AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪಂಚೆ ತೊಟ್ಟು ದೇಸಿ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ

ಲುಂಗಿ ನಮ್ಮ ಸಾಂಪ್ರದಾಯಿಕ ಉಡುಗೆಗಳಲ್ಲಿ ಒಂದು. ಇಂದಿಗೂ ಗ್ರಾಮೀಣ ಭಾಗದಲ್ಲಿನ ಪುರುಷರು ಮನೆಗಳಲ್ಲಿ ಅಥವಾ ಊರಿನಲ್ಲಿ ಸುತ್ತಾಡುವಾಗ ಲುಂಗಿಯನ್ನೇ ಸುತ್ತಿಕೊಳ್ಳುತ್ತಾರೆ. ಅದೇ ರೀತಿ ಇದೀಗ ಬ್ರಿಟಿಷ್ ಬಾಣಸಿಗರೊಬ್ಬರು ಪಂಚೆ ತೊಟ್ಟು ದಕ್ಷಿಣ ಭಾರತೀಯ ಶೈಲಿಯ ಅಡುಗೆ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.

Viral: ಪಂಚೆ ತೊಟ್ಟು ದೇಸಿ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ
ಮಾಲಾಶ್ರೀ ಅಂಚನ್​
| Edited By: |

Updated on: Sep 22, 2024 | 4:33 PM

Share

ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ಹೊಸ ಹೊಸ ಅವತಾರದಲ್ಲಿ ಅಡುಗೆಗಳನ್ನು ಮಾಡುವ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದಾರೆ. ಇದೀಗ ಅವರು ಸ್ಟೈಲ್ ಆಗಿ ಪಂಚೆ ತೊಟ್ಟು ದಕ್ಷಿಣ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು, ಈ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

‘ಹೆಲ್ಸ್ ಕಿಚನ್’ ಮತ್ತು ‘ಮಾಸ್ಟರ್ ಚೆಫ್’ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕರಾದ ಗಾರ್ಡನ್ ರಾಮ್ಸೆ. ತಮ್ಮ ವಿನೂತನ ಅಡುಗೆಗಳಿಂದಲೇ ಗಮನ ಸೆಳೆದ ಇವರು ಇದೀಗ ದೇಸಿ ಸ್ಟೈಲ್ ಪಂಚೆ ತೊಟ್ಟು ಭಾರತೀಯ ಶೈಲಿಯ ಅಡುಗೆ ಮಾಡಿದ್ದಾರೆ. ಈ ಕುರಿತ ವಿಡಿಯೋವನ್ನು historyinmemes ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ಪಂಚೆ ತೊಟ್ಟು ದಕ್ಷಿಣ ಭಾರತೀಯ ಶೈಲಿಯ ಅಡುಗೆ ಮಾಡುವ ದೃಶ್ಯ ಕಾಣಬಹುದು.

ಇದನ್ನೂ ಓದಿ: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ

ಸೆಪ್ಟೆಂಬರ್ 20 ರಂದು ಹಂಚಿಕೊಳ್ಳಲಾದ ಈ ವಿಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಭಾರತೀಯ ಸಂಸ್ಕೃತಿ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಗಾರ್ಡನ್ ರಾಮ್ಸೆ ಅವರು ವಿಭಿನ್ನ ಸಂಸ್ಕೃತಿಗಳನ್ನು ಸ್ವೀಕರಿಸುವುದನ್ನು ನೋಡುವುದೇ ಒಂದು ಚಂದ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್