇಟರ್‌ನಲ್ಲಿ ಇಲ್ಲಿಯವರೆಗೆ ಕನ್ನಡ, ಹಿಂದಿ, ತೆಲುಗು ಸೇರಿದಂತೆ ಭಾರತದ ಪ್ರಮುಖ ಭಾಷೆಗಳ ಭಾಷಾಂತರ ಸೌಲಭ್ಯ ಮಾತ್ರ ಲಭ್ಯವಿತ್ತು. ಇದೀಗ ಗೂಗಲ್‌ ಅನುವಾದ ಪಟ್ಟಿಗೆ ತುಳು ಭಾಷೆಯೂ ಕೂಡಾ ಸೇರ್ಪಡೆಯಾಗಿದ್ದು, ಈ ಮೂಲಕ ಟೆಕ್‌ ದೈತ್ಯ ಗೂಗಲ್‌ನಲ್ಲಿ ತುಳುವಿಗೂ ಗೌರವ ಸಿಕ್ಕಂತಾಗಿದೆ. ಈ ವಿಚಾರ ತುಳುವರಿಗೆ ಸಂತಸವನ್ನು ತಂದಿದೆ.

ಗೂಗಲ್‌ ಅನುವಾದ ಪಟ್ಟಿಯಲ್ಲಿ ತುಳು ಭಾಷೆಗೂ ಮಾನ್ಯತೆ ಸಿಕ್ಕಿದ್ದು, ಇದು ತುಳು ಭಾಷಾ ಪ್ರೇಮಿಗಳಲ್ಲಿ ಸಂತಸವನ್ನು ತಂದಿದೆ. ಇನ್ನು ಮುಂದೆ ತುಳು ಭಾಷಿಗರು ಇಂಗ್ಲೀಷ್‌ ಅಥವಾ ಇನ್ನಾವುದೇ ಪದಗಳನ್ನು ಗೂಗಲ್‌ ಟ್ರಾನ್ಸ್‌ಲೇಟರ್‌ನಲ್ಲಿ ನೇರವಾಗಿ ತುಳುವಿನಲ್ಲಿಯೇ ಅರ್ಥೈಸಿಕೊಳ್ಳಬಹುದು. ಅಲ್ಲದೆ ಇದು ಅನ್ಯ ಭಾಷಿಗರಿಗೆ ತುಳು ಪದಗಳನ್ನು ಅರ್ಥೈಸಿಕೊಳ್ಳುವುದಕ್ಕೂ ಅನುಕೂಲಕರವಾಗಿದೆ.

ಇದನ್ನೂ ಓದಿ: Jio New Plan: ಜಿಯೋ ಗ್ರಾಹಕರಿಗೆ ಬಿಗ್ ಶಾಕ್‌..ರಿಚಾರ್ಜ್ ದರ ಭಾರೀ ಏರಿಕೆ: ಯಾವ ಪ್ಲ್ಯಾನ್​ಗೆ ಎಷ್ಟು? ಇಲ್ಲಿದೆ ವಿವರ

ಈ ಕುರಿತ ಪೋಸ್ಟ್‌ ಒಂದನ್ನು @trollbogra ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಗೂಗಲ್‌ ಟ್ರಾನ್ಸ್‌ಲೇಟರ್‌ಗೂ ಬಂದ ತುಳು ಭಾಷೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗಿರುವ ಈ ಪೋಸ್ಟ್‌ ಅಲ್ಲಿ ಗೂಗಲ್‌ ಟ್ರಾನ್ಸ್‌ಲೇಟರ್‌ನಲ್ಲಿ ಹೌ ಆರ್‌ ಯು (ಹೇಗಿದ್ದೀರಾ) ಎಂಬ ಪದವನ್ನು ಯೀರ್‌ ಎಂಚ ಉಲ್ಲರ್‌ ಎಂದು ತುಳು ಭಾಷೆಗೆ ಟ್ರಾನ್ಸ್‌ಲೇಟ್‌ ಮಾಡಿರುವ ದೃಶ್ಯವನ್ನು ಕಾಣಬಹುದು.

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ಪೋಸ್ಟ್‌ 3 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಒಂದು ಖುಷಿಯ ವಿಚಾರ ತುಳುವರಿಗೆ ಸಂತಸವನ್ನು ತಂದಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Fri, 28 June 24

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು